ಹೀಗೆ ನೀವು ದೋಷವಿಲ್ಲದವರೂ ಕೇಡುಮಾಡ ದವರೂ ನಿಂದಾರಹಿತರೂ ಆದ ದೇವಪುತ್ರರಾಗಿ ವಕ್ರವುಳ್ಳ ದುಷ್ಟಜನಾಂಗದ ಮಧ್ಯದಲ್ಲಿ ಜೀವದಾಯಕ ವಾಕ್ಯವನ್ನು ಹಿಡುಕೊಂಡು ಲೋಕದಲ್ಲಿ ಬೆಳಕುಗಳಂತೆ ಹೊಳೆಯುವವರಾಗಿದ್ದೀರಿ.
Cross references
ಮೋಶೆಯ ಮುಖವು ಪ್ರಕಾಶಿಸುವದನ್ನು ಇಸ್ರಾಯೇಲ್ ಮಕ್ಕಳು ನೋಡುತ್ತಿದ್ದರು. ಮೋಶೆಯು ದೇವರ ಸಂಗಡ ಮಾತ ನಾಡುವದಕ್ಕೆ ತಿರಿಗಿ ಹೋಗುವ ವರೆಗೆ ಅವನು ತನ್ನ ಮುಖದ ಮೇಲೆ ತಿರಿಗಿ ಮುಸುಕನ್ನು ಹಾಕಿ ಕೊಳ್ಳುತ್ತಿದ್ದನು.
ಅವರು ತಮ್ಮನ್ನು ತಾವೇ ಕೆಡಿಸಿಕೊಂಡರು. ಅವರ ಗುರುತು ಆತನ ಮಕ್ಕಳಲ್ಲದವರ ಗುರುತು. ಅವರು ಮೂರ್ಖರಾದ ವಕ್ರಸಂತತಿಯೇ.
ಅಲ್ಲಿ ನ್ಯಾಯತೀರ್ವಿಕೆಗೆ ಸಿಂಹಾಸನಗಳೂ ದಾವೀದನ ಮನೆಯ ಸಿಂಹಾಸನಗಳೂ ಇರುತ್ತವೆ.
ಏಳು, ಪ್ರಕಾಶಿಸು; ಯಾಕಂದರೆ, ನಿನ್ನ ಬೆಳಕು ಬಂತು; ಕರ್ತನ ಮಹಿಮೆಯು ನಿನ್ನ ಮೇಲೆ ಉದಯವಾಯಿತು.
ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು.
ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
ಇಗೋ, ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳು ಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದದ ರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳಾಗಿರ್ರಿ.
ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
ಆದರೆ ನೀವು ನಿಮ್ಮ ವೈರಿಗಳನ್ನು ಪ್ರೀತಿಸಿರಿ, ಮತ್ತು ಒಳ್ಳೇದನ್ನು ಮಾಡಿರಿ. ಏನನ್ನೂ ತಿರಿಗಿ ನಿರೀಕ್ಷಿಸದೆ ಸಾಲ ಕೊಡಿರಿ; ಆಗ ನಿಮ್ಮ ಬಹುಮಾನವು ದೊಡ್ಡದಾಗಿರುವದು; ನೀವು ಮಹೋ ನ್ನತನ ಮಕ್ಕಳಾಗಿರುವಿರಿ; ಯಾಕಂದರೆ ಆತನು ಕೃತಜ್ಞತೆ ಯಿಲ್ಲದವರಿಗೂ ಕೆಟ್ಟವರಿಗೂ ದಯೆಯುಳ್ಳವನಾಗಿ ದ್ದಾನೆ,
ಅವನು ಉರಿದು ಪ್ರಕಾಶಿಸುವ ದೀಪವಾಗಿದ್ದನು; ನೀವು ಸ್ವಲ್ಪಕಾಲ ಅವನ ಬೆಳಕಿನಲ್ಲಿ ಸಂತೋಷಿಸುವದಕ್ಕೆ ಮನಸ್ಸುಳ್ಳವರಾಗಿದ್ದೀರಿ;
ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
ನಿಮ್ಮ ವಿಧೇಯತ್ವವು ಎಲ್ಲರಿಗೂ ಪ್ರಸಿದ್ಧವಾಗಿದ್ದದರಿಂದ ನಿಮ್ಮ ವಿಷಯದಲ್ಲಿ ನಾನು ಆನಂದಪಡುತ್ತೇನೆ. ಆದಾಗ್ಯೂ ನೀವು ಒಳ್ಳೇತನದ ವಿಷಯದಲ್ಲಿ ಜಾಣರೂ ಕೆಟ್ಟತನದ ವಿಷಯದಲ್ಲಿ ಕಳಂಕವಿಲ್ಲದವರೂ ಆಗಿರಬೇಕೆಂದು ಅಪೇಕ್ಷಿಸುತ್ತೇನೆ.
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
ಆದದರಿಂದ ನೀವು ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ದೇವರನ್ನು ಅನುಸರಿಸುವ ವರಾಗಿರ್ರಿ.
ಆದದರಿಂದ ನೀವು ಅವರೊಂದಿಗೆ ಪಾಲುಗಾರ ರಾಗಿರಬೇಡಿರಿ.
ಅದನ್ನು ಕಳಂಕ ಸುಕ್ಕು ಇಂಥಾದ್ದು ಯಾವದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯ ನ್ನಾಗಿ ತನಗೆ ತಾನೇ ಸಮರ್ಪಿಸಿಕೊಳ್ಳಬೇಕೆಂದಿದ್ದಾನೆ.
ಉತ್ತಮ ಕಾರ್ಯ ಗಳು ಯಾವವೆಂದು ನೀವು ವಿವೇಚಿಸುವವರಾಗ ಬೇಕೆಂತಲೂ ಕ್ರಿಸ್ತನ ದಿನದವರೆಗೆ ನೀವು ಸರಳ ರಾಗಿಯೂ ನಿರ್ಮಲರಾಗಿಯೂ ಇರಬೇಕೆಂತಲೂ
ಶಾಂತಿದಾಯಕನಾದ ದೇವರು ತಾನೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ; ಇದಲ್ಲದೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣದಲ್ಲಿ ನಿಮ್ಮ ಆತ್ಮ ಪ್ರಾಣ ಶರೀರಗಳು ದೋಷವಿಲ್ಲದೆ ಸಂಪೂರ್ಣ ವಾಗಿ ಕಾಣಿಸುವಂತೆ ಮಾಡಲಿ.
ಸಭಾಧ್ಯಕ್ಷನು ದೋಷಾರೋಪಣೆಯಿಲ್ಲ ದವನೂ ಏಕಪತ್ನಿಯುಳ್ಳವನು ಜಿತೇಂದ್ರಿಯನೂ ಸ್ವಸ್ಥಚಿತ್ತನೂ ಮಾನಸ್ಥನೂ ಅತಿಥಿಸತ್ಕಾರಮಾಡು ವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರತಕ್ಕದ್ದು.
ಇದಲ್ಲದೆ ಅವರು ಸಹ ಮೊದಲು ಪರೀಕ್ಷಿಸಲ್ಪಡಬೇಕು; ತರುವಾಯ ಅವರು ದೋಷರಹಿತರಾಗಿ ಕಂಡುಬಂದರೆ ಸಭಾ ಸೇವಕರ ಉದ್ಯೋಗವನ್ನು ನಡಿಸಲಿ.
ಅವರು ನಿಂದೆಗೆ ಗುರಿಯಾಗ ದಂತೆ ಇವುಗಳನ್ನು ಆಜ್ಞಾಪಿಸು.
ಆದದರಿಂದ ಯೌವನಸ್ಥ ವಿಧವೆಯರು ಮದುವೆ ಮಾಡಿಕೊಂಡು ಮಕ್ಕಳನ್ನು ಹೆತ್ತು ಮನೆಯ ಕೆಲಸ ನಡಿಸುವದೇ ನನ್ನ ಅಪೇಕ್ಷೆ; ಹಾಗೆ ಮಾಡುವದ ರಿಂದ ವಿರೋಧಿಯ ನಿಂದೆಗೆ ಆಸ್ಪದಕೊಡದೆ ಇರುವರು.
ಪಾಪಮಾಡುವವರನ್ನು ಎಲ್ಲರ ಮುಂದೆಯೇ ಗದರಿಸು; ಇದರಿಂದ ಮಿಕ್ಕಾದವರಿಗೂ ಭಯವುಂಟಾಗುವದು.
ಸಭೆಯ ಹಿರಿಯನು ನಿಂದಾ ರಹಿತನೂ ಏಕಪತ್ನಿಯುಳ್ಳವನೂ ಆಗಿರಬೇಕು. ಅವನ ಮಕ್ಕಳು ನಂಬಿಗಸ್ತರಾಗಿರಬೇಕು; ಅವರು ದುರ್ಮಾರ್ಗ ಸ್ತರೆನಿಸಿ ಕೊಂಡವರಾಗಲಿ ಅಧಿಕಾರಕ್ಕೆ ಒಳಗಾಗದವ ರಾಗಲಿ ಆಗಿರಬಾರದು.
ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
ಈ ಕಾರ್ಯಗಳ ವಿಷಯದಲ್ಲಿ ಮಾತನಾಡುತ್ತಾ ಎಚ್ಚರಿಸುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.
ಇಂಥವನೇ ನಮಗೆ ಬೇಕಾದ ಮಹಾ ಯಾಜಕನು. ಈತನು ಪರಿಶುದ್ಧನೂ ಕೇಡು ಮಾಡ ದವನೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವಾತನು ಆಕಾಶಗಳಿಗಿಂತ ಉನ್ನತವಾಗಿ ಮಾಡಲ್ಪಟ್ಟಾತನೂ ಆಗಿದ್ದಾನೆ.
ನೀವು ಮುಂಚೆ ಅಜ್ಞಾನಿಗಳಾಗಿದ್ದಾಗ ನಿಮಗಿದ್ದ ದುರಾಶೆಗಳನ್ನು ಅನುಸರಿಸಿ ನಡೆದಂತೆ ಇನ್ನು ನಡೆಯುವವರಾಗಿರದೆ
ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
ನಿಮ್ಮ ನಡವಳಿಕೆಯು ಅನ್ಯಜನರ ಮಧ್ಯದಲ್ಲಿ ಯೋಗ್ಯವಾಗಿರಲಿ; ಆಗ ಅವರು ಯಾವ ವಿಷಯದಲ್ಲಿ ನಿಮ್ಮನ್ನು ಕೆಟ್ಟವರೆಂದು ನಿಂದಿಸುತ್ತಾರೋ ಆ ನಿಮ್ಮ ವಿಷಯದಲ್ಲಿಯೇ ಸತ್ಕ್ರಿಯೆಗಳನ್ನು ಕಣ್ಣಾರೆಕಂಡು ದರ್ಶಿಸುವ ದಿನದಲ್ಲಿ ದೇವರನ್ನು ಕೊಂಡಾಡುವರು.
ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
ಇಗೋ, ನಾವು ದೇವರ ಪುತ್ರರೆಂದು ಕರೆಯಲ್ಪಡುವದರಲ್ಲಿ ತಂದೆಯು ಎಂಥಾ ಪ್ರೀತಿಯನ್ನು ನಮ್ಮ ಮೇಲೆ ಇಟ್ಟಿದ್ದಾನಲ್ಲಾ; ಈ ಕಾರಣದಿಂದ ಲೋಕವು ನಮ್ಮನ್ನು ತಿಳಿದುಕೊಳ್ಳು ವದಿಲ್ಲ; ಯಾಕಂದರೆ ಅದು ಆತನನ್ನು ತಿಳಿದು ಕೊಳ್ಳಲಿಲ್ಲ.
ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು