ಹೀಗೆ ನೀವು ನನ್ನಲ್ಲಿ ಕಂಡಂಥ ಮತ್ತು ಈಗ ನನ್ನಲ್ಲಿರುವದೆಂದು ನೀವು ಕೇಳುವಂಥ ಹೋರಾಟವೇ ನಿಮಗುಂಟು.
Cross references
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಸೀಲನನ್ನೂ ಹಿಡಿದು ಸಂತೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳ ಕೊಂಡು ಹೋದರು.
ಕ್ರಿಸ್ತನ ಪ್ರೀತಿಯಿಂದ ನಮ್ಮನ್ನು ಅಗಲಿಸುವವರು ಯಾರು? ಕಷ್ಟವೋ ಸಂಕಟವೋ ಹಿಂಸೆಯೋ ಬರಗಾಲವೋ ವಸ್ತ್ರವಿಲ್ಲದಿರುವದೋ ಗಂಡಾಂತರವೋ ಖಡ್ಗವೋ?
ಹಾಗಾಗದೆ ದೇವರು ಅಪೊಸ್ತಲರಾದ ನಮ್ಮನ್ನು ಮರಣಕ್ಕೆ ನೇಮಿಸಿದನೋ ಎಂಬಂತೆ ಕಡೆಯವರಾಗಿ ತೋರಿಸಿದ್ದಾನೆಂದು ನನಗೆ ತೋಚುತ್ತದೆ; ನಾವು ಲೋಕಕ್ಕೂ ದೂತರಿಗೂ ಮನುಷ್ಯರಿಗೂ ನೋಟವಾದೆವು.
ನಾವು ಸಹ ಪ್ರತಿಗಳಿಗೆಯಲ್ಲಿಯೂ ಯಾಕೆ ಜೀವದ ಭಯದಿಂದಿ ದ್ದೇವೆ?
ನೀವು ಸೈತಾನನ ತಂತ್ರೋಪಾಯಗಳನ್ನು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರ ಸರ್ವಾಯುಧ ಗಳನ್ನು ಧರಿಸಿಕೊಳ್ಳಿರಿ.
ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ಫಿಲಿಪ್ಪಿ ಪಟ್ಟಣದಲ್ಲಿ ನಮಗೆ ಹಿಂಸೆ ಮತ್ತು ಅವಮಾನವು ಮೊದಲು ಸಂಭವಿಸಿದರೂ ನಾವು ನಮ್ಮ ದೇವರ ಮೂಲಕ ಧೈರ್ಯಗೊಂಡು ಬಹು ವಿರೋಧವನ್ನು ಅನುಭವಿಸುವವರಾಗಿ ನಿಮಗೆ ದೇವರ ಸುವಾರ್ತೆಯನ್ನು ತಿಳಿಸಿದೆವೆಂಬದನ್ನು ನೀವು ಬಲ್ಲಿರಿ.
ಸಹೋ ದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನ ಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.
ನಿಮ್ಮನ್ನು ದೃಢಪಡಿಸುವದಕ್ಕೂ ನಿಮ್ಮ ನಂಬಿಕೆಯ ವೃದ್ಧಿಗಾಗಿ ನಿಮ್ಮನ್ನು ಆದರಿಸುವದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಕ್ರಿಸ್ತನ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.
ನಂಬಿಕೆಯ ಶ್ರೇಷ್ಠ ಹೋರಾಟವನ್ನು ಮಾಡು, ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ನೀನು ಕರೆಯಲ್ಪಟ್ಟಿದ್ದೀ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೇ ಅರಿಕೆಯನ್ನು ಮಾಡಿದ್ದೀಯಲ್ಲಾ.
ಆದ ಕಾರಣ (ದೇವರು) ಆರಿಸಿಕೊಂಡವರು ಸಹ ಕ್ರಿಸ್ತ ಯೇಸುವಿನಲ್ಲಿರುವ ರಕ್ಷಣೆಯನ್ನು ನಿತ್ಯಪ್ರಭಾವ ಸಹಿತವಾಗಿ ಹೊಂದಬೇಕೆಂದು ನಾನು ಅವರಿಗೋಸ್ಕರ ಎಲ್ಲವನ್ನೂ ತಾಳಿಕೊಳ್ಳುತ್ತೇನೆ.
ನಾನು ಒಳ್ಳೇ ಹೋರಾಟವನ್ನು ಹೋರಾಡಿದ್ದೇನೆ, ನಾನು ನನ್ನ ಓಟ ವನ್ನು ಮುಗಿಸಿದ್ದೇನೆ, ನಾನು ನಂಬಿಕೆಯನ್ನು ಕಾಪಾಡಿ ದ್ದೇನೆ.
ಆದರೆ ನೀವು ಪ್ರಕಾಶದಲ್ಲಿ ಸೇರಿದ ಮೇಲೆ ಸಂಕಷ್ಟಗಳ ಬಹು ಹೋರಾಟವನ್ನು ಸಹಿಸಿಕೊಂಡ ಹಿಂದಿನ ದಿನಗಳನ್ನು ನೆನಪಿಗೆ ತಂದುಕೊಳ್ಳಿರಿ.
ನೀವು ಪಾಪಕ್ಕೆ ವಿರೋಧವಾಗಿ ಹೋರಾಡುವದರಲ್ಲಿ ರಕ್ತದ ಮಟ್ಟಿಗೂ ಇನ್ನೂ ಅದನ್ನು ಎದುರಿಸಲಿಲ್ಲ.
ನಿನ್ನನ್ನು ಸಂಕಟಪಡಿಸುವವುಗಳಲ್ಲಿ ಯಾವ ದಕ್ಕೂ ಹೆದರಬೇಡ. ಇಗೋ, ನೀವು ಶೋಧಿಸಲ್ಪಡು ವಂತೆ ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವನು; ಹತ್ತು ದಿವಸಗಳ ತನಕ ನಿಮಗೆ ಸಂಕಟವಿ ರುವದು. ನೀನು ಸಾಯಬೇಕಾದರೂ ನಂಬಿಗಸ್ತ ನಾಗಿರು; ನಾನು ನಿನಗೆ
ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಕುರಿಮರಿಯಾದಾತನ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವ ನನ್ನು ಜಯಿಸಿದರು.