ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
Cross references
ಅರಾಮ್ಯರು ನನಗಿಂತ ಬಲವುಳ್ಳವರಾಗಿದ್ದರೆ ನೀನು ನನಗೆ ಸಹಾಯ ಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳ ವರಾಗಿದ್ದರೆ, ನಾನು ನಿನಗೆ ಸಹಾಯ ಮಾಡುವೆನು,
ಯೆರೂಸಲೇಮು ಒಟ್ಟಾಗಿ ಜೋಡಿಸಲ್ಪಟ್ಟ ಪಟ್ಟ ಣದ ಹಾಗೆ ಕಟ್ಟಲ್ಪಟ್ಟಿದೆ.
ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು!
ಕರ್ತನು ಅವರ ವ್ಯಾಜ್ಯವನ್ನು ನಡಿಸಿ ಸೂರೆ ಮಾಡಿದವರ ಪ್ರಾಣವನ್ನು ಸೂರೆಮಾಡುವನು.
ಆಗ ಯೇಸು ಅವರ ಆಲೋಚನೆ ಗಳನ್ನು ತಿಳಿದು ಅವರಿಗೆ--ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ರಾಜ್ಯವು ಹಾಳಾಗುತ್ತದೆ; ಮತ್ತು ತನ್ನಲ್ಲಿ ವಿರೋಧವುಂಟಾಗಿ ವಿಭಾಗಿಸಲ್ಪಟ್ಟ ಪ್ರತಿಯೊಂದು ಪಟ್ಟಣವಾಗಲೀ ಮನೆಯಾಗಲೀ ನಿಲ್ಲುವದಿಲ್ಲ.
ಆದರೆ ಇವರಿಗೊಸ್ಕರ ಮಾತ್ರವಲ್ಲದೆ ಇವರ ವಾಕ್ಯದಿಂದ ನನ್ನ ಮೇಲೆ ನಂಬಿಕೆಯಿಡುವವರಿಗೋ ಸ್ಕರವೂ ಕೇಳಿಕೊಳ್ಳುತ್ತೇನೆ.
ಅವರು ದೇವಾಲಯದಲ್ಲಿ ಪ್ರತಿ ದಿನ ಒಮ್ಮನಸ್ಸಿನಿಂದ ಕೂಡುತ್ತಾ ಮನೆಮನೆಗಳಲ್ಲಿ ರೊಟ್ಟಿ ಮುರಿಯುತ್ತಾ ಉಲ್ಲಾಸದಿಂದಲೂ ಏಕಹೃದಯ ದಿಂದಲೂ ಊಟಮಾಡುತ್ತಿದ್ದರು.ಇದಲ್ಲದೆ ಅವರು ದೇವರನ್ನು ಕೊಂಡಾಡುವವರಾಗಿಯೂ ಜನ ರೆಲ್ಲರ ದಯೆಯನ್ನು ಹೊಂದುವವರಾಗಿಯೂ ಇದ್ದರು. ಪ್ರತಿ ದಿನ ರಕ್ಷಣೆ ಹೊಂದುತ್ತಿದ್ದವರನ್ನು ಕರ್ತನು ಸಭೆಗೆ ಸೇರಿಸುತ್ತಿದ್ದನು.
ನಂಬಿದ್ದ ಸಮೂಹದವರ ಹೃದಯವೂ ಪ್ರಾಣವೂ ಒಂದೇ ಆಗಿತ್ತು; ಇದಲ್ಲದೆ ಅವರಲ್ಲಿ ಯಾವನೂ ತನ್ನಗಿದ್ದ ಯಾವದೊಂದನ್ನೂ ತನ್ನ ಸ್ವಂತ ದ್ದೆಂದು ಹೇಳಲಿಲ್ಲ; ಆದರೆ ಎಲ್ಲವೂ ಅವರಿಗೆ ಹುದು ವಾಗಿತ್ತು.
ಕೆಲವು ದಿವಸಗಳಾದ ಮೇಲೆ ಯೆಹೂದ್ಯಳಾದ ದ್ರೂಸಿಲ್ಲಳೆಂಬ ತನ್ನ ಹೆಂಡತಿಯೊಂದಿಗೆ ಫೇಲಿಕ್ಸನು ಬಂದು ಪೌಲನನ್ನು ಕರೆಯಿಸಿ ಕ್ರಿಸ್ತನಲ್ಲಿ ಇಡಬೇಕಾದ ನಂಬಿಕೆಯ ವಿಷಯವಾಗಿ ಅವನು ಹೇಳಿದ್ದನ್ನು ಕೇಳಿದನು.
ಆತನ ಹೆಸರಿಗಾಗಿ ಎಲ್ಲಾ ಜನಾಂಗಗಳವರು ನಂಬಿಕೆಗೆ ವಿಧೇಯರಾಗುವಂತೆ ಆತನಿಂದ ನಾವು ಕೃಪೆಯನ್ನೂ ಅಪೊಸ್ತಲತನವನ್ನೂ ಹೊಂದಿದ್ದೇವೆ.
ನಾನು ಯಾವಾಗಲೂ ಪ್ರಾರ್ಥನೆಗಳಲ್ಲಿ ಎಡೆಬಿಡದೆ ನಿಮ್ಮನ್ನು ಜ್ಞಾಪಕ ಮಾಡಿ ಕೊಳ್ಳುತ್ತೇನೆ. ನಾನು ಯಾವಾತನ ಮಗನ ಸುವಾರ್ತೆ ಯಲ್ಲಿ ನನ್ನ ಆತ್ಮದೊಂದಿಗೆ ಸೇವಿಸುತ್ತೇನೋ ಆ ದೇವರೇ ಇದಕ್ಕೆ ನನ್ನ ಸಾಕ್ಷಿ.
ಕ್ರಿಸ್ತನ ಸುವಾರ್ತೆಯ ವಿಷಯದಲ್ಲಿ ನಾನು ನಾಚಿಕೆಪಡುವದಿಲ್ಲ; ಅದು ಮೊದಲು ಯೆಹೂದ್ಯ ರಿಗೂ ತರುವಾಯ ಗ್ರೀಕರಿಗೂ ಅಂತೂ ನಂಬುವ ಪ್ರತಿಯೊಬ್ಬನಿಗೂ ರಕ್ಷಣೆಗಾಗಿ ದೇವರ ಶಕ್ತಿಯಾಗಿದೆ.
ಆದರೆ ಅದು ಏನು ಹೇಳುತ್ತದೆ? ವಾಕ್ಯವು ನಿನ್ನ ಸವಿಾಪದಲ್ಲಿಯೂ ನಿನ್ನ ಬಾಯಲ್ಲಿಯೂ ನಿನ್ನ ಹೃದಯದಲ್ಲಿಯೂ ಇದೆ ಎಂದು ಅನ್ನುತ್ತದೆ; ಅದೇನಂದರೆ--ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
ನಮಗೆ ಒಂದೇ ದೇಹದಲ್ಲಿ ಬಹಳ ಅಂಗಗಳಿರಲಾಗಿ ಆ ಎಲ್ಲಾ ಅಂಗಗಳಿಗೆ ಹೇಗೆ ಒಂದೇ ಕೆಲಸವಿರುವದಿಲ್ಲವೋ
ಹೀಗೆ ಅನ್ಯಜನಗಳೆಂಬ ಅರ್ಪಣೆಯು ಪವಿತ್ರಾತ್ಮನ ಮೂಲಕ ಶುದ್ಧೀಕರಿಸಲ್ಪಟ್ಟು ಆತನಿಂದ ಅಂಗೀಕಾರವಾಗುವಂತೆ ನಾನು ದೇವರ ಸುವಾರ್ತಾ ಸೇವೆಯನ್ನು ನಡಿಸುತ್ತಾ ಅನ್ಯಜನರಿಗೆ ಯೇಸು ಕ್ರಿಸ್ತನ ಸೇವಕನಾಗಿರುವೆನು.
ಹೀಗೆ ನಾನು ನಿಮ್ಮ ಬಳಿಗೆ ಬಂದಾಗ ಕ್ರಿಸ್ತನ ಸುವಾರ್ತೆಯ ಆಶೀ ರ್ವಾದದ ಪರಿಪೂರ್ಣತೆಯಿಂದ ಬರುವೆನೆಂದು ನನಗೆ ನಿಶ್ಚಯವುಂಟು.
ಸಹೋದರರೇ, ನಿಮ್ಮೆಲ್ಲರ ಮಾತು ಒಂದೇ ಆಗಿರಬೇಕು; ನಿಮ್ಮಲ್ಲಿ ಭೇದಗಳಿರಬಾರದು, ನೀವು ಒಂದೇ ಮನಸ್ಸೂ ಒಂದೇ ಅಭಿಪ್ರಾಯವೂ ಉಳ್ಳವ ರಾಗಿದ್ದು ಹೊಂದಿಕೆಯಿಂದಿರಬೇಕು ಎಂಬದಾಗಿ ನಾನು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ಆ ದೇಹದ ಅಂಗಗಳೆಲ್ಲವು ಅನೇಕವಾಗಿದ್ದು ಒಂದೇ ದೇಹವಾಗಿ ರುವದೋ, ಹಾಗೆಯೇ ಕ್ರಿಸ್ತನು ಇದ್ದಾನೆ.
ಆದದರಿಂದ ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನಲ್ಲಿ ಪಡುವ ಪ್ರಯಾಸವು ನಿಷ್ಪಲವಾಗುವದಿ ಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರ್ರಿ.
ಸಹೋದರನಾದ ಅಪೊಲ್ಲೋಸನು ಸಹೋದರ ರೊಂದಿಗೆ ನಿಮ್ಮ ಬಳಿಗೆ ಹೋಗಬೇಕೆಂದು ನಾನು ಬಹಳವಾಗಿ ಇಷ್ಟಪಟ್ಟೆನು. ಆದರೆ ಈಗ ಬರುವದಕ್ಕೆ ಅವನಿಗೆ ಸ್ವಲ್ಪವೂ ಮನಸ್ಸಿರಲಿಲ್ಲ; ಅನುಕೂಲವಾದ ಸಮಯ ಸಿಕ್ಕಿದಾಗ ಬರುವನು.
ದೇವರ ಪ್ರತಿರೂಪವಾಗಿರುವ ಕ್ರಿಸ್ತನ ಪ್ರಭಾವವನ್ನು ತೋರಿಸುವ ಮಹಿಮೆಯ ಸುವಾರ್ತೆಯು ಇವರಲ್ಲಿ ಪ್ರಕಾಶಿಸಬಾರದೆಂದು ಈ ಪ್ರಪಂಚದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಮಂಕುಮಾಡಿದ್ದಾನೆ.
ಈ ಸಹಾಯ ದಿಂದ ತೋರಿಬಂದ ನಿಮ್ಮ ಯೋಗ್ಯ ಭಾವವನ್ನು ಅವರು ನೋಡುವಾಗ ನೀವು ಕ್ರಿಸ್ತನ ಸುವಾರ್ತೆಗೆ ವಿಧೇಯರಾದದ್ದರಿಂದಲೂ ತಮಗೂ ಎಲ್ಲರಿಗೂ ನೀವು ಉದಾರವಾಗಿ ಸಹಾಯ ಮಾಡಿದ್ದರಿಂದಲೂ ದೇವರನ್ನು ಕೊಂಡಾಡುವರು.
ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
ಅದು ಸುವಾರ್ತೆಯೇ ಅಲ್ಲ, ಆದರೆ ಕೆಲವರು ನಿಮ್ಮನ್ನು ಕಳವಳಪಡಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವದಕ್ಕೆ ಪ್ರಯತ್ನಿಸುತ್ತಾರೆ.
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯ ವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನ ಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
ಹೀಗಿರಲಾಗಿ ನಾನು ಸಹ ಕರ್ತನಾದ ಯೇಸು ವಿನಲ್ಲಿರುವ ನಿಮ್ಮ ನಂಬಿಕೆಯ ವಿಷಯವಾಗಿಯೂ ಪರಿಶುದ್ಧರೆಲ್ಲರ ಕಡೆಗಿರುವ ಪ್ರೀತಿಯ ವಿಷಯವಾಗಿ ಯೂ ಕೇಳಿ
ಆದದರಿಂದ ನೀವು ಕರೆಯಲ್ಪಟ್ಟ ಕರೆಯುವಿಕೆಗೆ ಯೋಗ್ಯರಾಗಿ ನಡೆದುಕೊಳ್ಳ ಬೇಕೆಂದು ಕರ್ತನ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
ಸಮಾಧಾನವೆಂಬ ಬಂಧನದಿಂದ ಕಟ್ಟಲ್ಪಟ್ಟವರಾಗಿದ್ದು ಪವಿತ್ರಾತ್ಮನಿಂದುಂಟಾಗುವ ಐಕ್ಯವನ್ನು ಕಾಪಾಡಿ ಕೊಳ್ಳುವದಕ್ಕೆ ಆಸಕ್ತರಾಗಿರ್ರಿ.
ಕ್ರಿಸ್ತನಲ್ಲಿ ಆದರಣೆ, ಪ್ರೀತಿಯ ಸಂತೈಸುವಿಕೆ, ಆತ್ಮನ ಅನ್ಯೋನ್ಯತೆ, ದಯಾ ವಾತ್ಸಲ್ಯಗಳು ಇರುವದಾದರೆ
ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ಯಾವಾ ಗಲೂ ವಿಧೇಯರಾದಂತೆ ಈಗಲೂ ವಿಧೇಯರಾಗಿ ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರು ವಾಗಲೂ ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ಸ್ವಂತ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.
ಇದಲ್ಲದೆ ನಾನು ಸಹ ಬೇಗನೆ ಬರುವೆನೆಂದು ಕರ್ತನಲ್ಲಿ ದೃಢವಾಗಿ ನಂಬಿದ್ದೇನೆ.
(ಅನೇಕರು ಕ್ರಿಸ್ತನ ಶಿಲುಬೆಗೆ ವಿರೋಧಿಗಳಾಗಿ ನಡೆಯುತ್ತಾರೆ; ಅವರ ವಿಷಯದಲ್ಲಿ ನಾನು ನಿಮಗೆ ಎಷ್ಟೋ ಸಾರಿ ಹೇಳಿದೆನು, ಈಗಲೂ ಅಳುತ್ತಾ ಹೇಳುತ್ತೇನೆ.
ಕ್ರಿಸ್ತ ಯೇಸುವಿನಲ್ಲಿ ನೀವು ಇಟ್ಟ ನಂಬಿಕೆಯ ವಿಷಯವಾಗಿಯೂ ಪರಿಶುದ್ಧ ರೆಲ್ಲರ ಮೇಲಿರುವ ನಿಮ್ಮ ಪ್ರೀತಿಯ ವಿಷಯವಾಗಿಯೂ ನಾವು ಕೇಳಿದ್ದೇವೆ;
ಕರ್ತನಿಗೆ ಯೋಗ್ಯರಾಗಿ ನಡೆದು ಎಲ್ಲಾ ವಿಧದಲ್ಲಿ ಆತನನ್ನು ಸಂತೋಷಪಡಿ ಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯ ವೆಂಬ ಫಲವನ್ನು ಕೊಡುತ್ತಾ ದೇವರ ಜ್ಞಾನದಲ್ಲಿ ಅಭಿವೃದ್ಧಿಯಾಗುತ್ತಿರಬೇಕೆಂತಲೂ
ತಂದೆಯು ತನ್ನ ಮಕ್ಕಳಿಗೆ ಹೇಗೋ ಹಾಗೆಯೇ ನಾವು ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಬುದ್ದಿ ಹೇಳುತ್ತಾ ಆದರಿಸುತ್ತಾ ಬಂದೆವು.
ಆದರೆ ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಪ್ರೀತಿಗಳ ವಿಷಯವಾಗಿ ಒಳ್ಳೇವರ್ತಮಾನವನ್ನು ತಂದನು. ಯಾಕಂದರೆ ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ಜ್ಞಾಪಕಮಾಡಿಕೊಂಡು ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವದಕ್ಕೆ ಅಪೇಕ್ಷಿಸುತ್ತೀ
ಸಹೋದರರೇ, ನೀವು ಹೇಗೆ ನಡೆದು ಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿರುವ ಪ್ರಕಾರವೇ ನೀವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗಬೇಕೆಂದು ನಾವು ಕರ್ತನಾದ ಯೇಸು ವಿನ ಮೂಲಕ ನಿಮ್ಮನ್ನು ಬೇಡಿಕೊಂಡು ಎಚ್ಚರಿಸುತ್ತೇವೆ.
ಈ ಬೋಧನೆಯು ಸ್ತುತ್ಯನಾದ ದೇವರ ಮಹಿಮೆಯ ಸುವಾರ್ತೆಗೆ ಅನುಸಾರವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲ್ಪಟ್ಟಿತು.
ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.