ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
Cross references
ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.
ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.
ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.
ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.
ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.
ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.
ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.
ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.
ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.
ನೀನು ಇಸ್ರಾಯೇಲ್ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.
ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.
ಇಸ್ರಾಯೇಲ್ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.
ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.
ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.
ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.
ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.
ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.
ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.
ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.
ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.
ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.