Home Bibles ಅಂಕೆಗಳ ಪುಸ್ತಕ 7:15 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 7:15 · ಕನ್ನಡ ಬೈಬಲ್

ದಹನಬಲಿಗಾಗಿ ಒಂದು ಎಳೇ ಹೋರಿ, ಒಂದು ಟಗರು, ಮೊದಲನೇ ವರುಷದ ಒಂದು ಕುರಿಮರಿ.

Cross references

ಲೇವ್ಯಕಾಂಡ 1:1

ಕರ್ತನು ಮೋಶೆಯನ್ನು ಕರೆದು ಸಭೆಯಗುಡಾರದೊಳಗಿಂದ ಅವನೊಂದಿಗೆ ಮಾತನಾಡಿ ಹೇಳಿದ್ದೇನಂದರೆ--

ಲೇವ್ಯಕಾಂಡ 1:2

ಇಸ್ರಾಯೇಲ್‌ ಮಕ್ಕ ಳೊಂದಿಗೆ ಮಾತನಾಡಿ ಅವರಿಗೆ--ನಿಮ್ಮಲ್ಲಿ ಯಾವನಾ ದರೂ ಕರ್ತನಿಗೆ ಕಾಣಿಕೆಯನ್ನು ತರುವದಾದರೆ ನೀವು ನಿಮ್ಮ ಯಜ್ಞಗಳನ್ನು ಪಶುಗಳಿಂದಲೂ ಹಿಂಡು ಗಳಿಂದಲೂ ಮಂದೆಗಳಿಂದಲೂ ತರಬೇಕು.

ಅಂಕೆಗಳ ಪುಸ್ತಕ 25:1

ಆಗ ಇಸ್ರಾಯೇಲ್ಯರು ಶಿಟ್ಟೀಮಿನಲ್ಲಿ ವಾಸವಾಗಿದ್ದಾಗ ಜನರು ಮೋವಾಬಿನ ಕುಮಾರ್ತೆಯರ ಸಂಗಡ ಜಾರತ್ವ ಮಾಡಲಾರಂಭಿ ಸಿದರು.

ಅಂಕೆಗಳ ಪುಸ್ತಕ 28:1

ಕರ್ತನು ಮೋಶೆಯ ಸಂಗಡ ಮಾತ ನಾಡಿ--

ಯೆಶಾಯ 53:4

ನಿಶ್ಚಯವಾಗಿಯೂ ಆತನು ನಮ್ಮ ಸಂಕಟಗಳನ್ನು ಸಹಿಸಿಕೊಂಡು ನಮ್ಮ ದುಃಖಗಳನ್ನು ಹೊತ್ತನು; ಆದರೂ ನಾವು ಆತನನ್ನು ಪೆಟ್ಟು ತಿಂದವನು, ದೇವರಿಂದ ಹೊಡೆಯಲ್ಪಟ್ಟವನು, (ಶಿಕ್ಷಿಸಲ್ಪಟ್ಟವನು) ಹಿಂಸಿಸಲ್ಪಟ್ಟವನು ಎಂದು ಭಾವಿಸಿ ಕೊಂಡೆವು.

ಯೆಶಾಯ 53:10

ಆದಾಗ್ಯೂ ಆತನನ್ನು ಜಜ್ಜುವದು ಕರ್ತನಿಗೆ ಮೆಚ್ಚಿಕೆ ಯಾಗಿತ್ತು. ಆತನು (ದೇವರು) ಆತನನ್ನು ಸಂಕಟಕ್ಕೆ ಒಳಪಡಿಸಿದನು; ನೀನು ಆತನ ಪ್ರಾಣವನ್ನು ಪಾಪ ಕ್ಕೋಸ್ಕರ ಬಲಿಯನ್ನಾಗಿ ಮಾಡುವಾಗ ಆತನು ತನ್ನ ಸಂತಾನವನ್ನು ನೋಡುವನು. ಆತನು ತನ್ನ ದಿವಸ ಗಳನ್ನು ಹೆಚ್ಚಿಸುವನು, ಕರ್ತನ ಸಂತೋಷವು ಆತನ ಕೈಯಲ್ಲಿ ಸಫಲವಾಗುವದು.

ಮತ್ತಾಯ 20:28

ಮನುಷ್ಯ ಕುಮಾರನು ಸಹ ಸೇವೆ ಮಾಡಿಸಿಕೊಳ್ಳುವದಕ್ಕಾಗಿ ಅಲ್ಲ, ಸೇವೆ ಮಾಡುವದಕ್ಕಾಗಿಯೂ ಅನೇಕರಿಗಾಗಿ ತನ್ನ ಪ್ರಾಣವನ್ನು ಈಡುಕೊಡುವದಕ್ಕಾಗಿಯೂ ಬಂದನು ಎಂದು ಹೇಳಿದನು.

ಯೋಹಾನ 17:19

ಅವರು ಸತ್ಯದಲ್ಲಿ ಪ್ರತಿಷ್ಠಿಸಲ್ಪಡುವಂತೆ ನಾನು ನನ್ನನ್ನು ಅವರಿ ಗೋಸ್ಕರ ಪ್ರತಿಷ್ಠಿಸಿಕೊಳ್ಳುತ್ತೇನೆ.

ರೋಮಾಪುರದವರಿಗೆ 3:24

ಅವರು ನೀತಿವಂತರೆಂದು ನಿರ್ಣಯ ಹೊಂದುವದು ಆತನ ಉಚಿತಾರ್ಥವಾದ ಕೃಪೆ ಯಿಂದಲೇ. ಇದು ಕ್ರಿಸ್ತ ಯೇಸುವಿನಿಂದಾದ ವಿಮೋ ಚನೆಯ ಮೂಲಕವಾಗಿ ಆಗುವದು.

ರೋಮಾಪುರದವರಿಗೆ 5:6

ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.

ರೋಮಾಪುರದವರಿಗೆ 5:16

ಇದಲ್ಲದೆ ಪಾಪಮಾಡಿದ ಆ ಒಬ್ಬನಿಂದಲೇ ಬಂದಂತೆ ಈ ದಾನವು ಬರಲಿಲ್ಲ; ಯಾಕಂದರೆ ಒಬ್ಬ ಮನುಷ್ಯನ ಅಪರಾಧದ ದೆಸೆಯಿಂದಲೇ ತೀರ್ಪು ಉಂಟಾಯಿತು. ಆದರೆ ಉಚಿತವಾದ ದಾನವು ಅನೇಕರ ಅಪರಾಧಗಳ ಕಾರಣದಿಂದ ಉಂಟಾಗಿ ನಿರ್ಣಯಿಸುವಂಥದ್ದಾಗಿದೆ.

ರೋಮಾಪುರದವರಿಗೆ 8:34

ಅಪರಾಧಿಗಳೆಂದು ನಿರ್ಣಯಿಸುವವರು ಯಾರು? ಕ್ರಿಸ್ತನು ಮರಣವನ್ನು ಹೊಂದಿದ್ದಲ್ಲದೆ (ಜೀವಿತನಾಗಿ) ಎದ್ದು ದೇವರ ಬಲಗಡೆಯಲ್ಲಿ ನಮಗೋಸ್ಕರ ವಿಜ್ಞಾಪನೆ ಮಾಡು ವಾತನಾಗಿದ್ದಾನೆ;

ರೋಮಾಪುರದವರಿಗೆ 10:4

ನಂಬುವ ಪ್ರತಿಯೊಬ್ಬನು ನೀತಿವಂತನಾಗುವಂತೆ ಕ್ರಿಸ್ತನು ನ್ಯಾಯಪ್ರಮಾಣದ ಅಂತ್ಯವಾಗಿದ್ದಾನೆ.

1 ತಿಮೋಥೆಯ 2:6

ಆತನು ಎಲ್ಲರಿಗೋಸ್ಕರ ವಿಮೋಚನೆಯ ಕ್ರಯವಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು; ಇದೇ ತಕ್ಕಕಾಲದಲ್ಲಿ ಹೇಳ ಬೇಕಾದ ಸಾಕ್ಷಿಯಾಗಿದೆ.

ತೀತ 2:14

ಆತನು ನಮ್ಮನ್ನು ಸಕಲ ದುಷ್ಟತನದಿಂದ ವಿಮೋಚಿಸುವದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಅಸಮಾನ್ಯ ಜನರನ್ನು ತನಗಾಗಿ ಪರಿಶುದ್ಧ ಮಾಡುವದಕ್ಕೂ ನಮಗೋಸ್ಕರ ತನ್ನನ್ನು ತಾನೇ ಒಪ್ಪಿಸಿ ಕೊಟ್ಟನು.ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.

ಹೆಬ್ರಿಯರಿಗೆ 2:10

ಸಮಸ್ತವು ಯಾವಾತನಿಗೋಸ್ಕರವೂ ಯಾವಾತನಿಂದಲೂ ಉಂಟಾಯಿತೋ ಆತನು ಬಹುಮಂದಿ ಪುತ್ರರನ್ನು ಪ್ರಭಾವಕ್ಕೆ ಸೇರಿಸುವಲ್ಲಿ ಅವರ ರಕ್ಷಣಾ ನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವದು ಆತನಿಗೆ ಯುಕ್ತವಾಗಿತ್ತು.

1 ಪೇತ್ರ 1:18

ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;

1 ಪೇತ್ರ 2:24

ನಾವು ಪಾಪಗಳ ಪಾಲಿಗೆ ಸತ್ತು ನೀತಿವಂತರಾಗಿ ಜೀವಿಸುವಂತೆ ಆತನು ಮರದ ಮೇಲೆ ನಮ್ಮ ಪಾಪ ಗಳನ್ನು ತಾನೇ ತನ್ನ ದೇಹದಲ್ಲಿ ಹೊತ್ತನು; ಆತನ ಬಾಸುಂಡೆಗಳಿಂದ ನಿಮಗೆ ಗುಣವಾಯಿತು.ನೀವು ಕುರಿಗಳಂತೆ ದಾರಿ ತಪ್ಪಿದವರಾಗಿದ್ದೀರಿ; ಆದರೆ ಈಗ ನೀವು ತಿರಿಗಿ ನಿಮ್ಮ ಆತ್ಮಗಳ ಕುರುಬನೂ ಅಧ್ಯಕ್ಷನೂ ಆಗಿರುವಾತನ ಬಳಿಗೆ ಬಂದಿದ್ದೀರಿ.

1 ಪೇತ್ರ 3:18

ಕ್ರಿಸ್ತನು ಸಹ ನೀತಿವಂತ ನಾಗಿದ್ದು ಅನೀತಿವಂತರಾದ ನಮ್ಮನ್ನು ದೇವರ ಬಳಿಗೆ ತರುವದಕ್ಕಾಗಿ ಪಾಪನಿವಾರಣೆಗೋಸ್ಕರ ಒಂದೇ ಸಾರಿ ಬಾಧೆಪಟ್ಟು ಶರೀರದಲ್ಲಿ ಕೊಲ್ಲಲ್ಪಟ್ಟನು, ಆತ್ಮನಿಂದ ಬದುಕುವವನಾದನು.

Interlinear

Choose Theme