ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--
Cross references
ದೇವರು ಏಳನೆಯ ದಿನವನ್ನು ಆಶೀರ್ವದಿಸಿ ಅದನ್ನು ಪವಿತ್ರಮಾಡಿದನು; ಯಾಕಂ ದರೆ ಆ ದಿನದಲ್ಲಿ ತಾನು ಸೃಷ್ಟಿಸಿದ ಮತ್ತು ಮಾಡಿದ ತನ್ನ ಎಲ್ಲಾ ಕೆಲಸದಿಂದ ವಿಶ್ರಮಿಸಿಕೊಂಡನು.
ಇಸ್ರಾಯೇಲ್ ಮಕ್ಕಳಲ್ಲಿ ಗಂಡಸರಲ್ಲಿಯೂ ಪಶುಗಳಲ್ಲಿಯೂ ಗರ್ಭ ತೆರೆಯುವ ಚೊಚ್ಚಲಾದದ್ದನ್ನೆಲ್ಲಾ ನನಗಾಗಿ ಪರಿಶುದ್ಧ ಮಾಡು; ಅದು ನನ್ನದೇ ಅಂದನು.
ಪಾಪದ ಯಜ್ಞವಾದ ಹೋರಿಯನ್ನು ಪ್ರತಿದಿನ ಪ್ರಾಯಶ್ಚಿತ್ತಕ್ಕಾಗಿ ತಂದು ಯಜ್ಞವೇದಿಗಾಗಿ ಪ್ರಾಯ ಶ್ಚಿತ್ತ ಮಾಡಿದ ಮೇಲೆ ಅದರ ದೋಷವನ್ನು ಪರಿ ಹರಿಸಿ ಅದನ್ನು ಪವಿತ್ರಮಾಡುವದಕ್ಕೆ ಅದನ್ನು ಅಭಿಷೇಕಿಸಬೇಕು.
ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
ಅವು ಅತಿಪರಿಶುದ್ಧವಾಗುವಂತೆ ಅವುಗಳನ್ನು ಶುದ್ಧಮಾಡು. ಅವುಗಳನ್ನು ಮುಟ್ಟುವದೆಲ್ಲವೂ ಪರಿಶುದ್ಧವಾಗಿರ ಬೇಕು.
ನೀನು ಅಭಿಷೇಕ ತೈಲವನ್ನು ತಕ್ಕೊಂಡು ಗುಡಾರ ವನ್ನೂ ಅದರಲ್ಲಿರುವ ಎಲ್ಲವುಗಳನ್ನೂ ಅಭಿಷೇಕಿಸಿ ಅದನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಪರಿಶುದ್ಧ ಮಾಡು; ಆಗ ಅದು ಪರಿಶುದ್ಧವಾಗುವದು.
ಗಂಗಾಳವನ್ನೂ ಅದರ ಕಾಲುಗಳನ್ನೂ ನೀನು ಅಭಿಷೇಕಿಸಿ ಅದನ್ನು ಪರಿಶುದ್ಧ ಮಾಡಬೇಕು.
ಎರಡನೆಯ ವರುಷದ ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಗುಡಾರವು ನಿಲ್ಲಿಸಲ್ಪಟ್ಟಿತು.
ಮೋಶೆಯು ಅಭಿಷೇಕ ತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರೊಳಗಿರುವದೆಲ್ಲವನ್ನೂ ಅಭಿಷೇ ಕಿಸಿ ಪವಿತ್ರಮಾಡಿದನು.
ಎಂಟನೆಯ ದಿನದಲ್ಲಿ ಆದದ್ದೇನಂದರೆ, ಮೋಶೆಯು ಆರೋನನನ್ನೂ ಅವನ ಕುಮಾರರನ್ನೂ ಇಸ್ರಾಯೇಲಿನ ಹಿರಿಯರನ್ನೂ ಕರೆ ದನು;
ಇದು ಬಲಿಪೀಠದ ಪ್ರತಿಷ್ಠೆಯು: ಅದನ್ನು ಅಭಿಷೇಕ ಮಾಡಿದ ದಿನದಲ್ಲಿ ಇಸ್ರಾಯೇಲಿನ ಪ್ರಧಾನರು ಅರ್ಪಿಸಿದ್ದು ಬೆಳ್ಳಿಯ ಹನ್ನೆರಡು ತಟ್ಟೆಗಳೂ ಬೆಳ್ಳಿಯ ಹನ್ನೆರಡು ಬಟ್ಟಲುಗಳೂ ಬಂಗಾರದ ಹನ್ನೆರಡು ಚಮಚಗಳೂ.
ಸಮಾಧಾನದ ಅರ್ಪಣೆಯ ಬಲಿಗಾಗಿರುವ ಎತ್ತುಗಳೆಲ್ಲಾ ಇಪ್ಪತ್ತನಾಲ್ಕು, ಟಗರುಗಳು ಅರವತ್ತು, ಹೋತಗಳು ಅರವತ್ತು, ಮೊದಲನೇ ವರುಷದ ಕುರಿಮರಿಗಳು ಅರವತ್ತು. ಅದನ್ನು ಅಭಿಷೇಕಿಸಿದ ತರು ವಾಯ ಬಲಿಪೀಠಕ್ಕೆ ಮಾಡಿದ ಪ್ರತಿಷ್ಠೆಯು ಇದಾಗಿತ್ತು ಎಂಬದೇ.ಇದಲ್ಲದೆ ಮೋಶೆಯು ದೇವರ ಸಂಗಡ ಮಾತನಾಡುವದಕ್ಕೆ ಸಭೆಯ ಗುಡಾರದೊಳಗೆ ಪ್ರವೇಶಿ ಸಿದಾಗ ಅವನು ಸಾಕ್ಷಿಯ ಮಂಜೂಷದ ಮೇಲೆ ಇರುವ ಕೃಪಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವವನ ಧ್ವನಿ ಯನ್ನು ಕೇಳಿದನು. ಹೀಗೆ ಆತನು ಅವನ ಸಂಗಡ ಮಾತನಾಡಿದನು.
ನೀನು ಇಸ್ರಾಯೇಲ್ ಮಕ್ಕಳ ಸಂಗಡ ಮಾತನಾಡಿ ಅವರಿಂದ ಅವರ ಪಿತೃಗಳ ಮನೆಯ ಪ್ರಕಾರ, ಅವರ ಪ್ರಧಾನರೆಲ್ಲರ ಪಿತೃಗಳ ಮನೆಯ ಪ್ರಕಾರ, ಒಂದೊಂದು ಕೋಲನ್ನಾಗಿ ಹನ್ನೆರಡು ಕೋಲುಗಳನ್ನು ತಕ್ಕೊಂಡು ಒಬ್ಬೊಬ್ಬನ ಹೆಸರನ್ನು ಅವನವನ ಕೋಲಿನ ಮೇಲೆ ಬರೆ.
ಅದೇ ದಿನದಲ್ಲಿ ಅರಸನು ಕರ್ತನ ಮನೆಯ ಮಧ್ಯ ಅಂಗಳವನ್ನು ಪರಿಶುದ್ಧ ಮಾಡಿದನು. ಕರ್ತನ ಮುಂದಿರುವ ತಾಮ್ರದ ಬಲಿ ಪೀಠದ ಮೇಲೆ ದಹನ ಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಇಡುವದಕ್ಕೆ ಸ್ಥಳ ಸಾಲದೆ ಇದ್ದದರಿಂದ ಅಲ್ಲಿ ದಹನಬಲಿಗಳನ್ನೂ ಕಾಣಿಕೆಗಳನ್ನೂ ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
ಮೂರ್ಖರೇ, ಕುರುಡರೇ, ಯಾವದು ದೊಡ್ಡದು? ಕಾಣಿಕೆಯೋ ಇಲ್ಲವೆ ಕಾಣಿಕೆಯನ್ನು ಪಾವನಮಾಡುವ ಯಜ್ಞವೇದಿಯೋ?