ಆಗ ಶವದ ದೆಸೆಯಿಂದ ಅಶುದ್ಧರಾಗಿ ಪಸ್ಕವನ್ನು ಆ ದಿವಸದಲ್ಲಿ ಆಚರಿಸಲಿಕ್ಕಾಗದ ಕೆಲವು ಮನುಷ್ಯ ರಿದ್ದರು; ಅವರು ಆ ದಿವಸದಲ್ಲಿ ಮೋಶೆ ಆರೋನರ ಮುಂದೆ ಬಂದರು.
Cross references
ಅದಕ್ಕೆ ಮೋಶೆಯು ತನ್ನ ಮಾವನಿಗೆ--ದೇವರ ವಿಷಯದಲ್ಲಿ ಕೇಳುವದಕ್ಕಾಗಿ ಜನರು ನನ್ನ ಬಳಿಗೆ ಬರುತ್ತಾರೆ.
ಆದದರಿಂದ ಈಗ ನನ್ನ ಮಾತನ್ನು ಕೇಳು, ನಿನಗೆ ಆಲೋಚನೆ ಹೇಳುತ್ತೇನೆ; ದೇವರು ನಿನ್ನ ಸಂಗಡ ಇರಲಿ; ನೀನು ಜನರಿಗಾಗಿ ದೇವರ ಪಕ್ಷದಲ್ಲಿದ್ದು ಅವರ ವ್ಯಾಜ್ಯಗಳನ್ನು ಆತನ ಮುಂದೆ ತರಬೇಕು.
ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ ಕಠಿಣ ವ್ಯಾಜ್ಯ ಗಳನ್ನು ಮೋಶೆಯ ಬಳಿಗೆ ತಂದು ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.ತರುವಾಯ ಮೋಶೆಯು ತನ್ನ ಮಾವನನ್ನು ಕಳುಹಿಸಲು ಅವನು ಸ್ವದೇಶಕ್ಕೆ ಹೋದನು.
ಇಲ್ಲವೆ ಯಾವ ಮೃತ ಶರೀರದ ಬಳಿಗೂ ಹೋಗಬಾರದು; ತನ್ನ ತಂದೆಗಾಗಲಿ ತಾಯಿಗಾಗಲಿ ತನ್ನನ್ನು ಹೊಲೆಮಾಡಿಕೊಳ್ಳಬಾರದು.
ಇಸ್ರಾಯೇಲ್ ಸ್ತ್ರೀಯ ಮಗನು ಕರ್ತನ ನಾಮವನ್ನು ದೂಷಿಸಿ ಶಪಿಸಿ ದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು; (ಅವನ ತಾಯಿಯ ಹೆಸರು ದಾನನ ಕುಲದವನಾದ ದಿಬ್ರೀಯ ಮಗಳಾದ ಶೆಲೋವಿಾತ್).
ಕುಷ್ಠವಿ ರುವವರೆಲ್ಲರನ್ನೂ ಮೇಹವುಳ್ಳವರೆಲ್ಲರನ್ನೂ ಹೆಣದಿಂದ ಅಶುದ್ಧವಾದವರೆಲ್ಲರನ್ನೂ ಪಾಳೆಯದೊಳಗಿಂದ ಕಳು ಹಿಸಬೇಕೆಂದು ಇಸ್ರಾಯೇಲ್ ಮಕ್ಕಳಿಗೆ ಆಜ್ಞಾಪಿಸು.
ಅವನು ಕರ್ತನಿಗೆ ತನ್ನನ್ನು ಪ್ರತ್ಯೇಕಿಸಿ ಕೊಂಡ ದಿವಸಗಳೆಲ್ಲಾ ಸತ್ತವನ ಬಳಿಗೆ ಬರಬಾರದು.
ಆಗ ಕಟ್ಟಿಗೆಗಳನ್ನು ಕೂಡಿಸುವದರಲ್ಲಿ ಅವನನ್ನು ಕಂಡುಕೊಂಡವರು ಅವನನ್ನು ಮೋಶೆ ಆರೋನರ ಬಳಿಗೂ ಸಮಸ್ತಸಭೆಗೂ ತಂದು
ಮನುಷ್ಯನ ಹೆಣವನ್ನು ಮುಟ್ಟಿದವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.
ಒಬ್ಬ ಮನುಷ್ಯನು ಡೇರೆಯಲ್ಲಿ ಸತ್ತಾಗ ಅವನ ವಿಷಯವಾದ ಆಜ್ಞೆ ಏನಂದರೆ--ಆ ಡೇರೆಯೊಳಗೆ ಪ್ರವೇಶಿಸುವವರೆಲ್ಲರೂ ಡೇರೆಯಲ್ಲಿರುವವರೆ ಲ್ಲರೂ ಏಳು ದಿವಸಗಳ ವರೆಗೆ ಅಶುದ್ಧರಾಗಿರಬೇಕು.
ಇದಲ್ಲದೆ ಹೊಲದಲ್ಲಿ ಕತ್ತಿ ಯಿಂದ ಕೊಲ್ಲಲ್ಪಟ್ಟವನನ್ನಾದರೂ ಮನುಷ್ಯನ ಎಲುಬ ನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವರೆಲ್ಲರು ಏಳು ದಿವಸ ಅಪವಿತ್ರರಾಗಿರಬೇಕು.
ಪವಿತ್ರನಾದವನೊಬ್ಬನು ಹಿಸ್ಸೋಪನ್ನು ತಕ್ಕೊಂಡು ನೀರಿನಲ್ಲಿ ಅದ್ದಿ ಆ ಡೇರೆಯ ಮೇಲೆಯೂ ಸಮಸ್ತ ಸಾಮಾನುಗಳ ಮೇಲೆಯೂ ಅದರಲ್ಲಿರುವ ಮನುಷ್ಯರ ಮೇಲೆಯೂ ಎಲುಬನ್ನಾದರೂ ಕೊಲ್ಲಲ್ಪಟ್ಟ ವನನ್ನಾದರೂ ಸತ್ತವನನ್ನಾದರೂ ಸಮಾಧಿಯನ್ನಾದರೂ ಮುಟ್ಟಿದವನ ಮೇಲೆ ಚಿಮುಕಿಸಬೇಕು.
ಇವರು ಸವಿಾಪಕ್ಕೆ ಬಂದು ಮೋಶೆಯೂ ಯಾಜಕ ನಾದ ಎಲ್ಲಾಜಾರನೂ ಪ್ರಧಾನರೂ ಸಮಸ್ತ ಸಭೆಯೂ ಇವರ ಮುಂದೆ ಸಭೆಯ ಗುಡಾರದ ಬಾಗಲಿನ ಹತ್ತಿರ ನಿಂತು--
ಮೋಶೆಯು ಅವರ ವ್ಯಾಜ್ಯವನ್ನು ಕರ್ತನ ಮುಂದೆ ತಂದನು.
ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.