ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.
Cross references
ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು;
ಕರ್ತನು ನಿನ್ನ ಬಲ ಪಾರ್ಶ್ವದಲ್ಲಿದ್ದು ತನ್ನ ಕೋಪದ ದಿವಸದಲ್ಲಿ ಅರಸ ರನ್ನು ಹೊಡೆಯುವನು.
ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ನಿನ್ನನ್ನು ತಿಳಿಯದ ಅನ್ಯರ ಮೇಲೆಯೂ ನಿನ್ನ ಹೆಸರನ್ನು ಕರೆಯದ ಕುಟುಂಬಗಳ ಮೇಲೆಯೂ ನಿನ್ನ ರೌದ್ರವನ್ನು ಹೊಯಿದುಬಿಡು; ಅವರು ಯಾಕೋ ಬ್ಯರನ್ನು ತಿಂದು ಬಿಟ್ಟಿದ್ದಾರೆ; ಅವರನ್ನು ನುಂಗಿ ಇಲ್ಲದಾಗಿ ಮಾಡಿ ಅವರ ನಿವಾಸವನ್ನು ಹಾಳುಮಾಡಿದ್ದಾರೆ.
ಅವರ ತಂದೆಗಳನ್ನೂ ಮಕ್ಕಳನ್ನೂ ಕೂಡ ಒಬ್ಬನ ಮೇಲೊಬ್ಬನನ್ನು ಅಪ್ಪಳಿಸು ವೆನು. ನಾನು ಅವರನ್ನು ಕನಿಕರಿಸುವದಿಲ್ಲ, ಕರುಣಿಸು ವದಿಲ್ಲ ಅಂತಃಕರುಣೆಪಡುವದಿಲ್ಲ ಅವರನ್ನು ಕೆಡಿಸು ವೆನು ಎಂದು ಕರ್ತನು ಅನ್ನುತ್ತಾನೆ.
ಆದರೂ ನೀವು ನನ್ನನ್ನು ಕೊಂದುಹಾಕಿದರೆ ನಿಮ್ಮ ಮೇಲೆಯೂ ಈ ಪಟ್ಟಣದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಅಪರಾಧವಿಲ್ಲದ ರಕ್ತವನ್ನು ಬರಮಾಡು ತ್ತೀರೆಂದು ನಿಶ್ಚಯವಾಗಿ ತಿಳುಕೊಳ್ಳಿರಿ, ಈ ವಾಕ್ಯಗಳ ನ್ನೆಲ್ಲಾ ನಿಮ್ಮ ಕಿವಿಗಳಲ್ಲಿ ಹೇಳುವ ಹಾಗೆ ಸತ್ಯವಾಗಿ ಕರ್ತನು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ ಅಂದನು.
ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು; ನಿಮ್ಮನ್ನು ಹೆತ್ತವಳು ಲಜ್ಜೆ ಹೊಂದುವಳು; ಇಗೋ, ಜನಾಂಗ ಗಳಲ್ಲಿ ಅಂತ್ಯವಾದದ್ದು ಕಾಡೂ ಒಣ ಭೂಮಿಯೂ ಅರಣ್ಯವೂ ಆಗುವದು.
ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
ಎದೋಮಿನ ಮಗಳೇ, ಊಚ್ ದೇಶದಲ್ಲಿ ವಾಸವಾಗಿರುವವಳೇ, ಆನಂದಿಸು, ಸಂತೋಷಪಡು; ನಿನ್ನ ಬಳಿಗೆ ಪಾತ್ರೆಯು ಸಹ ದಾಟಿ ಬರುವದು, ನೀನು ಕುಡಿದು ನಿನ್ನನ್ನು ನೀನೇ ಬೆತ್ತಲೆ ಮಾಡಿಕೊಳ್ಳುವಿ.ಚೀಯೋನಿನ ಮಗಳೇ, ನಿನ್ನ ಅಕ್ರಮದ ಶಿಕ್ಷೆಯು ತೀರಿಹೋಯಿತು; ಆತನು ಇನ್ನು ಮೇಲೆ ನಿನ್ನನ್ನು ಸೆರೆಗೆ ಒಯ್ಯುವದಿಲ್ಲ. ಎದೋಮಿನ ಮಗಳೇ, ಆತನು ನಿನ್ನ ಅಕ್ರಮವನ್ನು ವಿಚಾರಿಸುವನು; ಆತನು ನಿನ್ನ ಪಾಪಗಳನ್ನು ಕಂಡು ಹಿಡಿಯುವನು.
ಆ ದಿನವು ಸವಿಾಪವಾಯಿತು, ಕರ್ತನ ದಿನವು, ಆ ಕಾರ್ಮುಗಿಲಿನ ದಿನವು ಸವಿಾಪ ವಾಯಿತು; ಅದೇ ಅನ್ಯಜನಾಂಗಗಳ ಕಾಲವಾಗಿ ರುವದು.
ಹೇಗೆ ನೀನು ಇಸ್ರಾಯೇಲ್ಯರ ಸ್ವಾತಂತ್ರ್ಯದ ನಾಶನಕ್ಕೆ ಸಂತೋಷಪಟ್ಟೆಯೋ ಹಾಗೆಯೇ ನಿನ್ನ ನಾಶನಕ್ಕೆ ಸಂತೋಷಪಡುವ ಹಾಗೆ ಮಾಡುವೆನು. ಓ ಸೇಯಾರ್ ಪರ್ವತವೇ ಮತ್ತು ಸಮಸ್ತ ಎದೋಮೇಸಂಪೂರ್ಣವಾಗಿ ಹಾಳಾಗುವಿ; ಆಗ ನಾನೇ ಕರ್ತ ನೆಂದು ನಿಮಗೆ ತಿಳಿಯುವದು.
ಆ ದಿನಕ್ಕಾಗಿ ಅಯ್ಯೋ, ಯಾಕಂದರೆ ಕರ್ತನ ದಿನವು ಸವಿಾಪವಾಗಿದೆ; ಸರ್ವಶಕ್ತನ ಕಡೆಯಿಂದ ನಾಶದಂತೆ ಬರುತ್ತದೆ.
ಇಗೋ, ಎಲ್ಲಿ ಅವ ರನ್ನು ಮಾರಿದ್ದಿರೋ ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
ಸುತ್ತಲಿನ ಎಲ್ಲಾ ಅನ್ಯಜನಾಂಗ ಗಳೇ, ಕೂಡಿಕೊಳ್ಳಿರಿ; ಓ ಕರ್ತನೇ, ನಿನ್ನ ಶೂರರನ್ನು ಅಲ್ಲಿ ಇಳಿಯ ಮಾಡು.
ಇದಲ್ಲದೆ ಕಿವಿಗೊಡದೆ ಇದ್ದ ಜನಾಂಗಗಳಿಗೆ ಕೋಪದಿಂದಲೂ ಉಗ್ರದಿಂದಲೂ ಮುಯ್ಯಿ ತೀರಿಸುವೆನು.
ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
ನೀವು ಮಾಡುವ ತೀರ್ಪಿ ನಿಂದಲೇ ನಿಮಗೆ ತೀರ್ಪಾಗುವದು; ಮತ್ತು ನೀವು ಅಳೆಯುವ ಅಳತೆಯಿಂದಲೇ ನಿಮಗೆ ತಿರಿಗಿ ಅಳತೆ ಯಾಗುವದು.
ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.