ಕೆಲವರು ಹೊಟ್ಟೇಕಿಚ್ಚುಪಟ್ಟು ಭೇದ ಹುಟ್ಟಿಸಬೇಕೆಂಬ ಭಾವನೆಯಿಂದ ಬೇರೆ ಕೆಲವರು ಒಳ್ಳೇಭಾವದಿಂದ ಕ್ರಿಸ್ತನನ್ನು ಪ್ರಚುರಪಡಿಸುತ್ತಾರೆ.
Cross references
ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡು ತ್ತಾರೆ. ಅವರು ತಮ್ಮ ಜ್ಞಾಪಕಪಟ್ಟಿಗಳನ್ನು ಅಗಲಮಾಡಿ ಉಡುಪುಗಳ ಅಂಚುಗಳನ್ನು ಉದ್ದ ಮಾಡುತ್ತಾ
ಪ್ರತಿದಿನ ದೇವಾಲಯದಲ್ಲಿಯೂ ಪ್ರತಿಯೊಂದು ಮನೆಯ ಲ್ಲಿಯೂ ಯೇಸು ಕ್ರಿಸ್ತನ ವಿಷಯವಾಗಿ ಎಡೆಬಿಡದೆ ಬೋಧಿಸುತ್ತಾ ಸಾರುತ್ತಾ ಇದ್ದರು.
ಫಿಲಿಪ್ಪನು ಸಮಾರ್ಯ ವೆಂಬ ಪಟ್ಟಣಕ್ಕೆ ಹೋಗಿ ಅಲ್ಲಿರುವವರಿಗೆ ಕ್ರಿಸ್ತನನ್ನು ಪ್ರಕಟಿಸಿದನು.
ಅದಕ್ಕೆ ಫಿಲಿಪ್ಪನು ತನ್ನ ಬಾಯನ್ನು ತೆರೆದು ಅದೇ ಬರಹದಿಂದ ಆರಂಭಿಸಿ ಅವನಿಗೆ ಯೇಸುವಿನ ವಿಷಯವನ್ನು ಸಾರಿದನು.
ಅವನು ಕೂಡಲೆ ಸಭಾಮಂದಿರಗಳಲ್ಲಿ ಕ್ರಿಸ್ತನ ವಿಷಯವಾಗಿ ಆತನೇ ದೇವಕುಮಾರನೆಂದು ಸಾರಿ ದನು.
ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ಅವರಲ್ಲಿ ಕೆಲವರು ಕುಪ್ರ ಮತ್ತು ಕುರೇನ್ಯದವರಾಗಿದ್ದರು. ಅವರು ಅಂತಿಯೋಕ್ಯಕ್ಕೆ ಬಂದು ಗ್ರೀಕರ ಸಂಗಡ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾಗಿ ಸಾರಿದರು.
ಸಹೋದರರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ ವಿಘ್ನಗಳನ್ನೂ ನಿಮ್ಮಲ್ಲಿ ಉಂಟು ಮಾಡುವವರನ್ನು ಗುರುತಿಟ್ಟು ಅವರನ್ನು ಬಿಟ್ಟು ತೊಲಗಿಹೋಗಿರಿ ಎಂದು ನಾನು ನಿಮ್ಮನ್ನು ಬೇಡಿ ಕೊಳ್ಳುತ್ತೇನೆ.
ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮೊಳಗೆ ಹೊಟ್ಟೇಕಿಚ್ಚು, ಜಗಳ, ಭೇದಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದು ಮನುಷ್ಯರಂತೆ ನಡೆಯುತ್ತೀರಲ್ಲವೇ?
ನನಗಿರುವದೆಲ್ಲವನ್ನು ಬಡವರಿಗೆ ಅನ್ನದಾನ ಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿ ಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.
ನಾವು ಅಂದರೆ ನಾನೂ ಸಿಲ್ವಾನನೂ ತಿಮೊಥೆಯನೂ ನಿಮ್ಮಲ್ಲಿ ಸಾರಿದ ದೇವರ ಮಗನಾದ ಯೇಸು ಕ್ರಿಸ್ತನು ಹೌದೆಂತಲೂ ಅಲ್ಲವೆಂತಲೂ ಇರುವದಿಲ್ಲ. ಆದರೆ ಆತನಲ್ಲಿ ಹೌದೆಂಬದೇ ನೆಲೆ ಗೊಂಡಿದೆ.
ನಮ್ಮನ್ನು ನಾವೇ ಅಲ್ಲ, ಆದರೆ ನಮ್ಮನ್ನು ಯೇಸುವಿನ ನಿಮಿತ್ತ ನಿಮ್ಮ ಸೇವಕರೆಂದು ಕರ್ತನಾದ ಕ್ರಿಸ್ತ ಯೇಸುವನ್ನೇ ಸಾರುತ್ತೇವೆ.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ನಾನು ಬಂದಾಗ ಒಂದು ವೇಳೆ ನೀವು ನನ್ನ ಇಷ್ಟದ ಪ್ರಕಾರ ಇರುವದಿಲ್ಲವೇನೋ, ನಾನು ನಿಮ್ಮ ಇಷ್ಟದ ಪ್ರಕಾರ ತೋರುವದಿಲ್ಲವೇನೋ, ಒಂದು ವೇಳೆ ನಿಮ್ಮಲ್ಲಿ ವಾಗ್ವಾದಗಳು ಹೊಟ್ಟೆಕಿಚ್ಚು ಕೋಪ ಜಗಳ ಚಾಡಿ ಹೇಳುವದು ಕಿವಿಯೂದುವದು ಉಬ್ಬಿಕೊಳ್ಳುವದು ಕಲಹ ಎಬ್ಬಿಸುವದು ಇವುಗಳು ಕಾಣಬಇದಲ್ಲದೆ ನಾನು ತಿರಿಗಿ ಬಂದಾಗ ನಿಮ್ಮ ಮಧ್ಯದಲ್ಲಿ ನಾನು ಕುಂದಿಹೋಗು ವಂತೆ ನನ್ನ ದೇವರು ಮಾಡಾನೆಂತಲೂ ಅಶುದ್ಧತೆ ಹಾದರತನ ಬಂಡುತನಗಳನ್ನು ನಡಿಸಿ ಪಶ್ಚಾತ್ತಾಪ ಪಡದೆ ಆಗಲೇ ಪಾಪ ಮಾಡಿದ ಅನೇಕರ ವಿಷಯವಾಗಿ ನಾನು ವ್ಯಥೆಪಡಬೇಕಾದೀತೆಂತಲೂ ನನಗೆ ಭಯವುಂಟು.
ಕಳ್ಳತನದಿಂದ ಸೇರಿಕೊಂಡ ಸುಳ್ಳು ಸಹೋ ದರರು ನಮ್ಮನ್ನು ದಾಸತ್ವದೊಳಗೆ ಸಿಕ್ಕಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿ ನಮಗೆ ದೊರಕಿರುವ ಸ್ವಾತಂತ್ರ್ಯ ವನ್ನು ಗೂಢವಾಗಿ ವಿಚಾರಿಸುವದಕ್ಕೆ ಮರಸಿಕೊಂಡು ಬಂದವರು.
ಆ ಬೇರೆ ತರದವರಾದರೋ ನನ್ನ ಬೇಡಿಗಳಿಗೆ ಸಂಕಟವನ್ನು ಕೂಡಿಸಬೇಕೆಂದು ಯೋಚಿಸಿ ಕ್ರಿಸ್ತನನ್ನು ಯಥಾರ್ಥವಾಗಿ ಪ್ರಸಿದ್ಧಪಡಿಸದೆ ಕಕ್ಷೀಭಾವದಿಂದ ಪ್ರಸಿದ್ದಿಪಡಿಸುತ್ತಾರೆ.
ಕಲಹದಿಂದಾಗಲಿ ಒಣ ಹೆಮ್ಮೆಯಿಂದಾಗಲಿ ಯಾವ ದನ್ನೂ ಮಾಡದೆ ಪ್ರತಿಯೊಬ್ಬನು ದೀನ ಮನಸ್ಸಿನಿಂದ ಬೇರೆಯವರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ.
ದೇವಭಕ್ತಿಯ ಮರ್ಮವು ಮಹತ್ವವುಳ್ಳದ್ದೆಂಬದು ತರ್ಕವಿಲ್ಲದ್ದು, ಅದು ಯಾವದಂದರೆ--ದೇವರು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮಸಂಬಂಧವಾಗಿ ನೀತಿವಂತನೆಂದು ನಿರ್ಣಯಿಸಲ್ಪಟ್ಟನು; ದೂತ ರಿಗೆ ಕಾಣಿಸಿಕೊಂಡನು; ಅನ್ಯಜನರಿಗೆ ಸಾರಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಮಹಿಮೆಗೆ ಸೇರಿಸಲ
ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?
ನಿಮ್ಮಲ್ಲಿರುವ ದೇವರ ಮಂದೆಯನ್ನು ಕಾಯಿರಿ; ಬಲಾತ್ಕಾರದಿಂದಲ್ಲ, ಆದರೆ ಇಷ್ಟಪೂರ್ವಕವಾಗಿಯೂ; ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧಮನಸ್ಸಿನಿಂದಲೂ ಮೇಲ್ವಿ ಚಾರಣೆ ಮಾಡಿರಿ.