ನಿನ್ನ ಸಂಗಡ ಒಟ್ಟುಗೂಡಿದ ಮನುಷ್ಯರೆಲ್ಲರು ನಿನ್ನನ್ನು ಮೇರೆಯ ವರೆಗೂ ತಂದಿದ್ದಾರೆ: ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸ ಮಾಡಿ ನಿನಗೆ ವಿರೋಧವಾಗಿ ಜಯಹೊಂದಿದ್ದಾರೆ; ನಿನ್ನ ರೊಟ್ಟಿಯನ್ನು ತಿನ್ನುವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ; ಅವನಲ್ಲಿ ವಿವೇಕವೇನೂ ಇಲ್ಲ.
Cross references
ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
ಆದರೆ ನೀನು, ಓ ಕರ್ತನೇ, ನನ್ನ ಮೇಲೆ ಕರುಣೆತೋರಿಸಿ ನನ್ನನ್ನು ಏಳಮಾಡು; ಆಗ ನಾನು ಅವರಿಗೆ ಪ್ರತೀಕಾರವನ್ನು ಮಾಡುವೆನು.
ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವದು. ನಾನು ಒಳ್ಳೇದಕ್ಕಲ್ಲ ಕೆಟ್ಟದ್ದಕ್ಕೆ ಈ ಪಟ್ಟಣದ ಮೇಲೆ ನನ್ನ ದೃಷ್ಟಿಯನ್ನಿಟ್ಟಿದ್ದೇನೆಂದು ಕರ್ತನು ಹೇಳುತ್ತಾನೆ; ಅದು ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವದು; ಅವನು ಅದನ್ನು ಬೆಂಕಿ ಯಿಂದ ಸುಟ್ಟುಬಿಡುವನು.
ಇದಲ್ಲದೆ ಯಾಜಕರ ಪ್ರಾಣವನ್ನು ಕೊಬ್ಬಿನಿಂದ ತುಂಬಿಸುವೆನು; ನನ್ನ ಜನರು ನನ್ನ ಒಳ್ಳೇತನದಿಂದ ತೃಪ್ತಿಪಡುವರೆಂದು ಕರ್ತನು ಅನ್ನುತ್ತಾನೆ.
ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ.
ಎಫ್ರಾಯಾಮು ಸಹ ಹೃದಯವಿಲ್ಲದ ಬುದ್ಧಿಹೀನವಾದ ಪಾರಿವಾಳದ ಹಾಗಿದ್ದಾನೆ; ಅವರು ಐಗುಪ್ತವನ್ನು ಕರೆಯುತ್ತಾರೆ, ಅವರು ಅಶ್ಯೂರಕ್ಕೆ ಹೋಗುತ್ತಾರೆ.
ಹೆರು ವವಳ ಸಂಕಟಗಳು ಅವನ ಮೇಲೆಯೇ ಬರುವವು. ಅವನು ಬುದ್ಧಿಹೀನ ಮಗನಾಗಿದ್ದಾನೆ; ಮಕ್ಕಳು ಹುಟ್ಟುವ ಸ್ಥಳದಲ್ಲಿ ಅವನು ಬಹಳ ಹೊತ್ತು ನಿಲ್ಲುವದಿಲ್ಲ.
ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
ನೀನು ಕಂಡ ಆ ಹತ್ತು ಕೊಂಬುಗಳು ರಾಜ್ಯವನ್ನು ಇನ್ನೂ ಹೊಂದದಿರುವ ಹತ್ತು ಮಂದಿ ರಾಜರು. ಅವರು ಮೃಗದೊಂದಿಗೆ ರಾಜರಂತೆ ಒಂದು ತಾಸಿನವರೆಗೆ ಅಧಿಕಾರವನ್ನು ಹೊಂದುತ್ತಾರೆ.