ಯಾಜಕನು ಅವುಗಳನ್ನು ಆಡಿಸುವ ಅರ್ಪಣೆಗಾಗಿ ಕರ್ತನ ಎದುರಿ ನಲ್ಲಿ ಆಡಿಸಬೇಕು. ಆಡಿಸುವ ಎದೆಯ ಸಂಗಡಲೂ ಎತ್ತುವ ಮುಂದೊಡೆಯ ಸಂಗಡಲೂ ಅದು ಯಾಜಕ ನಿಗೆ ಪರಿಶುದ್ಧವಾಗಿದೆ. ಆ ಮೇಲೆ ನಾಜೀರನು ದ್ರಾಕ್ಷಾ ರಸವನ್ನು ಕುಡಿಯಬಹುದು.
Cross references
ನೀನು ಟಗರಿನ ಎದೆಯ ಭಾಗದ ಆಡಿಸುವ ಅರ್ಪಣೆಯನ್ನು ಎತ್ತಿದ ಬಲದ ಮುಂದೊ ಡೆಯನ್ನು ಆರೋನನ ಮತ್ತು ಅವನ ಕುಮಾರರ ಪ್ರತಿಷ್ಠೆಗಾಗಿ ಎತ್ತಿದ್ದನ್ನೂ ಪರಿಶುದ್ಧ ಮಾಡು.
ಅದು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲ್ ಮಕ್ಕಳಿಗೆ ನಿತ್ಯ ಕಟ್ಟಳೆಯಾಗಿರತಕ್ಕದ್ದು. ಯಾಕಂದರೆ ಅದು ಎತ್ತುವ ಅರ್ಪಣೆಯಾಗಿದೆ. ಇಸ್ರಾಯೇಲ್ ಮಕ್ಕಳಿಂದ ಎತ್ತುವ ಅರ್ಪಣೆಯೂ ಅವರ ಸಮಾ ಧಾನದ ಬಲಿಗಳ ಅರ್ಪಣೆಗಳಿಂದ ಅವರು ಕರ್ತನಿಗೆ ಎತ್ತುವ ಅರ್ಪಣೆಯೂ ಆಗಿರಬೇಕು.
ಯಾಜಕನು ಆ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು; ಆದರೆ ಎದೆಯು ಆರೋನನ ಮತ್ತು ಅವನ ಮಕ್ಕಳದ್ದಾಗಿರುವದು.
ಬಲಭುಜವನ್ನು ನೀವು ಯಾಜಕನಿಗೆ ನಿಮ್ಮ ಸಮಾಧಾನದ ಯಜ್ಞಗಳ ಎತ್ತುವ ಸಮರ್ಪಣೆಗಾಗಿ ಕೊಡಬೇಕು.
ಆಡಿಸುವ ಎದೆಭಾಗವನ್ನು ಪ್ರತ್ಯೇಕವಾದ ಭುಜ ಭಾಗವನ್ನು ಇಸ್ರಾಯೇಲಿನ ಮಕ್ಕಳ ಸಮಾಧಾನದ ಸಮರ್ಪಣೆಗಳ ಯಜ್ಞಗಳಿಂದ ನಾನು ತೆಗೆದುಕೊಂಡು ಆರೋನನಿಗೂ ಅವನ ಕುಮಾರರಿಗೂ ಇಸ್ರಾಯೇಲಿನ ಮಕ್ಕಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿ ಕೊಟ್ಟಿ ದ್ದೇನೆ.
ಮೋಶೆಯು ಆಜ್ಞಾಪಿಸಿ ದಂತೆ ಆರೋನನು ಎದೆಯ ಭಾಗಗಳನ್ನು ಬಲಭುಜ ವನ್ನು ಆಡಿಸಿ ಕರ್ತನ ಮುಂದೆ ಸಮರ್ಪಣೆಗಾಗಿ ಆಡಿಸಿದನು.
ಅವರು ಪ್ರತ್ಯೇ ಕಿಸಿದ ಭುಜವನ್ನೂ ಆಡಿಸುವ ಎದೆಯ ಭಾಗವನ್ನೂ ಬೆಂಕಿಯಿಂದ ಮಾಡಿದ ಕೊಬ್ಬಿನ ಸಮರ್ಪಣೆಗಳನ್ನೂ ಆಡಿಸುವದಕ್ಕೆ ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಯಾಗಿ ತರಬೇಕು; ಕರ್ತನು ಆಜ್ಞಾಪಿಸಿದ ಹಾಗೆ ಅದು ನಿನಗೂ ನಿನ್ನೊಂದಿಗೆ ನಿನ್ನ ಕುಮಾರರಿಗೂ ಸಲ್ಲತಕ್ಕದ್ದು; ಇದು ನಿತ್ಯ ಕಟ್ಟಳೆಯಾಗಿದೆ.
ಅದು ನಿಮಗೋಸ್ಕರ ಅಂಗೀಕಾರವಾಗುವಂತೆ ಅದನ್ನು ಕರ್ತನ ಸನ್ನಿಧಿಯಲ್ಲಿ ಆಡಿಸಬೇಕು; ಸಬ್ಬತ್ತಿನ ಮಾರನೆಯ ದಿನ ಯಾಜಕನು ಅದನ್ನು ಆಡಿಸಬೇಕು.
ಯಾಜಕನು ಆ ಸ್ತ್ರೀಯ ಕೈಯಿಂದ ರೋಷದ ಕಾಣಿಕೆಯನ್ನು ತಕ್ಕೊಂಡು ಆ ಕಾಣಿಕೆಯನ್ನು ಕರ್ತನ ಸಮ್ಮುಖದಲ್ಲಿ ಅಲ್ಲಾಡಿಸಿ ಬಲಿ ಪೀಠದ ಸವಿಾಪಕ್ಕೆ ತರಬೇಕು.
ಆಡಿಸುವ ಬಲಿಯ ಎದೆಯೂ ಬಲ ಭುಜವೂ ನಿನ್ನದಾಗಿರುವ ಪ್ರಕಾರ ಅವುಗಳ ಮಾಂಸವೂ ನಿನ್ನ ದಾಗಿರಬೇಕು.
ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ನೀನು ಹೋಗಿ ಸಂತೋಷದಿಂದ ನಿನ್ನ ರೊಟ್ಟಿ ಯನ್ನು ತಿಂದು ಹರ್ಷಹೃದಯದಿಂದ ನಿನ್ನ ದ್ರಾಕ್ಷಾ ರಸವನ್ನು ಕುಡಿ; ದೇವರು ಈಗ ನಿನ್ನ ಕೆಲಸಗಳನ್ನು ಒಪ್ಪಿಕೊಳ್ಳುತ್ತಾನೆ.
ಸೈನ್ಯಗಳ ಕರ್ತನು ಈ ಪರ್ವತದಲ್ಲಿ ಎಲ್ಲಾ ಜನಗಳಿಗೆ ಸಾರವತ್ತಾದ (ಕೊಬ್ಬಿದ) ಔತಣವನ್ನೂ ಮಡ್ಡಿಗಟ್ಟಿದ ದ್ರಾಕ್ಷಾರಸದ ಔತಣವನ್ನೂ ಮೂಳೆ ಕೊಬ್ಬನ್ನೂ ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾ ರಸವನ್ನು ಸಿದ್ದಮಾಡುವನು.
ಕರ್ತನಿಂದ ವಿಮೋಚಿಸಲ್ಪಟ್ಟವರು ಹಿಂತಿರುಗಿಕೊಂಡು ತಮ್ಮ ತಲೆಗಳ ಮೇಲೆ ಉತ್ಸಾಹಧ್ವನಿ ನಿತ್ಯವಾದ ಸಂತೋಷಗಳೊಂದಿಗೆ ಚೀಯೋನಿಗೆ ಬರು ವರು; ಅವರು ಹರ್ಷಾನಂದಗಳನ್ನು ಅನುಭವಿಸು ವರು. ದುಃಖವೂ, ನಿಟ್ಟುಸಿರೂ ಓಡಿಹೋಗುವವು.
ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.
ಸೈನ್ಯಗಳ ಕರ್ತನು ಅವರನ್ನು ಕಾಪಾಡುವನು; ಅವರು ನುಂಗಿ ಕವಣೆ ಕಲ್ಲುಗಳನ್ನು ಸ್ವಾಧೀನಮಾಡಿ ಕೊಳ್ಳುವರು; ಕುಡಿದು ದ್ರಾಕ್ಷಾರಸದಿಂದಾದ ಹಾಗೆ ಓಲಾಡುವರು, ಪಾತ್ರೆಯ ಹಾಗೆಯೂ ಬಲಿಪೀಠದ ಮೂಲೆಗಳ ಹಾಗೆಯೂ ತುಂಬಿರುವರು.
ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
ಎಫ್ರಾಯಾಮಿನವರು ಶೂರನಂತೆ ಇರುವರು; ಅವರ ಹೃದಯವು ದ್ರಾಕ್ಷಾರಸದಿಂದಾದ ಹಾಗೆ ಸಂತೋಷಪಡುವದು; ಹೌದು, ಅವರ ಮಕ್ಕಳು ನೋಡಿ ಸಂತೋಷಿಸುವರು; ಅವರ ಹೃದಯವು ಕರ್ತ ನಲ್ಲಿ ಉಲ್ಲಾಸಪಡುವದು.
ಮತ್ತು ನಾನು ನಿಮಗೆ ಹೇಳುವದೇನಂದರೆ--ಇಂದಿನಿಂದ ನನ್ನ ತಂದೆಯ ರಾಜ್ಯದಲ್ಲಿ ನಿಮ್ಮೊಂದಿಗೆ ಹೊಸದಾಗಿ ಕುಡಿಯುವ ಆ ದಿನದವರೆಗೆ ನಾನು ಈ ದ್ರಾಕ್ಷಾರಸ ವನ್ನು ಕುಡಿಯುವದೇ ಇಲ್ಲ ಎಂದು ಹೇಳಿದನು.
ಇದಲ್ಲದೆ ನಾನು ದೇವರ ರಾಜ್ಯದಲ್ಲಿ ಇದನ್ನು ಹೊಸದಾಗಿ ಕುಡಿಯುವ ಆ ದಿನದ ವರೆಗೆ ಇನ್ನು ಮೇಲೆ ದ್ರಾಕ್ಷಾರಸವನ್ನು ನಾನು ಕುಡಿಯುವದೇ ಇಲ್ಲವೆಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;
ಯೇಸು ಆ ಹುಳಿರಸವನ್ನು ತಕ್ಕೊಂಡ ಮೇಲೆ--ತೀರಿತು ಎಂದು ಹೇಳಿ ತನ್ನ ತಲೆಯನ್ನು ಬಾಗಿಸಿ ಆತ್ಮವನ್ನು ಒಪ್ಪಿಸಿಕೊಟ್ಟನು.
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.