ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
Cross references
ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.
ಆದದರಿಂದ ಈಗ ಕರ್ತನಿಗೆ ಭಯಪಟ್ಟು ಯಥಾರ್ಥದಲ್ಲಿಯೂ ಸತ್ಯದಲ್ಲಿಯೂ ಆತನನ್ನು ಸೇವಿಸಿರಿ. ನಿಮ್ಮ ತಂದೆಗಳು ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಸೇವಿ ಸಿದ ದೇವರುಗಳನ್ನು ತೊರೆದುಬಿಟ್ಟು ಕರ್ತನನ್ನೇ ನೀವು ಸೇವಿಸಿರಿ.
ಕಿವಿಯು ನುಡಿಗಳನ್ನು ಶೋಧಿಸುವದಿಲ್ಲವೇ? ಬಾಯಿಯು ಆಹಾರವನ್ನು ರುಚಿನೋಡುವದಿಲ್ಲವೇ?
ಆಹಾರವನ್ನು ಬಾಯಿ ರುಚಿನೋಡುವಂತೆ, ಕಿವಿಯು ನುಡಿಗಳನ್ನು ಪರಿಶೋಧಿಸುತ್ತದೆ.
ಆತನು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವಷ್ಟು ತಿಳುವ ಳಿಕೆಯು ಬರುವ ತನಕ ಬೆಣ್ಣೆ ಮತ್ತು ಜೇನನ್ನು ತಿನ್ನುವನು.
ನೀವು ಬದುಕುವ ಹಾಗೆಯೂ ನೀವು ಹೇಳುವ ಪ್ರಕಾರ ಸೈನ್ಯಾಧಿಪತಿಯಾದ ಕರ್ತನು, ನಿಮ್ಮ ಸಂಗಡ ಇರುವ ಹಾಗೆಯೂ ಕೆಟ್ಟದ್ದನ್ನು ಬಿಟ್ಟು ಒಳ್ಳೆಯ ದನ್ನು ಹುಡುಕಿರಿ.
ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ,
ಆದರೆ ಆತನು ತಿರುಗಿಕೊಂಡು ಪೇತ್ರನಿಗೆ--ಸೈತಾನನೇ, ನನ್ನ ಹಿಂದೆ ಹೋಗು; ನೀನು ನನಗೆ ಅಭ್ಯಂತರವಾಗಿದ್ದೀ; ನೀನು ದೇವರವುಗಳನ್ನಲ್ಲ,ಮನುಷ್ಯರ ಆಲೋಚನೆಗಳನ್ನೇ ಮಾಡುತ್ತೀ ಅಂದನು.
ಆದರೆ ನನ್ನಲ್ಲಿ ವಿಶ್ವಾಸವಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವ ನಾದರೂ ಅಭ್ಯಂತರವಾದರೆ ಅವನ ಕೊರಳಿಗೆ ಬೀಸುವ ಕಲ್ಲನ್ನು ನೇತು ಹಾಕಿ ಅವನನ್ನು ಸಮುದ್ರದ ಆಳದಲ್ಲಿ ಮುಳುಗಿಸಿಬಿಡುವದು ಅವನಿಗೆ ಒಳ್ಳೇದು.
ಪೇತ್ರನು ಪ್ರತ್ಯುತ್ತರವಾಗಿ ಆತನಿಗೆ-- ಎಲ್ಲರೂ ನಿನ್ನ ವಿಷಯದಲ್ಲಿ ಅಭ್ಯಂತರಪಟ್ಟರೂ ನಾನು ಎಂದಿಗೂ ಅಭ್ಯಂತರಪಡುವದಿಲ್ಲ ಅಂದನು.
ಯೇಸು ತನ್ನ ಬಳಿಗೆ ಬರುವ ನತಾನಯೇಲನನ್ನು ಕಂಡು ಅವನ ವಿಷಯವಾಗಿ--ಇಗೋ, ಇವನು ನಿಜ ವಾಗಿಯೂ ಇಸ್ರಾಯೇಲನು; ಇವನಲ್ಲಿ ಕಪಟವಿಲ್ಲ ಅಂದನು.
ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
ಈ ವಿಷಯ ದೇವರ ಮುಂದೆಯೂ ಮನುಷ್ಯರ ಮುಂದೆಯೂ ಯಾವಾಗಲೂ ನಾನು ದೋಷರಹಿತವಾದ ಮನಸ್ಸಾಕ್ಷಿಯುಳ್ಳವನಾಗಿರುವಂತೆ ಅಭ್ಯಾಸಮಾಡಿಕೊಳ್ಳುತ್ತೇನೆ.
ಆತನ ಚಿತ್ತವನ್ನು ತಿಳಿದವನಾಗಿ ನ್ಯಾಯಪ್ರಮಾಣದಿಂದ ಶಿಕ್ಷಿತ ನಾಗಿದ್ದು ಅತ್ಯುತ್ತಮವಾದವುಗಳನ್ನು ಮೆಚ್ಚುವವನಾ ಗಿದ್ದೀ;
ಆದರೆ ನನಗೆ ಮನಸ್ಸಿಲ್ಲದ್ದನ್ನು ಮಾಡಿ ದರೆ ನ್ಯಾಯಪ್ರಮಾಣವು ಉತ್ತಮವಾದದ್ದೆಂದು ಒಪ್ಪಿ ಕೊಂಡ ಹಾಗಾಯಿತು.
ಹೀಗಿದ್ದಾಗ್ಯೂ ಒಳಮನುಷ್ಯನಿಗನು ಗುಣವಾಗಿ ದೇವರ ನಿಯಮದಲ್ಲಿ ಆನಂದಪಡುವವ ನಾಗಿದ್ದೇನೆ.
ಶರೀರ ಸಂಬಂಧವಾದ ಮನಸ್ಸು ದೇವರಿಗೆ ಶತ್ರುತ್ವವು; ಕಾರಣವೇನಂದರೆ ಅಂಥ ಮನಸ್ಸು ದೇವರ ನಿಯಮಕ್ಕೆ ಒಳಪಡುವದಿಲ್ಲ, ಒಳಪಡುವದಕ್ಕಾಗುವದೂ ಇಲ್ಲ.
ಇಹಲೋಕವನ್ನು ಅನುಸರಿಸದೆ ಉತ್ತಮ ವಾದದ್ದೂ ಮೆಚ್ಚಿಕೆಯಾದದ್ದೂ ಪರಿಪೂರ್ಣ ವಾದದ್ದೂ ಆಗಿರುವ ದೇವರ ಚಿತ್ತವೇನೆಂದು ನೀವು ವಿವೇಚಿಸಿ ತಿಳಿದುಕೊಳ್ಳುವಂತೆ ನೂತನ ಮನಸ್ಸನ್ನು ಹೊಂದಿಕೊಂಡು ರೂಪಾಂತರಗೊಂಡವರಾಗಿರ್ರಿ.
ಪ್ರೀತಿಯು ನಿಷ್ಕಪಟವಾಗಿರಲಿ ಕೆಟ್ಟತನವನ್ನು ಹೇಸಿ ಕೊಂಡು ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.
ದೇವರ ಕಾರ್ಯವನ್ನು ಆಹಾರದ ನಿಮಿತ್ತವಾಗಿ ಕೆಡಿಸಬಾರದು. ಎಲ್ಲಾ ಪದಾರ್ಥಗಳೂ ಶುದ್ಧವೇ ಹೌದು; ಆದರೆ ವಿಘ್ನವನ್ನುಂಟು ಮಾಡು ವಂತೆ ತಿನ್ನುವವನಿಗೆ ಅದು ಕೆಟ್ಟದ್ದಾಗಿದೆ.
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
ಆದದರಿಂದ ಆಹಾರವು ನನ್ನ ಸಹೋದರನಿಗೆ ಅಭ್ಯಂತರವಾದರೆ ನಾನು ನನ್ನ ಸಹೋದರನಿಗೆ ಅಭ್ಯಂತರಪಡಿಸದಂತೆ ಎಂದಿಗೂ ಮಾಂಸ ತಿನ್ನುವದಿಲ್ಲ.
ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ಅಭ್ಯಂತರವಾಗಬೇಡಿರಿ.ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
ನಾವು ಮನುಷ್ಯಜ್ಞಾನದಿಂದಲ್ಲ, ಆದರೆ ಸರಳತೆಯಿಂದಲೂ ಭಕ್ತಿಯ ನಿಷ್ಕಪಟದಿಂದಲೂ ದೇವರ ಕೃಪೆಯಿಂದಲೂ ಲೋಕದಲ್ಲಿ ಮತ್ತು ಇನ್ನೂ ಹೆಚ್ಚಾಗಿ ನಿಮ್ಮ ವಿಷಯದಲ್ಲಿ ನಡಕೊಂಡೆವೆಂದು ನಮ್ಮ ಮನಸ್ಸಿನ ಸಾಕ್ಷಿಯೇ ನಮ ಗಿರುವ ಸಂತೋಷವಾಗಿದೆ.
ನಾವು ದೇವರ ವಾಕ್ಯವನ್ನು ಕಲಬೆರಿಕೆ ಮಾಡುವವರಾದ ಹೆಚ್ಚು ಪಾಲಿನ ಜನರ ಹಾಗಿರದೆ ನಿಷ್ಕಪಟಿಗಳಾಗಿ ದೇವರಿಂದ ಹೊಂದಿದ ವರಿಗೆ ತಕ್ಕ ಹಾಗೆ ಕ್ರಿಸ್ತನಲ್ಲಿದ್ದುಕೊಂಡು ದೇವರ ಸಮಕ್ಷಮದಲ್ಲಿಯೇ ಮಾತನಾಡುತ್ತೇವೆ.
ಸೇವೆಯು ದೂಷಿಸಲ್ಪಡದಂತೆ ಯಾವ ವಿಷಯ ದಲ್ಲಿಯೂ ನಿಂದೆಗೆ ಅವಕಾಶ ಕೊಡಬೇಡಿರಿ;
ನಾನು ಇದನ್ನು ಆಜ್ಞೆಯಂತೆ ಹೇಳದೆ ಇತರರ ಆಸಕ್ತಿಯನ್ನು ತೋರಿಸಿಕೊಟ್ಟು ನಿಮ್ಮ ಪ್ರೀತಿಯು ಯಥಾರ್ಥವಾದದ್ದೆಂಬದನ್ನು ಸಿದ್ಧಾಂತಪಡಿಸುವದ ಕ್ಕಾಗಿಯೇ ಹೇಳುತ್ತೇನೆ.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಸಹೋದರರೇ, ನಾನಾದರೋ ಸುನ್ನತಿಯಾಗ ಬೇಕೆಂದು ಇನ್ನೂ ಸಾರುವವನಾಗಿದ್ದರೆ ಇನ್ನು ನನಗೆ ಹಿಂಸೆಯಾಗುವದು ಯಾಕೆ? ಆ ಪಕ್ಷದಲ್ಲಿ ಶಿಲುಬೆಯ ದೆಸೆಯಿಂದ ಉಂಟಾದ ಆಕ್ಷೇಪವು ನಿಂತು ಹೋಯಿ ತಲ್ಲಾ?
ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿ ತಲೆಯು ತಾನೇ ಆಗಿರುವ ಕ್ರಿಸ್ತನಲ್ಲಿ ಬೆಳೆಯಿರಿ.
ಕರ್ತನಿಗೆ ಮೆಚ್ಚಿಕೆಯಾದದ್ದೇ ನೆಂಬದನ್ನು ಪರಿಶೋಧಿಸಿರಿ.
ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಯಥಾರ್ಥವಾಗಿ ಪ್ರೀತಿಸುವವರೆಲ್ಲರ ಮೇಲೆ ಕೃಪೆಯು ಇರಲಿ. ಆಮೆನ್.
ಒಳ್ಳೇ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ಯೇಸು ಕ್ರಿಸ್ತನ ದಿನದವರೆಗೆ ಸಿದ್ದಿಗೆ ತರುವನೆಂದು ನನಗೆ ಭರವಸ ವುಂಟು.
ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನು ತನ್ನ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ ನಿಮ್ಮ ಹೃದಯಗಳನ್ನು ದೃಢಪಡಿಸಿ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿ ಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.
ಆದರೆ ಎಲ್ಲವನ್ನು ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ನೀವು ಇಷ್ಟರೊಳಗೆ ಬೋಧಕರಾಗಿರ ಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲ ಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.