ಹೇಗೆಂದರೆ, ನಾನು ಯಾವ ವಿಷಯದಲ್ಲಾದರೂ ನಾಚಿಕೆಪಡದೆ ಎಂದಿನಂತೆ ಈಗಲೂ ಸಹ ತುಂಬಾ ಧೈರ್ಯದಿಂದಿರುವದರಿಂದ ಬದುಕಿದರೂ ಸರಿಯೇ ಸತ್ತರೂ ಸರಿಯೇ ನನ್ನ ದೇಹದ ಮೂಲಕ ಕ್ರಿಸ್ತನಿಗೆ ಮಹಿಮೆಯುಂಟಾಗಬೇಕೆಂದು ನನಗೆ ಬಹಳ ಅಭಿಲಾಷೆಯೂ ನಿರೀಕ್ಷೆಯೂ ಉಂಟು.
Cross references
ಓ ನನ್ನ ದೇವರೇ, ನಾನು ನಿನ್ನಲ್ಲಿ ಭರವಸೆ ಇಡುತ್ತೇನೆ; ನಾನು ಆಶಾಭಂಗ ಪಡದಂತೆಮಾಡು; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.
ನನ್ನ ಪ್ರಾಣವೇ, ದೇವರಿಗಾಗಿ ಮಾತ್ರ ಕಾದಿರು; ನನ್ನ ನಿರೀಕ್ಷೆಯು ಆತನಿಂದಲೇ.
ನಾನು ನಾಚಿಕೆಪಡದ ಹಾಗೆ ನನ್ನ ಹೃದಯವು ನಿನ್ನ ನಿಯಮಗಳಲ್ಲಿ ಸಂಪೂರ್ಣವಾಗಿರಲಿ.
ನಿನ್ನ ವಾಕ್ಯಾನುಸಾರವಾಗಿ ನನ್ನನ್ನು ಎತ್ತಿಹಿಡಿ; ಆಗ ಬದುಕುವೆನು; ನನ್ನ ನಿರೀಕ್ಷೆಯ ನಿಮಿತ್ತ ನನ್ನನ್ನು ನಾಚಿಕೆಪಡಿಸಬೇಡ.
ನೀತಿವಂತರ ನಿರೀ ಕ್ಷೆಯು ಆನಂದಕರವಾಗಿರುವದು; ಆದರೆ ದುಷ್ಟರ ನಿರೀಕ್ಷೆಯು ನಾಶವಾಗುವದು.
ಖಂಡಿತವಾಗಿಯೂ ಅಂತ್ಯವು ಬರು ತ್ತದೆ; ನಿನ್ನ ನಿರೀಕ್ಷೆಯು ನಿರರ್ಥಕವಾಗದು.
ಆದರೆ ಇಸ್ರಾಯೇಲ್ಯರಾದರೋ ಶಾಶ್ವತವಾದ ರಕ್ಷಣೆಯೊಂದಿಗೆ ಕರ್ತನಲ್ಲಿ ರಕ್ಷಿಸಲ್ಪ ಡುವರು; ನೀವು ಯುಗಯುಗಾಂತರಕ್ಕೂ ನಾಚಿಕೆ ಪಡುವದಿಲ್ಲ ಇಲ್ಲವೆ ಮಾನಭಂಗಪಡುವದಿಲ್ಲ.
ಕರ್ತನಾದ ದೇವರು ನನಗೆ ಸಹಾಯ ಮಾಡುವನು; ಆದಕಾರಣ ನಾನು ಆಶಾಭಂಗಪಡುವ ದಿಲ್ಲ; ಆದದರಿಂದ ನನ್ನ ಮುಖವನ್ನು ಬೆಣಚುಕಲ್ಲಿನಂತೆ ಮಾಡಿಕೊಂಡಿದ್ದೇನೆ; ನಾನು ನಾಚಿಕೆಪಡಲಾರೆನೆಂದು ನನಗೆ ಗೊತ್ತು.
ಹೆದರಬೇಡ, ನಿನಗೆ ನಾಚಿಕೆಯಾಗುವದಿಲ್ಲ. ಇಲ್ಲವೆ ಗಾಬರಿ ಪಡಬೇಡ, ನಿನ್ನ ಯೌವನದ ಲಜ್ಜೆಯನ್ನು ಮರೆತು ಬಿಡುವಿ ನಿನ್ನ ವೈಧವ್ಯದಲ್ಲಿ ನಿನಗಾದ ನಿಂದೆಯನ್ನು ಎಂದಿಗೂ ನಿನ್ನ ಜ್ಞಾಪಕಕ್ಕೆ ತರುವದಿಲ್ಲ.
ಈಗ ನನ್ನ ಪ್ರಾಣವು ತತ್ತರಿಸುತ್ತದೆ. ನಾನು ಏನು ಹೇಳಲಿ? ತಂದೆಯೇ, ಈ ಗಳಿಗೆಯಿಂದ ನನ್ನನ್ನು ತಪ್ಪಿಸು; ಆದರೆ ಇದಕ್ಕಾಗಿಯೇ ನಾನು ಈ ಗಳಿಗೆಗೆ ಬಂದೆನು.
ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
ಇಲ್ಲವೆ ನೀವು ನಿಮ್ಮ ಅಂಗಗಳನ್ನು ಪಾಪಕ್ಕೆ ಒಳಪಡಿಸುವವರಾಗಿದ್ದು ಅನೀತಿಯನ್ನು ನಡಿಸುವ ಸಾಧನಗಳಾಗಮಾಡಬೇಡಿರಿ; ಆದರೆ ಸತ್ತವರೊಳಗಿಂದ ಜೀವಿಸುವವರೋ ಎಂಬಂತೆ ನೀತಿಕಾರ್ಯಗಳನ್ನು ನಡಿಸುವ ಸಾಧನಗಳನ್ನಾಗಿ ನಿಮ್ಮ ಅಂಗಗಳನ್ನು ದೇವರಿಗೆ ಒಳಪಡಿಸಿರಿ.
ನಿಮ್ಮ ಶರೀರದ ಬಲಹೀನತೆಯ ದೆಸೆಯಿಂದ ಮನುಷ್ಯ ರೀತಿಯಾಗಿ ನಾನು ಮಾತನಾಡುತ್ತೇನೆ. ಅಶುದ್ಧತ್ವಕ್ಕೆ ದಾಸರನ್ನಾಗಿ ನಿಮ್ಮ ಅಂಗಗಳನ್ನು ದುಷ್ಟತ್ವ ದಿಂದ ದುಷ್ಟತ್ವಕ್ಕೆ ಒಳಪಡಿಸಿದಂತೆಯೇ ಈಗ ಪರಿಶುದ್ಧತೆ ಗಾಗಿ ನಿಮ್ಮ ಅಂಗಗಳನ್ನು ನೀತಿಗೆ ದಾಸರನ್ನಾಗಿ ಒಳಪಡಿಸಿರಿ.
ದೇವಪುತ್ರರ ಪ್ರತ್ಯಕ್ಷತೆಯನ್ನು ಸೃಷ್ಟಿಯು ಲವಲವಿಕೆಯಿಂದ ಎದುರು ನೋಡುತ್ತಾ ಇದೆ.
ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ನಮ್ಮಲ್ಲಿ ಒಬ್ಬನಾದರೂ ತನಗಾಗಿ ಬದುಕುವದೂ ಇಲ್ಲ, ತನಗಾಗಿ ಸಾಯುವದೂ ಇಲ್ಲ.
ನೀವು ಕ್ರಯಕ್ಕೆ ಕೊಂಡುಕೊಳ್ಳಲ್ಪಟ್ಟವರಾಗಿದ್ದೀರಿ; ಆದದರಿಂದ ದೇವರ ಸೊತ್ತಾಗಿರುವ ನಿಮ್ಮ ದೇಹದಲ್ಲಿಯೂ ನಿಮ್ಮ ಆತ್ಮದಲ್ಲಿಯೂ ದೇವರನ್ನು ಮಹಿಮೆಪಡಿಸಿರಿ.
ಅದರಂತೆ ಮದುವೆಯಾದವಳಿಗೂ ಕನ್ನಿಕೆಗೂ ವ್ಯತ್ಯಾಸವುಂಟು; ಮದುವೆಯಾಗದವಳು ತಾನು ದೇಹಾತ್ಮಗಳಲ್ಲಿ ಪವಿತ್ರಳಾಗಿರಬೇಕೆಂದು ಕರ್ತನ ಕಾರ್ಯಗಳನ್ನು ಕುರಿತು ಚಿಂತಿಸುತ್ತಾಳೆ; ಮದುವೆ ಯಾದವಳು ತನ್ನ ಗಂಡನನ್ನು ಹೇಗೆ ಮೆಚ್ಚಿಸಬೇಕೆಂದು ಪ್ರಪಂಚದವುಗಳನ್ನು ಕುರಿತು
ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಷಯವಾಗಿ ನನಗಿರುವ ಸಂತೋಷದ ನಿಮಿತ್ತ ನಾನು ದಿನಾಲು ಸಾಯುತ್ತಲಿದ್ದೇನೆ ಎಂದು ಹೇಳುತ್ತೇನೆ.
ಕ್ರಿಸ್ತನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವ ದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನ ವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರ;
ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.
ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೆ ತಮಗೋಸ್ಕರ ಸತ್ತು ತಿರಿಗಿ ಎದ್ದು ಬಂದಾತನಿಗಾಗಿ ಜೀವಿಸಬೇಕೆಂತಲೇ ಆತನು ಎಲ್ಲರಿಗೋಸ್ಕರ ಸತ್ತನು.
ಯಾಕಂದರೆ ನಾನು ಅವನ ಮುಂದೆ ನಿಮ್ಮನ್ನು ಹೊಗಳಿದ್ದರಲ್ಲಿ ನಾಚಿಕೆಪಡಬೇಕಾಗಿ ಬರಲಿಲ್ಲ. ನಾವು ನಿಮಗೆ ಹೇಳಿದವುಗಳೆಲ್ಲಾ ಹೇಗೆ ಸತ್ಯವಾಗಿದ್ದವೋ ಹಾಗೆಯೇ ನಾವು ತೀತನ ಮುಂದೆ ಆಡಿದ ಹೊಗಳಿಕೆಯೂ ಸತ್ಯವೆಂದು ಕಂಡುಬಂತು.
ನಮಗಿರುವ ಅಧಿಕಾರವನ್ನು ಕುರಿತು ನಾವು ಒಂದು ವೇಳೆ ಹೆಚ್ಚಾಗಿ ಹೊಗಳಿಕೊಂಡರೂ ಹಾಗೆ ಹೊಗಳಿಕೊಳ್ಳುವದರಲ್ಲಿ ನಾನು ನಾಚಿಕಪಡುವದಿಲ್ಲ; ಆದರೆ ನಿಮ್ಮನ್ನು ಕೆಡವಿ ಹಾಕುವದಕ್ಕಲ್ಲ, ಭಕ್ತವೃದ್ಧಿಗಾಗಿಯೇ ಕರ್ತನು ಈ ಅಧಿಕಾರವನ್ನು ನಮಗೆ ಕೊಟ್ಟನು.
ನಾನು ಬಾಯಿ ತೆರೆಯುವಾಗ ಗುಪ್ತವಾಗಿದ್ದ ಸುವಾರ್ತೆಯ ಮರ್ಮವನ್ನು ಧೈರ್ಯವಾಗಿ ತಿಳಿಸುವದಕ್ಕೆ ಬೇಕಾದ ಮಾತನ್ನು ನನಗೆ ಅನುಗ್ರಹಿಸಬೇಕೆಂದು ಪ್ರಾರ್ಥಿಸಿರಿ.
ಇದಲ್ಲದೆ ಕರ್ತನಲ್ಲಿ ಅನೇಕ ಸಹೋದರರು ನನ್ನ ಬೇಡಿಗ ಳಿಂದಲೇ ಭರವಸವುಳ್ಳವರಾಗಿ ವಾಕ್ಯವನ್ನು ನಿರ್ಭಯ ದಿಂದ ಹೇಳುವದಕ್ಕೆ ಇನ್ನೂ ವಿಶೇಷ ಧೈರ್ಯವನ್ನು ಹೊಂದಿದ್ದಾರೆ.
ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
ಹೌದು, ನಿಮ್ಮ ನಂಬಿಕೆಯೆಂಬ ಯಜ್ಞವನ್ನು ಅರ್ಪಿಸುವ ಸೇವೆಯಲ್ಲಿ ನಾನೇ ಅರ್ಪಿತವಾಗ ಬೇಕಾದರೂ ನಾನು ಹರ್ಷಗೊಂಡು ನಿಮ್ಮೆಲ್ಲರ ಕೂಡ ಸಂತೋಷಿಸುವೆನು.
ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
ಕ್ರೈಸ್ತನಾಗಿ ಬಾಧೆಪಟ್ಟರೆ ಅವನು ನಾಚಿಕೆ ಪಡದೆ ಅದರಲ್ಲಿಯೇ ದೇವರನ್ನು ಘನಪಡಿಸಲಿ.
ಆದದರಿಂದ ನೀವು ಈ ಸಂಗತಿಗಳನ್ನು ತಿಳಿದ ವರಾಗಿ ಈಗಿನ ಸತ್ಯದಲ್ಲಿ ಸ್ಥಿರವಾಗಿದ್ದರೂ ಇವುಗಳನ್ನು ಯಾವಾಗಲೂ ನಿಮಗೆ ಜ್ಞಾಪಕಕೊಡುವದಕ್ಕೆ ನಾನು ಎಂದಿಗೂ ಅಲಕ್ಷ್ಯಮಾಡುವದಿಲ್ಲ.
ಚಿಕ್ಕ ಮಕ್ಕಳೇ, ಆತನು ಪ್ರತ್ಯಕ್ಷನಾಗು ವಾಗ ನಾವು ಆತನ ಆಗಮನದಲ್ಲಿ ಆತನ ಮುಂದೆ ನಿಲ್ಲಲು ನಾಚಿಕೆಪಡದೆ ಧೈರ್ಯದಿಂದಿರುವಂತೆ ಆತನಲ್ಲಿ ನೆಲೆಗೊಂಡಿರ್ರಿ.ಆತನು ನೀತಿವಂತನಾಗಿ ದ್ದಾನೆಂಬದು ನಿಮಗೆ ಗೊತ್ತಾಗಿದ್ದರೆ ನೀತಿಯನ್ನು ಅನುಸರಿಸುವ ಪ್ರತಿಯೊಬ್ಬನು ಆತನಿಂದ ಹುಟ್ಟಿದವನಾಗಿದ್ದಾನೆಂದು ನೀವು ತಿಳಿದಿದ್ದೀರಿ.