Home Bibles ಅಂಕೆಗಳ ಪುಸ್ತಕ 9:13 · ಕನ್ನಡ ಬೈಬಲ್
ಅಂಕೆಗಳ ಪುಸ್ತಕ 9:13 · ಕನ್ನಡ ಬೈಬಲ್

ಆದರೆ ಶುದ್ಧನಾದ ಮನುಷ್ಯನೂ ಪ್ರಯಾಣಮಾಡದವನೂ ಪಸ್ಕವನ್ನು ಆಚರಿಸುವದಕ್ಕೆ ತಪ್ಪಿದರೆ ಅವನನ್ನು ಅವನ ಜನರೊಳಗಿಂದ ತೆಗೆದುಹಾಕಬೇಕು; ಅವನು ಕರ್ತನ ಅರ್ಪಣೆಯನ್ನು ಅದರ ಸಮಯದಲ್ಲಿ ತಾರದಿದ್ದ ಕಾರಣ ಆ ಮನುಷ್ಯನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.

Cross references

ಆದಿಕಾಂಡ 17:14

ಸುನ್ನತಿಯಾಗದ ಗಂಡಸಿಗೆ ನನ್ನ ಒಡಂಬಡಿಕೆಯನ್ನು ವಿಾರಿದ ಕಾರಣ ಅವನು ಜನರೊಳಗಿಂದ ತೆಗೆದುಹಾಕಲ್ಪಡಬೇಕು ಅಂದನು.

ನಿರ್ಗಮಕಾಂಡ 12:15

ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.

ನಿರ್ಗಮಕಾಂಡ 30:33

ಅದರ ಹಾಗೆ ತೈಲ ಮಾಡುವವನೂ ಅದನ್ನು ಅನ್ಯನಿಗೆ ಕೊಡುವವನೂ ತನ್ನ ಜನರೊಳಗಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳು ಅಂದನು.

ನಿರ್ಗಮಕಾಂಡ 30:38

ಅದರ ಪರಿಮಳವನ್ನು ನೋಡುವದಕ್ಕೆ ಅದರ ಹಾಗೆ ಮಾಡುವವನು ತನ್ನ ಜನರೊಳಗಿಂದ ತೆಗೆದು ಹಾಕಲ್ಪಡ ಬೇಕು ಅಂದನು.

ಲೇವ್ಯಕಾಂಡ 17:4

ಕರ್ತನಿಗೆ ಸಮರ್ಪಿಸುವ ಬಲಿಯಾಗಿ ಕರ್ತನ ಸನ್ನಿಧಿಯಲ್ಲಿರುವ ಸಭೆಯ ಗುಡಾರದ ಬಾಗಿಲ ಬಳಿಗೆ ತಾರದಿದ್ದರೆ ಆ ಮನುಷ್ಯನ ಮೇಲೆ ರಕ್ತಾ ಪರಾಧವು ಹೊರಿಸಲ್ಪಡಬೇಕು; ಅವನು ರಕ್ತ ಸುರಿಸಿ ರುವನು; ಆ ಮನುಷ್ಯನು ತನ್ನ ಜನರ ಮಧ್ಯದೊ ಳಗಿಂದ ತೆಗೆದುಹಾಕಲ್ಪಡಬೇಕು.

ಲೇವ್ಯಕಾಂಡ 17:10

ಇದಲ್ಲದೆ ಇಸ್ರಾಯೇಲ್‌ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾ ದರೂ ಯಾವದೇ ತರದ ರಕ್ತವನ್ನು ತಿಂದರೆ ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

ಲೇವ್ಯಕಾಂಡ 17:14

ಯಾಕಂದರೆ ರಕ್ತವೇ ಎಲ್ಲಾ ಶರೀರಗಳ ಜೀವವಾಗಿದೆ; ಅದಕ್ಕಿರುವ ರಕ್ತವು ಅದರ ಜೀವಕ್ಕಾಗಿಯೇ ಇದೆ; ಆದದರಿಂದ ನಾನು ಇಸ್ರಾ ಯೇಲ್‌ ಮಕ್ಕಳಿಗೆ--ನೀವು ಯಾವ ಬಗೆಯ ಶರೀರದ ರಕ್ತವನ್ನೂ ತಿನ್ನಬಾರದೆಂದು ಹೇಳಿದ್ದೇನೆ. ಎಲ್ಲಾ ಶರೀರಗಳ ಜೀವವು ರಕ್ತದಲ್ಲಿಯೇ ಇದೆ; ಇದನ್ನು ತಿನ್ನುವ ಯಾವನಾದರೂ ತೆಗೆದುಹಾಕಲ್ಪಡಬೇಕು.

ಲೇವ್ಯಕಾಂಡ 20:20

ಒಬ್ಬನು ತನ್ನ ಚಿಕ್ಕಪ್ಪನ ಹೆಂಡತಿಯೊಂದಿಗೆ ಸಂಗಮಿಸಿದರೆ ಅವನು ತನ್ನ ಚಿಕ್ಕಪ್ಪನ ಬೆತ್ತಲೆತನವನ್ನು ಕಾಣುವಂತೆ ಮಾಡಿದ್ದಾನೆ; ಅವರು ತಮ್ಮ ಪಾಪವನ್ನು ಹೊತ್ತುಕೊಳ್ಳಬೇಕು; ಅವರು ಮಕ್ಕಳಿಲ್ಲದೆ ಸಾಯು ವರು.

ಲೇವ್ಯಕಾಂಡ 22:9

ಆದದರಿಂದ ಅವರು ಅದನ್ನು ಅಪವಿತ್ರಪಡಿಸಿದರೆ ಅದರ ನಿಮಿತ್ತವಾಗಿ ಪಾಪವನ್ನು ಹೊತ್ತು ಸಾಯದಂತೆ ನನ್ನ ವಿಧಿಗಳನ್ನು ಕೈಕೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಕರ್ತನು ನಾನೇ.

ಲೇವ್ಯಕಾಂಡ 24:15

ನೀನು ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳಬೇಕು--ತನ್ನ ದೇವರನ್ನು ಶಪಿಸುವವನು ತನ್ನ ಪಾಪವನ್ನು ಹೊತ್ತುಕೊಳ್ಳಬೇಕು.

ಅಂಕೆಗಳ ಪುಸ್ತಕ 5:31

ಆಗ ಗಂಡನು ನಿರಪರಾಧಿ ಯಾಗಿರುವನು. ಆದರೆ ಹೆಂಡತಿಯು ತನ್ನ ಅಕ್ರಮವನ್ನು ಹೊತ್ತುಕೊಳ್ಳುವಳು ಎಂಬದೇ.

ಅಂಕೆಗಳ ಪುಸ್ತಕ 9:2

ಇಸ್ರಾಯೇಲ್‌ ಮಕ್ಕಳು ಪಸ್ಕವನ್ನು ನೇಮಿಸಿದ ಸಮಯ ದಲ್ಲಿ ಆಚರಿಸಬೇಕು.

ಅಂಕೆಗಳ ಪುಸ್ತಕ 9:7

ಆ ಮನುಷ್ಯರು ಅವನ ಸಂಗಡ ಮಾತನಾಡಿ--ನಾವು ಸತ್ತ ಮನುಷ್ಯನ ದೇಹವನ್ನು ಮುಟ್ಟಿದ್ದರಿಂದ ಅಶುದ್ಧರಾದೆವು; ಆದದರಿಂದ ನಾವು ಇಸ್ರಾಯೇಲ್‌ ಮಕ್ಕಳ ಮಧ್ಯದಲ್ಲಿ ಕರ್ತನ ಅರ್ಪಣೆ ಯನ್ನು ಅದರ ಸಮಯದಲ್ಲಿ ಅರ್ಪಿಸದ ಹಾಗೆ ನಮಗೆ ಯಾಕೆ ಅಡ್ಡಿಯಾಗಬೇಕು ಅಂದರು.

ಅಂಕೆಗಳ ಪುಸ್ತಕ 15:30

ಆದರೆ ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ ಪರಕೀಯನಾಗಲಿ ಹಟದಿಂದ ಪಾಪಮಾಡಿದರೆ ಅವನು ಕರ್ತನನ್ನು ನಿಂದಿಸುತ್ತಾನೆ. ಆ ಮನುಷ್ಯನು ತನ್ನ ಜನರ ಮಧ್ಯದಿಂದ ತೆಗೆದುಹಾಕ ಲ್ಪಡಬೇಕು.

ಅಂಕೆಗಳ ಪುಸ್ತಕ 15:31

ಅವನು ಕರ್ತನ ವಾಕ್ಯವನ್ನು ಅವಮಾನ ಮಾಡಿ ಆತನ ಆಜ್ಞೆಗಳನ್ನು ವಿಾರಿದ್ದರಿಂದ ಆ ಮನು ಷ್ಯನು ನಿಶ್ಚಯವಾಗಿ ತೆಗೆದುಹಾಕಲ್ಪಡಬೇಕು. ಅವನ ಅಕ್ರಮವು ಅವನ ಮೇಲಿರುವದು ಎಂದು ಹೇಳಿದನು.

ಅಂಕೆಗಳ ಪುಸ್ತಕ 19:13

ಸತ್ತ ಮನುಷ್ಯನ ಹೆಣವನ್ನು ಮುಟ್ಟಿ ಶುದ್ಧಮಾಡಿ ಕೊಳ್ಳದ ಯಾವನಾದರೂ ಕರ್ತನ ಗುಡಾರವನ್ನು ಹೊಲೆಮಾಡುತ್ತಾನೆ; ಅವನು ಇಸ್ರಾಯೇಲಿನವರೊ ಳಗಿಂದ ತೆಗೆದುಹಾಕಲ್ಪಡಲಿ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚೆಲ್ಲಲ್ಪಡದ ಕಾರಣ ಅಶುದ್ಧನಾಗಿದ್ದಾನೆ; ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇದೆ.

ಅಂಕೆಗಳ ಪುಸ್ತಕ 19:20

ಆದರೆ ಅಪವಿತ್ರನಾಗಿದ್ದು ತನ್ನನ್ನು ಶುದ್ಧಪಡಿಸಿ ಕೊಳ್ಳದವನು ಸಭೆಯ ಮಧ್ಯದಿಂದ ತೆಗೆದು ಹಾಕಲ್ಪ ಡಲಿ; ಅವನು ಕರ್ತನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ; ಪ್ರತ್ಯೇಕಿಸಲ್ಪಟ್ಟ ನೀರು ಅವನ ಮೇಲೆ ಚಿಮುಕಿಸಲ್ಪಡಲಿಲ್ಲ; ಅವನು ಅಪವಿತ್ರನೇ.

ಯೆಹೆಜ್ಕೇಲ 23:49

ನಿಮ್ಮ ದುಷ್ಕರ್ಮದ ಫಲವನ್ನು ನಿಮ್ಮ ಮೇಲೆಯೇ ಮುಯ್ಯಿ ತೀರಿಸುವೆನು. ನೀವು ನಿಮ್ಮ ವಿಗ್ರಹಗಳ ಪಾಪಗಳನ್ನು ಹೊರುವಿರಿ; ಆಗ ದೇವರಾದ ಕರ್ತನು ನಾನೇ ಎಂದು ತಿಳಿದುಕೊಳ್ಳುವಿರಿ.

ಹೆಬ್ರಿಯರಿಗೆ 2:3

ಎಷ್ಟೋ ದೊಡ್ಡ ಈ ರಕ್ಷಣೆಯನ್ನು ನಾವು ಅಲಕ್ಷ್ಯಮಾಡಿದರೆ ತಪ್ಪಿಸಿ ಕೊಳ್ಳುವದು ಹೇಗೆ? ಇದು ಕರ್ತನಿಂದ ಮೊದಲು ಹೇಳಲಾರಂಭಿಸಿತು. ಆತನಿಂದ ಕೇಳಿದವರು ಇದನ್ನು ನಮಗೆ ಸ್ಥಿರಪಡಿಸಿದರು.

ಹೆಬ್ರಿಯರಿಗೆ 6:6

ಅವರಲ್ಲಿ ತಿರಿಗಿ ಮಾನಸಾಂತರವನ್ನು ಹುಟ್ಟಿಸುವದು ಅಸಾಧ್ಯ; ಯಾಕಂದರೆ ಅವರು ತಮ್ಮ ಪಾಲಿಗೆ ದೇವರ ಮಗನನ್ನು ಪುನಃ ಶಿಲುಬೆಗೆ ಹಾಕುವವರೂ ಆತನನ್ನು ಬಹಿರಂಗ ವಾಗಿ ಅವಮಾನಪಡಿಸುವವರೂ ಆಗಿದ್ದಾರೆ.

ಹೆಬ್ರಿಯರಿಗೆ 9:28

ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.

ಹೆಬ್ರಿಯರಿಗೆ 10:26

ನಾವು ಸತ್ಯದ ಪರಿಜ್ಞಾನವನ್ನು ಹೊಂದಿದ ಮೇಲೆ ಬೇಕೆಂದು ಪಾಪಮಾಡಿದರೆ ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವದಿಲ್ಲ.

ಹೆಬ್ರಿಯರಿಗೆ 12:25

ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.

Interlinear

Choose Theme