Cross references
ಪಟ್ಟಣದಲ್ಲಿ ನಿನಗೆ ಆಶೀರ್ವಾದ, ಹೊಲದಲ್ಲಿ ನಿನಗೆ ಆಶೀರ್ವಾದ,
ಇಗೋ, ಬೋವಜನು ಬೇತ್ಲೆಹೇಮಿನಿಂದ ಬಂದು ಕೊಯ್ಯುವವರಿಗೆ ಕರ್ತನು ನಿಮ್ಮ ಸಂಗಡ ಇರಲಿ ಅಂದನು. ಅದಕ್ಕೆ ಅವರು ಕರ್ತನು ನಿನ್ನನ್ನು ಆಶೀರ್ವ ದಿಸಲಿ ಅಂದರು.
ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.
ಕಣ್ಣುಗುಡ್ಡಿನ ಹಾಗೆ ನನ್ನನ್ನು ಕಾಪಾಡು.
ನಿನ್ನ ಜನ ರನ್ನು ರಕ್ಷಿಸು; ನಿನ್ನ ಸ್ವಾಸ್ಥ್ಯವನ್ನು ಆಶೀರ್ವದಿಸು; ಅವರನ್ನು ಪರಿಪಾಲಿಸುತ್ತಾ ಯುಗಯುಗಕ್ಕೂ ಅವ ರನ್ನು ಮೇಲಕ್ಕೆ ಎತ್ತು.
ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವದಕ್ಕೆ ಆತನು ತನ್ನ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವನು.
ಇಗೋ, ಇಸ್ರಾಯೇಲನ್ನು ಕಾಪಾಡುವಾತನು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ.
ಕರ್ತನು ಎಲ್ಲಾ ಕೇಡಿನಿಂದ ನಿನ್ನನೂ ನಿನ್ನ ಪ್ರಾಣವನ್ನೂ ಕಾಪಾಡುವನು.ಕರ್ತನು ನಿನ್ನ ಹೋಗೋಣವನ್ನೂ ಬರೋಣವನ್ನೂ ಇಂದಿನಿಂದ ಸದಾಕಾಲವೂ ಕಾಪಾಡುವನು.
ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ.
ಕರ್ತನಾದ ನಾನೇ ಅದನ್ನು ಕಾಯುತ್ತೇನೆ, ಕ್ಷಣ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; ಯಾರೂ ಅದಕ್ಕೆ ಕೇಡು ಮಾಡದ ಹಾಗೆ ರಾತ್ರಿ ಹಗಲು ಅದನ್ನು ಕಾಯುತ್ತೇನೆ.
ನೀನು ಕುರುಡರಿಗೆ ಕಣ್ಣುಗಳನ್ನು ತೆರೆದು, ಬಂದಿ ಗಳನ್ನು ಸೆರೆಯಿಂದಲೂ ಕತ್ತಲೆಯಲ್ಲಿ ವಾಸಿಸುವವ ರನ್ನು ಕಾರಾಗೃಹದಿಂದಲೂ ಹೊರಗೆ ತರಬೇಕು ಎಂದು --
ಇನ್ನು ಮೇಲೆ ನಾನು ಲೋಕದಲ್ಲಿ ಇರುವದಿಲ್ಲ; ಆದರೆ ಇವರು ಲೋಕದಲ್ಲಿದ್ದಾರೆ; ನಾನು ನಿನ್ನ ಬಳಿಗೆ ಬರುತ್ತೇನೆ. ಪರಿಶುದ್ಧನಾದ ತಂದೆಯೇ, ನಾವು ಒಂದಾಗಿರುವ ಹಾಗೆಯೇ ಅವರು ಸಹ ಒಂದಾಗಿರುವಂತೆ ನೀನು ನನಗೆ ಕೊಟ್ಟಿರುವವರನ್ನು ನಿನ್ನ ಸ್ವಂತ ಹೆಸರಿನಲ್ಲಿ ಕಾಪಾಡು.
ಇದಲ್ಲದೆ ನೀನು ಆತ್ಮದಿಂದ ಸ್ತೋತ್ರ ಮಾಡುವಾಗ ತಿಳುವಳಿಕೆ ಯಿಲ್ಲದವನು ನೀನು ಮಾಡುವ ಕೃತಜ್ಞತಾಸ್ತುತಿಯನ್ನು ತಿಳಿಯದೆ ಇರುವದರಿಂದ ನೀನು ಹೇಳುವದಕ್ಕೆ ಆಮೆನ್ ಎಂದು ಹೇಳುವದು ಹೇಗೆ?
ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ಅಂತ್ಯ ಕಾಲದಲ್ಲಿ ಪ್ರಕಟವಾಗುವದಕ್ಕೆ ಸಿದ್ಧವಾಗಿರುವ ರಕ್ಷಣೆಗೆ ನಂಬಿಕೆಯ ಮುಖಾಂತರ ದೇವರು ನಿಮ್ಮನ್ನು ತನ್ನ ಬಲದಿಂದ ಕಾಯುತ್ತಾನೆ.
ಎಡವಿಬೀಳದಂತೆ ನಿಮ್ಮನ್ನು ಕಾಪಾಡುವದಕ್ಕೂ ತನ್ನ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ನಿರ್ದೋಷಿ ಗಳನ್ನಾಗಿ ಅತ್ಯಂತ ಹರ್ಷದೊಡನೆ ನಿಲ್ಲಿಸುವದಕ್ಕೂ ಶಕ್ತನಾಗಿರುವಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ