ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ.
Cross references
ಹೀಗೆ ಏಸಾವನು ಸೇಯಾರ್ ಪರ್ವತದಲ್ಲಿ ವಾಸವಾಗಿದ್ದನು. ಏಸಾವನೇ ಎದೋಮನು.
ಅವನು ಉಪ್ಪಿನ ತಗ್ಗಿನಲ್ಲಿ ಎದೋಮ್ಯರಾದ ಹತ್ತು ಸಾವಿರ ಜನರನ್ನು ಹೊಡೆದು ಯುದ್ಧದಲ್ಲಿ ಸೆಲವನ್ನು ವಶಪಡಿಸಿಕೊಂಡು ಈ ದಿವಸದ ವರೆಗೂ ಯೊಕ್ತೆಯೇಲ್ ಎಂಬ ಹೆಸರಿಟ್ಟನು.
ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದನ ಮಕ್ಕಳು ಸೆರೆಯಾಗಿ ಒಯ್ದು ಬಂಡೆಯ ಶಿಖರಕ್ಕೆ ಅವರನ್ನು ಕರಕೊಂಡು ಹೋಗಿ ಬಂಡೆಯ ಶಿಖರದಿಂದ ಅವರನ್ನು ದೊಬ್ಬಿದರು. ಆದ ದರಿಂದ ಜನರೆಲ್ಲರು ತುಂಡುತುಂಡಾದರು.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ಜನಗಳ ಐಶ್ವರ್ಯವು ಗೂಡಿನಂತೆ ನನ್ನ ಕೈಗೆ ಸಿಕ್ಕಿದೆ, ಬಿಡಲ್ಪಟ್ಟ ಮೊಟ್ಟೆಗಳನ್ನು ಕೂಡಿಸುವಂತೆ ಭೂಮಿಯನ್ನೆಲ್ಲಾ ಸಂಗ್ರಹಿಸಿಕೊಂಡಿದ್ದೇನೆ; ರೆಕ್ಕೆಯಾ ಡಿಸಿ ಬಾಯಿತೆರೆದು ಕಿಚುಗುಟ್ಟುವವರು ಯಾರೂ ಇಲ್ಲವೆಂದು ಅಂದುಕೊಂಡನು.
ನೀನು ನಿನ್ನ ಹೃದಯದಲ್ಲಿ ನಾನು ಆಕಾಶಕ್ಕೆ ಏರಿ ದೇವರ ನಕ್ಷತ್ರಗಳ ಮೇಲೆ ನನ್ನ ಸಿಂಹಾಸನವನ್ನು ಘನತೆಗೇರಿಸುವೆನು; ಉತ್ತರ ದಿಕ್ಕಿನ ಕಡೆಗಿರುವ ಸಮೂಹ ಪರ್ವತದ ಮೇಲೆಯೂ ನಾನು ಆಸೀನನಾ ಗುವೆನು.
ಆದಾಗ್ಯೂ ಪಾತಾಳದ ಕುಣಿಯ ಪಾರ್ಶ್ವಗಳಿಗೆ ಇಳಿಸಲ್ಪಡುವಿ.
ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.
ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.
ಅವರ ಗುಡಾರಗಳನ್ನೂ ಮಂದೆಗಳನ್ನೂ ತಕ್ಕೊಳ್ಳುವರು; ಅವರ ತೆರೆಗಳನ್ನೂ ಎಲ್ಲಾ ಪಾತ್ರೆ ಗಳನ್ನೂ ಒಂಟೆಗಳನ್ನೂ ವಶಮಾಡಿಕೊಳ್ಳುವರು; ಸುತ್ತಲೂ ಭಯವೆಂದು ಅವರಿಗೆ ಕೂಗುವರು.
ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
ಬಿತ್ತುವವನನ್ನೂ ಸುಗ್ಗಿ ಕಾಲದಲ್ಲಿ ಕುಡುಗೋಲು ಹಿಡಿಯುವವನನ್ನೂ ಬಾಬೆಲಿನೊಳ ಗಿಂದ ಕಡಿದು ಬಿಡಿರಿ; ಕಷ್ಟಪಡಿಸುವ ಕತ್ತಿಯ ಭಯದಿಂದ ಅವರು ತಮ್ಮ ತಮ್ಮ ಜನರ ಬಳಿಗೆ ತಿರುಗಿಕೊಳ್ಳುವರು; ತಮ್ಮ ತಮ್ಮ ದೇಶಗಳಿಗೆ ಓಡಿ ಹೋಗುವರು.
ನಿನ್ನ ಮಿತಿಯಿಲ್ಲದ ವ್ಯಾಪಾರದಿಂದ ನಿನ್ನಲ್ಲಿ ಬಲಾತ್ಕಾರವು ತುಂಬಿ ನೀನು ಪಾಪಿಯಾದಿ; ಆದದರಿಂದ ನಿನ್ನನ್ನು ಅಪವಿತ್ರನೆಂದು ದೇವರ ಪರ್ವತದೊಳಗಿನಿಂದ ನಾನು ಬಿಸಾಡುವೆನು. ಓ ಮುಚ್ಚುವ ಕೆರೂಬಿಯೇ, ಬೆಂಕಿಯ ಕಲ್ಲುಗಳ ಮಧ್ಯದಿಂದ ನಿನ್ನನ್ನು ನಾಶಮಾಡುವೆನು.
ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು