ಯೇಸು ಕ್ರಿಸ್ತನ ಮೂಲಕ ನೀತಿಯೆಂಬ ಫಲಗಳಿಂದ ತುಂಬಿದವರಾಗಿ ದೇವರಿಗೆ ಮಹಿಮೆಯನ್ನೂ ಸ್ತೋತ್ರ ವನ್ನೂ ತರುವವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.
Cross references
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
ಅವನು ಅದಕ್ಕೆ ಬೇಲಿ ಹಾಕಿ, ಅದರೊಳಗಿಂದ ಕಲ್ಲುಗಳನ್ನು ಆರಿಸಿ ತೆಗೆದು ಹಾಕಿ ಒಳ್ಳೇ ದ್ರಾಕ್ಷೆಯನ್ನು ನೆಟ್ಟು, ಅದರ ಮಧ್ಯದಲ್ಲಿ ಒಂದು ಬುರುಜನ್ನು ಕಟ್ಟಿ, ದ್ರಾಕ್ಷೇ ತೊಟ್ಟಿಯನ್ನು ಕೊರೆಯಿಸಿ, ತೋಟವು ಒಳ್ಳೆ ದ್ರಾಕ್ಷೇ ಹಣ್ಣನ್ನು ಕೊಡುವದೆಂದು ಎದುರು ನೋಡು ತ್ತಿರಲು, ಅದು ಕಾಡುಹಣ್ಣನ್ನು ಬಿಟ್ಟಿತು.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವದೋ ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳಿಸುವದೋ ಹಾಗೆಯೇ ದೇವರಾದ ಕರ್ತನ ನೀತಿಯನ್ನೂ ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವನು.
ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
ಆತನು ಈ ಸಾಮ್ಯವನ್ನು ಕೂಡ ಹೇಳಿದನು: ಒಬ್ಬಾನೊಬ್ಬ ಮನುಷ್ಯನಿಗೆ ತನ್ನ ದ್ರಾಕ್ಷೇತೋಟದಲ್ಲಿ ನೆಡಲ್ಪಟ್ಟಿದ್ದ ಒಂದು ಅಂಜೂರದ ಮರವಿತ್ತು; ಅವನು ಬಂದು ಅದರಲ್ಲಿ ಫಲವನ್ನು ಹುಡುಕಿದಾಗ ಒಂದೂ ಸಿಕ್ಕಲಿಲ್ಲ.
ನನ್ನಲ್ಲಿ ಫಲಫಲಿಸದ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚಾಗಿ ಫಲಕೊಡುವ ಹಾಗೆ ಅದನ್ನು ಶುದ್ಧಿ ಮಾಡುತ್ತಾನೆ.
ನನ್ನಲ್ಲಿ ನೆಲೆಗೊಂಡಿರ್ರಿ, ನಾನು ನಿಮ್ಮಲ್ಲಿ ನೆಲೆ ಗೊಂಡಿರುವೆನು. ಕೊಂಬೆಯು ದ್ರಾಕ್ಷೇಯಬಳ್ಳಿಯಲ್ಲಿ ನೆಲೆಗೊಂಡಿರದಿದ್ದರೆ ಹೇಗೆ ತನ್ನಷ್ಟಕ್ಕೆ ತಾನೇ ಫಲ ಕೊಡಲಾರದೋ ಹಾಗೆಯೇ ನೀವೂ ನನ್ನಲಿ ನೆಲೆಗೊಂಡಿರದಿದ್ದರೆ ಫಲಕೊಡಲಾರಿರಿ.
ನೀವು ಬಹಳ ಫಲವನ್ನು ಕೊಡುವ ದರಿಂದ ನನ್ನ ತಂದೆಗೆ ಮಹಿಮೆ ಉಂಟಾಗುವದು; ಹೀಗೆ ನೀವು ನನ್ನ ಶಿಷ್ಯರಾಗುವಿರಿ.
ನೀವು ನನ್ನನ್ನು ಆರಿಸಿಕೊಂಡಿಲ್ಲ; ಆದರೆ ನಾನು ನಿಮ್ಮನ್ನು ಆರಿಸಿ ಕೊಂಡು, ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ನೆಲೆಗೊಂಡಿರುವಂತೆಯೂ ನಿಮ್ಮನ್ನು ನೇಮಿಸಿದ್ದೇನೆ. ಆದಕಾರಣ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಆತನು ಅದನ್ನು ನಿಮಗೆ ಕೊಡುವನು.
ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧತೆಯೇ ನಿಮಗೆ ಫಲ; ಅದರ ಅಂತ್ಯವು ನಿತ್ಯಜೀವವೇ.ಯಾಕಂದರೆ ಪಾಪದ ಸಂಬಳ ಮರಣ. ಆದರೆ ದೇವರ ದಾನವು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮುಖಾಂತರ ನಿತ್ಯಜೀವವು.
ನಾನು ಈ ಕೆಲಸವನ್ನು ತೀರಿಸಿಕೊಂಡು ಈ ಫಲವನ್ನು ಭದ್ರವಾಗಿ ಅಲ್ಲಿಯವರ ವಶಕ್ಕೆ ಕೊಟ್ಟಮೇಲೆ ನಿಮ್ಮ ಮಾರ್ಗವಾಗಿ ಸ್ಪೇನಿಗೆ ಬರುವೆನು.
ಆದದರಿಂದ ನೀವು ತಿಂದರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನು ದೇವರ ಮಹಿಮೆಗಾಗಿ ಮಾಡಿರಿ.
ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.)
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಕ್ರಿಸ್ತನ ಮಹಿಮೆಯು ಸ್ತುತಿಸಲ್ಪಡುವಂತೆ ಆತನಲ್ಲಿ ನಾವು ಮೊದಲು ನಂಬಿಕೆಯಿಟ್ಟೆವು.
ಆತನ ಮಹಿಮೆಯ ಸ್ತುತಿಗೋಸ್ಕರ ಕೊಂಡುಕೊಂಡ ಸ್ವಾಸ್ಥ್ಯದವರಿಗೆ ವಿಮೋಚನೆಯಾ ಗುವ ತನಕ ಆತನು (ಪವಿತ್ರಾತ್ಮನು) ನಮ್ಮ ಬಾಧ್ಯತೆಗೆ ಸಂಚಕಾರನಾಗಿದ್ದಾನೆ.
ದೇವರು ಮುಂದಾಗಿ ನೇಮಿಸಿದ ಸತ್ಕ್ರಿಯೆ ಗಳಲ್ಲಿ ನಾವು ನಡೆಯುವಂತೆ ಕ್ರಿಸ್ತ ಯೇಸುವಿನಲ್ಲಿ ಸೃಷ್ಟಿಸಲ್ಪಟ್ಟವರಾದ ನಾವು ಆತನ ಕೆಲಸವಾಗಿದ್ದೇವೆ.
ಆತ್ಮನ ಫಲವು ಎಲ್ಲಾ ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯ ದಲ್ಲಿಯೂ ಇರುತ್ತದೆ.
ನಾನು ನಿಮ್ಮಿಂದ ದಾನವನ್ನು ಅಪೇಕ್ಷಿಸುವೆನೆಂತಲ್ಲ ಆದರೆ ನಿಮ್ಮ ಲೆಕ್ಕಕ್ಕೆ ಸಮೃದ್ಧಿಯಾದ ಫಲವನ್ನೇ ಅಪೇಕ್ಷಿಸು ತ್ತೇನೆ. ಆದರೆ ಬೇಕಾದದ್ದೆಲ್ಲ ನನಗುಂಟು, ಸಮೃದ್ಧಿ ಯಾಯಿತು.
ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳುಕೊಂಡ ದಿವಸದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ಲೋಕದಲ್ಲೆಲ್ಲಾ ಫಲಕೊಟ್ಟಂತೆ ನಿಮ್ಮಲ್ಲಿಯೂ ಫಲ ಕೊಡುತ್ತದೆ.
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
ಹೀಗಾದರೆ ನಮ್ಮ ದೇವರ ಮತ್ತು ಕರ್ತನಾದ ಯೇಸು ಕ್ರಿಸ್ತನ ಕೃಪೆಗನುಸಾರವಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರು ನಿಮ್ಮಲ್ಲಿ ಮಹಿಮೆ ಹೊಂದುವದು, ಆತನಲ್ಲಿ ನೀವೂ ಮಹಿಮೆ ಹೊಂದುವಿರಿ.
ಯಾವ ಶಿಕ್ಷೆಯಾದರೂ ತತ್ಕಾಲಕ್ಕೆ ಸಂತೋಷಕರ ವಾಗಿ ತೋಚದೆ ಕ್ರೂರವಾಗಿ ತೋಚುತ್ತದೆ; ಆದರೂ ತರುವಾಯ ಅದು ಶಿಕ್ಷೆ ಹೊಂದಿದವರಿಗೆ ಸಮಾಧಾನ ವುಳ್ಳ ನೀತಿಯ ಫಲವನ್ನು ಕೊಡುತ್ತದೆ.
ಆದದರಿಂದ ಆತನ ಮೂಲಕ ವಾಗಿಯೇ ದೇವರಿಗೆ ಸ್ತೋತ್ರದ ಯಜ್ಞವನ್ನು ಎಡೆ ಬಿಡದೆ ಸಮರ್ಪಿಸೋಣ, ಅಂದರೆ ನಮ್ಮ ತುಟಿಗಳಿಂದ ಆತನ ನಾಮಕ್ಕೆ ಸಲ್ಲಿಸುವ ಸ್ತೋತ್ರಗಳ ಫಲವೇ ಆದಾಗಿದೆ.
ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮಸಂಬಂಧ ವಾದ ಮಂದಿರವಾಗುವದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕ ವಾದ ಆತ್ಮೀಯ ಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
ನೀವೆಲ್ಲರು ದೇವರ ವಿವಿಧ ಕೃಪೆಯ ವಿಷಯದಲ್ಲಿ ಒಳ್ಳೇ ಮನೆವಾರ್ತೆಯವರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ವರವನ್ನು ಎಲ್ಲರ ಸೇವೆಯಲ್ಲಿ ಉಪಯೋಗಿಸಲಿ.
ನೀವು ಕ್ರಿಸ್ತನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ ಸಂತೋಷಪಡಿರಿ; ಯಾಕಂದರೆ ಮಹಿಮೆ ಯುಳ್ಳ ದೇವರ ಆತ್ಮನು ನಿಮ್ಮ ಮೇಲೆ ನೆಲೆಗೊಂಡಿ ದ್ದಾನಲ್ಲಾ. ಅವರ ವಿಷಯದಲ್ಲಿ ಆತನು ದೂಷಿಸ ಲ್ಪಡುತ್ತಾನೆ; ಆದರೆ ನಿಮ್ಮ ವಿಷಯದಲ್ಲಿ ಆತನು ಮಹಿಮೆ ಹೊಂದುತ್ತಾನೆ.