ತಂದೆಯಾದ ದೇವರ ಮಹಿಮೆಗಾಗಿ ಯೇಸು ಕ್ರಿಸ್ತನು ಕರ್ತನೆಂದು ಪ್ರತಿಯೊಂದು ನಾಲಿಗೆಯೂ ಅರಿಕೆ ಮಾಡುವದು.
Cross references
ಆದ್ದರಿಂದ ಓ ಕರ್ತನೇ, ಅನ್ಯಜನಾಂಗ ಗಳಲ್ಲಿ ನಿನಗೆ ಉಪಕಾರಸ್ತುತಿ ಮಾಡುತ್ತೇನೆ. ನಿನ್ನನ್ನು ಕೊಂಡಾಡಿ ನಿನ್ನ ಹೆಸರನ್ನು ಕೀರ್ತಿಸುವೆನು.ಆತನು ತನ್ನ ಅರಸನಿಗೆ ದೊಡ್ಡ ಬಿಡುಗಡೆಯನ್ನು ಕೊಟ್ಟು ತನ್ನ ಅಭಿಷಕ್ತನಾದ ದಾವೀದನಿಗೂ ಅವನ ಸಂತತಿಗೂ ಕೃಪೆಯನ್ನು ಎಂದೆಂದಿಗೂ ತೋರಿಸುತ್ತಾನೆ.
ಕರ್ತನು ನನ್ನ ಕರ್ತನಿಗೆ ಹೇಳಿದ್ದೇನೆಂದರೆ ನಾನು ನಿನ್ನ ಶತ್ರುಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನನ್ನ ಬಲ ಪಾರ್ಶ್ವದಲ್ಲಿ ಕುಳಿತುಕೋ,
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ಯಾವನಾದರೂ ಮನುಷ್ಯರ ಮುಂದೆ ನನ್ನನ್ನು ಒಪ್ಪಿಕೊಂಡರೆ ನಾನು ಸಹ ಪರಲೋಕದಲ್ಲಿ ನನ್ನ ತಂದೆಯ ಮುಂದೆ ಅವನನ್ನು ಒಪ್ಪಿಕೊಳ್ಳುವೆನು;
ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
ಆದರೆ ಎಲ್ಲರೂ ತಂದೆಗೆ ಮಾನಕೊಡುವ ಪ್ರಕಾರವೇ ಮಗನಿಗೂ ಮಾನ ಕೊಡಬೇಕೆಂದು ತೀರ್ಪು ಮಾಡು ವದನ್ನೆಲ್ಲಾ ಮಗನಿಗೆ ಒಪ್ಪಿಸಿದ್ದಾನೆ. ಮಗನಿಗೆ ಮಾನ ಕೊಡದವನು ಆತನನ್ನು ಕಳುಹಿಸಿದ ತಂದೆಗೂ ಮಾನ ಕೊಡದವನಾಗಿದ್ದಾನೆ.
ಅವನ ತಂದೆತಾಯಿಗಳು ಯೆಹೂದ್ಯರಿಗೆ ಭಯಪಟ್ಟ ದ್ದರಿಂದ ಈ ಮಾತುಗಳನ್ನು ಹೇಳಿದರು; ಯಾಕಂದರೆ ಯಾವನಾದರೂ ಆತನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ನಿರ್ಣಯಿಸಿದ್ದರು.
ಆದಾಗ್ಯೂ ಮುಖ್ಯಾಧಿಕಾರಿಗಳಲ್ಲಿ ಅನೇಕರು ಆತನ ಮೇಲೆ ನಂಬಿಕೆಯಿಟ್ಟರು. ಆದರೆ ಫರಿಸಾಯರ ನಿಮಿತ್ತ ತಾವು ಸಭಾಮಂದಿರದಿಂದ ಬಹಿಷ್ಕರಿಸಲ್ಪಡಬಾರದೆಂದು ಅವರು ಆತನನ್ನು ಒಪ್ಪಿ ಕೊಳ್ಳಲಿಲ್ಲ.
ನೀವು ನನ್ನನ್ನು ಬೋಧ ಕನು ಮತ್ತು ಕರ್ತನು ಎಂದು ಕರೆಯುತ್ತೀರಿ; ನೀವು ಹೇಳುವದು ಸರಿ; ಯಾಕಂದರೆ ನಾನು ಅಂಥವನೇ ಹೌದು.
ಅವನು ಹೊರಗೆ ಹೋದಮೇಲೆ ಯೇಸು-- ಈಗ ಮನುಷ್ಯಕುಮಾರನು ಮಹಿಮೆಪಟ್ಟಿದ್ದಾನೆ. ದೇವರು ಆತನಲ್ಲಿ ಮಹಿಮೆಪಟ್ಟಿದ್ದಾನೆ.
ನನ್ನ ಹೆಸರಿನಲ್ಲಿ ನೀವು ಏನೇನು ಬೇಡಿಕೊಳ್ಳುವಿರೋ ಅದನ್ನು ನಾನು ಮಾಡುವೆನು. ಹೀಗೆ ಮಗನಲ್ಲಿ ತಂದೆಯು ಮಹಿಮೆ ಹೊಂದುವನು.
ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯಾವನಾ ದರೂ ನನ್ನನ್ನು ಪ್ರೀತಿಸುವದಾದರೆ ಅವನು ನನ್ನ ಮಾತುಗಳನ್ನು ಕೈಕೊಳ್ಳುವನು; ನನ್ನ ತಂದೆಯು ಅವ ನನ್ನು ಪ್ರೀತಿಸುವನು. ಇದಲ್ಲದೆ ನಾವು ಅವನ ಬಳಿಗೆ ಬಂದು ಅವನೊಂದಿಗೆ ನಮ್ಮ ನಿವಾಸವನ್ನು ಮಾಡಿ ಕೊಳ್ಳುವೆವು.
ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.
ಯೇಸು ಈ ಮಾತುಗಳನ್ನು ಹೇಳಿ ಪರಲೋಕದ ಕಡೆಗೆ ಕಣ್ಣುಗಳನ್ನೆತ್ತಿ-- ತಂದೆಯೇ, ಈಗ ಗಳಿಗೆ ಬಂದಿದೆ; ನಿನ್ನ ಮಗನನ್ನು ಮಹಿಮೆಪಡಿಸು; ಆಗ ನಿನ್ನ ಮಗನೂ ನಿನ್ನನ್ನು ಮಹಿಮೆಪಡಿಸುವದಕ್ಕಾಗುವದು.
ತೋಮನು ಪ್ರತ್ಯುತ್ತರವಾಗಿ ಆತನಿಗೆ--ನನ್ನ ಕರ್ತನೇ, ನನ್ನ ದೇವರೇ ಅಂದನು.
ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.
ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ವಾಕ್ಯವನ್ನು ಅನುಗ್ರಹಿಸಿದ್ದಾನೆ; (ಆತನು ಎಲ್ಲರಿಗೂ ಕರ್ತನಾಗಿದ್ದಾನೆ.)
ನೀನು ಕರ್ತನಾದ ಯೇಸು ವನ್ನು ಬಾಯಿಂದ ಅರಿಕೆಮಾಡಿ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ್ದಾನೆಂದು ನಿನ್ನ ಹೃದಯದಲ್ಲಿ ನಂಬಿದರೆ ನಿನಗೆ ರಕ್ಷಣೆಯಾಗುವದು ಎಂಬದೇ.
ಸತ್ತವರಿಗೂ ಜೀವಿಸುವವರಿಗೂ ಒಡೆಯ ನಾಗಿರಬೇಕೆಂತಲೇ ಕ್ರಿಸ್ತನು ಸತ್ತು ಎದ್ದು ಜೀವಿತ ನಾದನು.
ನನ್ನ ಜೀವದಾಣೆ, ಪ್ರತಿಯೊಬ್ಬನು ನನ್ನ ಮುಂದೆ ಮೊಣಕಾಲೂರುವನು ಮತ್ತು ಪ್ರತಿಯೊಂದು ನಾಲಿಗೆಯು ದೇವರಿಗೆ ಅರಿಕೆ ಮಾಡುವದು ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಬರೆದದೆ.
ಈ ಕಾರಣದಿಂದ ನಾನು ಅನ್ಯಜನಗಳ ಮಧ್ಯದಲ್ಲಿ ನಿನ್ನನು ಅರಿಕೆ ಮಾಡಿ ನಿನ್ನ ನಾಮವನ್ನು ಸಂಕೀರ್ತಿಸುವೆನು ಎಂದು ಬರೆದಿರುವ ಪ್ರಕಾರ ಅನ್ಯಜನಗಳು ದೇವರ ಕರುಣೆಗಾಗಿ ಆತನನ್ನು ಮಹಿಮೆಪಡಿಸುವರು.
ನಮಗಾದರೋ ಒಬ್ಬನೇ ದೇವರಿದ್ದಾನೆ; ಆತನು ತಂದೆಯೆಂಬಾತನೇ; ಆತನು ಸಮಸ್ತಕ್ಕೂ ಮೂಲ ಕಾರಣನು; ನಾವು ಆತನಲ್ಲಿ ಇದ್ದೇವೆ. ಕರ್ತನಾದ ಯೇಸು ಕ್ರಿಸ್ತನು ಒಬ್ಬನೇ; ಆತನ ಮುಖಾಂತರ ಸಮಸ್ತವೂ ಉಂಟಾಯಿತು; ನಾವು ಆತನ ಮುಖಾಂತರ ಉಂಟಾದೆವು.
ಹೀಗಿರುವದರಿಂದ ನಾನು ನಿಮಗೆ ತಿಳಿಸುವದೇನಂದರೆ, ದೇವರಾತ್ಮನಿಂದ ಮಾತನಾಡುವ ಯಾವ ಮನುಷ್ಯನಾದರೂ ಯೇಸು ವನ್ನು ಶಾಪಗ್ರಸ್ತನೆಂದು ಹೇಳುವದಿಲ್ಲ; ಪವಿತ್ರಾತ್ಮ ನಿಂದಲೇ ಹೊರತು ಯಾವ ಮನುಷ್ಯನಾದರೂ ಯೇಸುವನ್ನು ಕರ್ತನೆಂದು ಹೇಳಲಾರನು.
ಮೊದಲನೆಯ ಮನುಷ್ಯನು ಮಣ್ಣಿನಿಂದ ಉಂಟಾಗಿ ಮಣ್ಣಿಗೆ ಸಂಬಂಧ ಪಟ್ಟವನು; ಎರಡನೆಯ ಮನುಷ್ಯನು ಪರಲೋಕದಿಂದ ಬಂದ ಕರ್ತನು.
ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
ಯೇಸು ಕ್ರಿಸ್ತನು ಶರೀರದಲ್ಲಿ ಬಂದನೆಂದು ಒಪ್ಪಿಕೊಳ್ಳುವ ಪ್ರತಿಯೊಂದು ಆತ್ಮವು ದೇವರಿಗೆ ಸಂಬಂಧಪಟ್ಟದ್ದಾಗಿದೆ; ಇದರಿಂದ ನೀವು ಈ ಆತ್ಮನು ದೇವರಾತ್ಮನೆಂದು ತಿಳಿದುಕೊಳ್ಳು ತ್ತೀರಿ.
ಯೇಸು ದೇವರ ಮಗನಾಗಿ ದ್ದಾನೆಂದು ಯಾವನು ಒಪ್ಪಿಕೊಳ್ಳುತ್ತಾನೋ ಅವನಲ್ಲಿ ದೇವರು ನೆಲೆಗೊಂಡಿದ್ದಾನೆ, ಅವನು ದೇವರಲ್ಲಿ ನೆಲೆಗೊಂಡಿದ್ದಾನೆ.
ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.