ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ?
Cross references
ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.
ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
ಇಹಲೋಕಜ್ಞಾನವು ದೇವರ ಮುಂದೆ ಹುಚ್ಚುತನವಾಗಿದೆ. ಯಾಕಂದರೆ--ಆತನು ಜ್ಞಾನಿ ಗಳನ್ನು ಅವರ ಸ್ವಂತತಂತ್ರದಲ್ಲಿಯೇ ಹಿಡು ಕೊಳ್ಳುತ್ತಾನೆಂತಲೂ