ಇದಲ್ಲದೆ ಚೀಯೋನ್ ಪರ್ವತದಲ್ಲಿ ರಕ್ಷಕರು ಏಸಾವಿನ ಬೆಟ್ಟಕ್ಕೆ ನ್ಯಾಯ ತೀರಿಸುವದಕ್ಕೋಸ್ಕರ ಏಳುವರು; ಆಗ ರಾಜ್ಯವು ಕರ್ತನದಾಗಿರುವದು.
Cross references
ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
ಆದಾಗ್ಯೂ ಕರ್ತನು ಅವರನ್ನು ಕೊಳ್ಳೆ ಹೊಡೆಯುವವರ ಕೈಯೊಳಗಿಂದ ಬಿಡಿಸಿದ ನ್ಯಾಯಾಧಿಪತಿಗಳನ್ನು ಎಬ್ಬಿಸಿದರೂ;
ತರುವಾಯ ಇಸ್ರಾಯೇಲ್ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರನ್ನು ರಕ್ಷಿಸುವ ರಕ್ಷಕನನ್ನು ಅಂದರೆ ಕಾಲೇಬನ ತಮ್ಮನಾದ ಕೆನಜನ ಮಗನಾದ ಒತ್ನೀಯೇಲನನ್ನು ಎಬ್ಬಿಸಿದನು.
ಕರ್ತನು ಇಸ್ರಾಯೇಲಿಗೆ ಒಬ್ಬ ರಕ್ಷಕ ನನ್ನು ಕೊಟ್ಟಿದ್ದರಿಂದ ಅವರು ಅರಾಮ್ಯರ ಕೈಯಿಂದ ತಪ್ಪಿಸಿಕೊಂಡು ಹೋದರು. ಇಸ್ರಾಯೇಲ್ ಮಕ್ಕಳು ಮುಂಚಿನ ಹಾಗೆ ತಮ್ಮ ಡೇರೆಗಳಲ್ಲಿ ವಾಸವಾಗಿದ್ದರು.
ಆದಾಗ್ಯೂ ನಾನು ನನ್ನ ಅರಸನನ್ನು ನನ್ನ ಪರಿಶುದ್ಧ ಪರ್ವತವಾದ ಚೀಯೋನಿನ ಮೇಲೆ ಸ್ಥಾಪಿಸಿದ್ದೇನೆ.
ರಾಜ್ಯವು ಕರ್ತನದೇ; ಜನಾಂಗಗಳಲ್ಲಿ ಆಳುವಾತನು ಆತನೇ.
ಭೂಮಿಯ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರೂ ಆತನ ಮುಂದೆ ಅಡ್ಡಬೀಳುವರು.
ಜನಾಂಗವು ಕರ್ತನ ಹೆಸರಿಗೂ ಭೂರಾಜರೆಲ್ಲರು ನಿನ್ನ ಮಹಿಮೆಗೂ ಭಯಪಡುವರು.
ಪರಿಶುದ್ಧರು ಘನತೆಯಿಂದ ಉತ್ಸಾಹಪಡಲಿ; ತಮ್ಮ ಹಾಸಿಗೆಗಳ ಮೇಲೆ ಉತ್ಸಾಹಧ್ವನಿಮಾಡಲಿ.
ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ಆ ಮಗನು ನಮಗೆ ಕೊಡಲ್ಪಟ್ಟಿದ್ದಾನೆ; ಆಡಳಿತವು ಆತನ ಬಾಹುವಿನ ಮೇಲಿರುವದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂದು ಆತನ ಹೆಸರು ಕರೆಯಲ್ಪಡುವದು.
ಅದು ಸೈನ್ಯಗಳ ಕರ್ತನಿಗೆ ಐಗುಪ್ತ ದೇಶದಲ್ಲಿ ಗುರುತಾಗಿಯೂ ಸಾಕ್ಷಿ ಯಾಗಿಯೂ ಇರುವವು. ಹಿಂಸಕರ ದೆಸೆಯಿಂದ ಕರ್ತನನ್ನು ಕೂಗಿ ಕೊಳ್ಳಲು ಆತನು ಅವರಿಗೆ ಒಬ್ಬ ಶೂರನಾದ ರಕ್ಷಕ ನನ್ನು ಕಳುಹಿಸಿ ಅವರನ್ನು ಬಿಡುಗಡೆ ಮಾಡುವನು.
ಆಮೇಲೆ ಚೀಯೋನ್ ಪರ್ವತ ದಲ್ಲಿಯೂ ಯೆರೂಸಲೇಮಿನಲ್ಲಿಯೂ ತನ್ನ ಪೂರ್ವಿ ಕರ (ಪರಿವಾರದವರ) ಮುಂದೆ ಮಹಿಮೆಯಿಂದ ಆಳುವಾಗ ಚಂದ್ರನಿಗೆ ಅವಮಾನವಾಗುವದು, ಸೂರ್ಯನು ನಾಚಿಕೆ(ಲಜ್ಜೆ)ಪಡುವನು.
ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
ಅರ ಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವನು. ಅದರ ರಾಜ್ಯ ವನ್ನು ಬೇರೆ ಜನರಿಗೆ ಕೊಡದೆ ಆ ರಾಜ್ಯಗಳನ್ನೆಲ್ಲಾ ಧ್ವಂಸ ಮಾಡಿ ಮುಗಿಸಿ ಎಂದೆಂದಿಗೂ ನಿಲ್ಲುವದು.
ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು ಮಹತ್ವವು ರಾಜ್ಯವು ಕೊಡಲ್ಪಟ್ಟವು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂತ ರಾಜ್ಯವಾಗಿದೆ.
ರಾಜ್ಯವೂ ದೊರೆತನವೂ ಆಕಾಶದ ಕೆಳಗಿರುವ ಪೂರ್ತಿ ರಾಜ್ಯಗಳ ಮಹತ್ತು ಮಹೋನ್ನತನ ಪರಿಶುದ್ಧವಾದ ಜನರಿಗೆ ಕೊಡಲ್ಪಡುವದು; ಆತನ ರಾಜ್ಯವು ನಿತ್ಯವಾದ ರಾಜ್ಯ ಮತ್ತು ಎಲ್ಲಾ ದೊರೆತನಗಳೂ ಆತನನ್ನು ಸೇವಿಸುವವು ಮತ್ತು ವಿಧೇಯವಾಗಿರುವವು.ಇಷ್ಟರಲ್ಲಿ ಇದರ ಪ್ರಸ್ತಾಪವು ಮುಗಿಯಿತು, ದಾನಿಯೇಲನೆಂಬ ನನಗೆ ನನ್ನ ಆಲೋಚನೆಗಳು ಬಹಳವಾಗಿ ಕಳವಳಪಡಿಸಿ ದವು; ನನ್ನ ಮುಖವು ಕಳೆಗುಂದಿತು, ಆದರೂ ಈ ಸಂಗತಿಯನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡೆನು.
ಬುದ್ಧಿವಂತರಾದವರು ಆಕಾಶದ ಕಾಂತಿಯ ಹಾಗೆ ಯೂ ಅನೇಕರನ್ನು ನೀತಿಯ ಕಡೆಗೆ ತಿರುಗಿಸಿದ ವರು ನಕ್ಷತ್ರಗಳ ಹಾಗೆಯೂ ಎಂದೆಂದಿಗೂ ಪ್ರಕಾಶಿಸು ವರು;
ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಕುಂಟಾದದ್ದನ್ನು ಉಳಿದದ್ದ ನ್ನಾಗಿಯೂ ತಳ್ಳಿಬಿಟ್ಟಿದ್ದನ್ನು ಬಲವಾದ ಜನಾಂಗವಾ ಗಿಯೂ ಮಾಡುವೆನು; ಕರ್ತನು ಇಂದಿನಿಂದ ಸದಾ ಕಾಲವೂ ಚೀಯೋನ್ ಪರ್ವತದಲ್ಲಿ ಅವರ ಮೇಲೆ ಆಳುವನು,
ಆತನು ಕರ್ತನ ಬಲದಲ್ಲಿಯೂ ತನ್ನ ದೇವರಾದ ಕರ್ತನ ಹೆಸರಿನಲ್ಲಿ ಘನತೆಯಲ್ಲಿಯೂ ನಿಂತುಕೊಂಡು ಮೇಯಿಸುವನು; ಮತ್ತು ಅವರು ನೆಲೆಯಾಗಿರುವರು, ಈಗ ಆತನು ಭೂಮಿಯ ಅಂತ್ಯಗಳ ಮಟ್ಟಿಗೂ ದೊಡ್ಡವನಾಗಿ ರುವನು.
ನಿನ್ನ ವಿಷಯವಾಗಿ ಸಹ ನಿನ್ನ ಒಡಂಬಡಿಕೆಯ ರಕ್ತದಿಂದ, ನಿನ್ನ ಸೆರೆಯವರನ್ನು ನೀರಿಲ್ಲದ ಕುಣಿಯೊ ಳಗಿಂದ ಕಳುಹಿಸಿಬಿಡುತ್ತೇನೆ.
ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
ಕರ್ತನು ಭೂಮಿಗೆಲ್ಲಾ ಅರಸನಾಗಿರುವನು; ಆ ದಿನದಲ್ಲಿ ಕರ್ತನು ಒಬ್ಬನೇ ಇರುವನು; ಆತನ ಹೆಸರು ಒಂದೇ.
ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರು ವಂತೆ ಭೂಲೋಕದಲ್ಲಿಯೂ ನೆರೆವೇರಲಿ.
ನಮ್ಮನ್ನು ಶೋಧನೆಯೊಳಗೆ ನಡಿಸದೆ ಕೇಡಿನಿಂದ ತಪ್ಪಿಸು. ಯಾಕಂದರೆ ರಾಜ್ಯವೂ ಬಲವೂ ಮಹಿಮೆಯೂ ಎಂದೆಂದಿಗೂ ನಿನ್ನವೇ. ಆಮೆನ್.
ಆತನು ದೊಡ್ಡವನಾಗಿದ್ದು ಮಹೋನ್ನತನ ಕುಮಾರನೆಂದು ಕರೆಯಲ್ಪಡುವನು; ದೇವರಾದ ಕರ್ತನು ಆತನ ತಂದೆ ಯಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡು ವನು.
ಹೀಗೆ ನೀವು ನನ್ನ ರಾಜ್ಯದಲ್ಲಿ ನನ್ನ ಮೇಜಿನ ಬಳಿಯಲ್ಲಿ ತಿಂದು ಕುಡಿದು ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾ ಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ ಅಂದನು.
ಪರಿಶುದ್ಧರು ಲೋಕಕ್ಕೆ ತೀರ್ಪುಮಾಡು ವರೆಂಬದು ನಿಮಗೆ ತಿಳಿಯದೋ? ಲೋಕವು ನಿಮ್ಮಿಂದ ತೀರ್ಪು ಹೊಂದಬೇಕಾಗಿರುವಾಗ ಅತ್ಯಲ್ಪವಾದವುಗಳ ವಿಷಯದಲ್ಲಿ ತೀರ್ಪುಮಾಡು ವದಕ್ಕೆ ನೀವು ಅಯೋಗ್ಯರಾಗಿದ್ದೀರೋ?
ನಿನ್ನ ವಿಷಯದಲ್ಲಿಯೂ ಉಪ ದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿ ನಿರತನಾಗಿರು; ಹೀಗೆ ಮಾಡುವದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.
ಅವನು ಪಾಪಮಾಡಿದವ ನನ್ನು ತಪ್ಪಾದ ಮಾರ್ಗದಿಂದ ತಿರುಗಿಸಿದ್ದಲ್ಲದೆ ಅವನ ಆತ್ಮವನ್ನು ಮರಣಕ್ಕೆ ತಪ್ಪಿಸಿ ಬಹುಪಾಪಗಳನ್ನು ಮುಚ್ಚಿದವನಾದನೆಂದು ತಿಳುಕೊಳ್ಳಲಿ.
ಏಳನೆಯ ದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ-- ಈ ಲೋಕದ ರಾಜ್ಯಗಳು ನಮ್ಮ ಕರ್ತನ ಮತ್ತು ಆತನ ಕ್ರಿಸ್ತನ ರಾಜ್ಯಗಳಾದವು; ಆತನು ಯುಗ ಯುಗಾಂತರಗಳಲ್ಲಿಯೂ ಆಳುವನು ಎಂದು ಹೇಳಿ ದವು.
ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಬಹಳ ನೀರುಗಳ ಘೋಷದಂತೆಯೂ ಗಟ್ಟಿಯಾದ ಗುಡುಗುಗಳ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ನಾನು ಕೇಳಿದೆನು; ಅದು--ಹಲ್ಲೆಲೂಯಾ, ಸರ್ವಶಕ್ತನಾಗಿರುವ ದೇವರಾದ ಕರ್ತನು ಆಳುತ್ತಾನೆ.
ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕೂತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ