ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ
Cross references
ಆಗ ದಾವೀದನು ಗಾದನಿಗೆ--ನಾನು ಬಹು ಇಕ್ಕಟ್ಟಿನಲ್ಲಿದ್ದೇನೆ. ಈಗ ಕರ್ತನ ಕೈಯಲ್ಲಿ ಬೀಳುವೆವು; ಯಾಕಂದರೆ ಆತನ ಕರುಣೆಯು ಬಹಳವಾಗಿದೆ; ಮನುಷ್ಯರ ಕೈಯಲ್ಲಿ ಬೀಳೆನು ಅಂದನು.
ನನ್ನ ಚರ್ಮದ ಹುಳಗಳು ಈ ದೇಹ ವನ್ನು ನಾಶಪಡಿಸಿದಾಗ್ಯೂ ನಾನು ನನ್ನ ಶರೀರದಿಂದ ದೇವರನ್ನು ನೋಡುವೆನು.
ಯಾಕಂದರೆ ನೀನು ನನ್ನ ಆತ್ಮವನ್ನು ನರಕದಲ್ಲಿ ಬಿಟ್ಟುಬಿಡುವದಿಲ್ಲ; ನಿನ್ನ ಪರಿಶುದ್ಧನ ಕೊಳೆಯುವಿಕೆಯನ್ನು ನೋಡ ಗೊಡಿಸುವದಿಲ್ಲ.ಜೀವದ ಮಾರ್ಗವನ್ನು ನನಗೆ ತಿಳಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷ ವೂ ನಿನ್ನ ಬಲಗಡೆಯಲ್ಲಿ ಶಾಶ್ವತ ಭಾಗ್ಯವೂ ಇರುತ್ತವೆ.
ನಾನಾದರೋ ನೀತಿಯಲ್ಲಿ ನಿನ್ನ ಮುಖವನ್ನು ದೃಷ್ಟಿಸುವೆನು; ನಾನು ಎಚ್ಚರವಾದಾಗ ನಿನ್ನ ಹೋಲಿಕೆಯೊಂದಿಗೆ ತೃಪ್ತಿಹೊಂದುವೆನು.
ಆದರೆ ದೇವರು ನನ್ನ ಪ್ರಾಣವನ್ನು ಸಮಾಧಿಯ ಬಲದಿಂದ ವಿಮೋಚನೆ ಮಾಡುವನು, ಆತನು ನನ್ನನ್ನು ಅಂಗೀಕರಿಸುವನು. ಸೆಲಾ.
ನಿನ್ನ ಆಲೋಚನೆಯಂತೆ ನನ್ನನ್ನು ನಡಿಸಿದ ತರು ವಾಯ ಮಹಿಮೆಗೆ ನನ್ನನ್ನು ಅಂಗೀಕರಿಸುವಿ.
ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ;
ಆಗ ದೆವ್ವಗಳು ಬಿಟ್ಟು ಹೋಗಿದ್ದ ಆ ಮನುಷ್ಯನು ತಾನು ಆತನ ಜೊತೆಯಲ್ಲಿ ಇರುವೆನೆಂದು ಆತನನ್ನು ಬೇಡಿಕೊಂಡನು. ಆದರೆ ಯೇಸು ಅವನನ್ನು ಕಳುಹಿಸಿಬಿಟ್ಟು ಅವನಿಗೆ--
ಆದರೆ ನಾನು ಬಾಪ್ತಿಸ್ಮ ಮಾಡಿಸಿಕೊಳ್ಳುವ ಒಂದು ಬಾಪ್ತಿಸ್ಮ ಉಂಟು; ಅದು ನೆರವೇರುವ ತನಕ ನಾನು ಎಷ್ಟೋ ಇಕ್ಕಟ್ಟಿನಲ್ಲಿದ್ದೇನೆ!
ಆಗ ಯೇಸು ಅವನಿಗೆ--ಈ ದಿನವೇ ನೀನು ನನ್ನೊಂದಿಗೆ ಪರದೈಸಿನಲ್ಲಿರುವಿ ಎಂದು ನಾನು ನಿನಗೆ ನಿಜವಾಗಿ ಹೇಳುತ್ತೇನೆ ಅಂದನು.
ಯಾವನಾದರೂ ನನ್ನನ್ನು ಸೇವಿಸುವವನಾದರೆ ಅವನು ನನ್ನನ್ನು ಹಿಂಬಾಲಿಸಲಿ; ನಾನು ಇರುವಲ್ಲಿಯೇ ನನ್ನ ಸೇವಕನೂ ಇರುವನು; ಯಾವನಾದರೂ ನನ್ನನ್ನು ಸೇವಿಸುವವನಾದರೆ ನನ್ನ ತಂದೆಯು ಅವನನ್ನು ಸನ್ಮಾನಿಸುವನು.
ಆಗ ಪಸ್ಕ ಹಬ್ಬದ ಮುಂಚೆ ಯೇಸು ತಾನು ಈ ಲೋಕದೊಳಗಿಂದ ತಂದೆಯ ಬಳಿಗೆ ಹೋಗಬೇಕಾದ ತನ್ನ ಗಳಿಗೆಯು ಬಂತೆಂದು ತಿಳಿದು ಈ ಲೋಕದಲ್ಲಿದ್ದ ತನ್ನ ಸ್ವಂತದವರನ್ನು ಪ್ರೀತಿಸಿ ಅವರನ್ನು ಅಂತ್ಯದವರೆಗೆ ಪ್ರೀತಿಸಿದನು.
ನಾನು ಹೋಗಿ ನಿಮಗೋಸ್ಕರ ಸ್ಥಳವನ್ನು ಸಿದ್ಧಮಾಡಿ ತಿರಿಗಿ ಬಂದು ನಿಮ್ಮನ್ನು ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಆಗ ನಾನಿರುವಲ್ಲಿ ನೀವು ಸಹ ಇರುವಿರಿ.
ತಂದೆ ಯೇ, ನೀನು ನನಗೆ ಕೊಟ್ಟಿರುವ ಮಹಿಮೆಯನ್ನು ನೀನು ನನಗೆ ಕೊಟ್ಟವರು ಸಹ ನೋಡುವ ಹಾಗೆಯೂ ನಾನಿರುವಲ್ಲಿ ಅವರು ನನ್ನೊಂದಿಗೆ ಇರುವಂತೆಯೂ ನಾನು ಇಚ್ಛೈಸುತ್ತೇನೆ. ಜಗದುತ್ಪತ್ತಿಗೆ ಮುಂಚೆ ನೀನು ನನ್ನನ್ನು ಪ್ರೀತಿಸಿದಿ.
ಅವರು ಸ್ತೆಫನನ ಮೇಲೆ ಕಲ್ಲೆಸೆಯುತ್ತಾ ಇರಲು ಅವನು--ಕರ್ತನಾದ ಯೇಸುವೇ, ನನ್ನಾತ್ಮವನ್ನು ಸೇರಿ ಸಿಕೋ ಎಂದು ದೇವರನ್ನು ಪ್ರಾರ್ಥಿಸಿ,ಮೊಣ ಕಾಲೂರಿ--ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿದ ತರುವಾಯ ನಿದ್ರೆಹೋದನು.
ನಾವು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿಯೇ ಇರುವದು ಉತ್ತಮವೆಂದು ಆಶಿಸಿ ಭರವಸವುಳ್ಳವರಾಗಿದ್ದೇವೆ.
ನಿಮ್ಮ ಮೇಲಿರುವ ನಮ್ಮ ಪ್ರೀತಿಯು ಸಂಕೋಚವಾದದ್ದಲ್ಲ, ನಮ್ಮ ವಿಷಯದಲ್ಲಿ ನಿಮ್ಮ ಪ್ರೀತಿಯೇ ಸಂಕೋಚ ವಾದದ್ದು.
ಸಹೋದರರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬದನ್ನು ನೀವೇ ತಿಳಿದಿದ್ದೀರಿ.
ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀ ಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ; ಅದು ನಂಬುವವರಾದ ನಿಮ್ಮೊಳಗೆ ಬಲವಾಗಿ ಕೆಲಸ ನಡಿಸುತ್ತದೆ.
ಆಮೇಲೆ ಜೀವದಿಂದುಳಿದಿರುವ ನಾವು ಅಂತರಿಕ್ಷದಲ್ಲಿ ಕರ್ತನನ್ನು ಎದುರುಗೊಳ್ಳುವದಕ್ಕಾಗಿ ಅವರ ಸಂಗಡಲೇ ಮೇಘ ಗಳಲ್ಲಿ ಒಯ್ಯಲ್ಪಡುವೆವು. ಹೀಗಾಗಿ ನಾವು ಸದಾ ಕಾಲವೂ ಕರ್ತನ ಜೊತೆಯಲ್ಲಿರುವೆವು.ಆದ ಕಾರಣ ಈ ಮಾತುಗಳಿಂದ ಒಬ್ಬರನ್ನೊಬ್ಬರು ಸಂತೈಸಿರಿ.
ನಾನು ಈಗ ಅರ್ಪಿತನಾಗು ವದಕ್ಕೆ ಸಿದ್ಧನಿದ್ದೇನೆ; ನಾನು ಹೊರಟು ಹೋಗಬೇಕಾದ ಸಮಯವು ಸವಿಾಪವಾಗಿದೆ.
ಅದಕ್ಕೆ ನಾನು ಅಯ್ಯಾ, ನೀನೇ ಬಲ್ಲೆ ಅಂದೆನು. ಅವನು ನನಗೆ--ಇವರು ಮಹಾಸಂಕಟದೊಳಗಿಂದ ಬಂದವರು; ಕುರಿಮರಿಯಾ ದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಬೆಳ್ಳಗೆ ಮಾಡಿದ್ದಾರೆ.
ಪರಲೋಕದಿಂದ ಬಂದ ಶಬ್ದವನ್ನು ನಾನು ಕೇಳಿ ದೆನು. ಅದು--ಇಂದಿನಿಂದ ಕರ್ತನಲ್ಲಿ ಯಾರಾರು ಸಾಯುವರೋ ಆ ಸತ್ತವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು; ಹೌದು, ಅವರು ತಮ್ಮ ಪ್ರಯಾಸಗಳಿಂದ ವಿಶ್ರಮಿಸಿಕೊಳ್ಳುವರು, ಅವರ ಕ್ರಿಯೆಗಳು ಅವರನ್ನು ಹಿಂಬಾಲಿಸುತ್ತವೆ ಎಂದು ಆತ