ಅವನು ನಿಮ್ಮೆಲ್ಲರನ್ನು ಕುರಿತು ಹಂಬಲಿಸುತ್ತಿದ್ದನು, ತಾನು ಅಸ್ವಸ್ಥನಾಗಿದ್ದ ವರ್ತಮಾನವನ್ನು ನೀವು ಕೇಳಿದ್ದರಿಂದ ತುಂಬಾ ವ್ಯಸನಪಟ್ಟನು.
Cross references
ಆದರೆ ದಾವೀದನು ಅಬ್ಷಾಲೋಮನ ಬಳಿಗೆ ಹೋಗುವ ದಕ್ಕೆ ಆಸೆಪಡುತ್ತಿದ್ದನು. ಯಾಕಂದರೆ ಅಮ್ನೋನನು ಸತ್ತುಹೋದದರಿಂದ ಅರಸನಾದ ದಾವೀದನು ಅವನಿ ಗೋಸ್ಕರ ಆದರಣೆಹೊಂದಿದನು.
ಆಗ ಕರ್ತನ ದೂತನು ಯೆಬೂಸಿ ಯನಾದ ಅರೌನನು ತುಳಿಸುವ ಕಣದ ಬಳಿಯಲ್ಲಿ ಇದ್ದನು. ದಾವೀದನು ಜನಸಂಹಾರ ದೂತನನ್ನು ನೋಡಿದಾಗ ಅವನು ಕರ್ತನಿಗೆ--ಇಗೋ, ನಾನೇ ಪಾಪಮಾಡಿದೆನು; ದುಷ್ಟತ್ವದಿಂದ ಮಾಡಿದವನು ನಾನೇ; ಆದರೆ ಈ ಕುರಿಗಳಂತಿರುವ ಜನರು ಮಾಡಿ ದ್ದೇನು? ನಿನ್ನ ಕೈ ನನಗೆ ವಿರೋಧವಾಗಿಯೂ ನನ್ನ ತಂದೆಯ ಮನೆಗೆ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ ಅಂದನು.
ನನ್ನ ದೂರುಗಳನ್ನು ಮರೆತು, ನನ್ನ ಭಾರವನ್ನು ಬಿಟ್ಟು, ಆದರಣೆಹೊಂದುವೆನು ಎಂದು ಹೇಳಿಕೊಂಡರೆ
ನಿಂದೆಯು ನನ್ನ ಹೃದಯವನ್ನು ಮುರಿದದೆ; ಭಾರದಿಂದ ನಾನು ತುಂಬಿದವನಾಗಿದ್ದೇನೆ, ಕನಿಕರಕ್ಕೋಸ್ಕರ ಕೆಲವರನ್ನು ನಿರೀಕ್ಷಿಸಿದೆನು, ಆದರೆ ಒಬ್ಬರೂ ಕಾಣಲಿಲ್ಲ. ಆದರಿಸುವವರಿಗೋಸ್ಕರ ಸಹ ಎದುರು ನೋಡಿದೆನು: ಆದರೆ ಯಾರೂ ಸಿಕ್ಕಲಿಲ್ಲ.
ಮನುಷ್ಯನ ಹೃದ ಯದಲ್ಲಿರುವ ಭಾರವು ಅದನ್ನು ಕುಗ್ಗಿಸುವದು; ಒಳ್ಳೆಯ ಮಾತು ಅದನ್ನು ಹಿಗ್ಗುವಂತೆ ಮಾಡುವದು.
ಚೀಯೋ ನಿನಲ್ಲಿ ದುಃಖಿಸುವವರಿಗೆ ಬೂದಿಗೆ ಬದಲಾಗಿ ಸೌಂದರ್ಯವನ್ನೂ ದುಃಖಕ್ಕೆ ಬದಲಾಗಿ ಆನಂದ ತೈಲವನ್ನೂ ಕುಂದಿದ ಆತ್ಮಕ್ಕೆ ಬದಲಾಗಿ ಸ್ತೋತ್ರದ ವಸ್ತ್ರವನ್ನೂ ಕೊಡುವದಕ್ಕೆ ನನ್ನನ್ನು ನೇಮಿಸಿದ್ದಾನೆ. ಆಗ ಅವರಿಗೆ ನೀತಿವೃಕ್ಷಗಳೆಂದೂ ಕರ್ತನು ತಾನು ಮಹಿಮೆ ಹೊಂದುವದಕ್ಕೋಸ್ಕರ ನೆಟ್ಟ ಗಿಡಗಳೆಂದೂ ಹೆಸರಾಗುವದು.
ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
ಆತನು ತನ್ನ ಜೊತೆಯಲ್ಲಿ ಪೇತ್ರನನ್ನೂ ಜೆಬೆದಾಯನ ಇಬ್ಬರು ಕುಮಾರರನ್ನೂ ಕರೆದುಕೊಂಡು ಹೋಗಿ ದುಃಖಿಸುವದಕ್ಕೂ ಬಹು ವ್ಯಥೆಪಡುವದಕ್ಕೂ ಆರಂಭಿಸಿದನು.
ಯೇಸು ಅತ್ತನು.
ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
ನೀವು ಸ್ಥಿರಗೊಳ್ಳುವಂತೆ ನನ್ನ ಮುಖಾಂತರ ನಿಮಗೆ ಯಾವದಾದರೂ ಆತ್ಮೀಕದಾನ ದೊರೆಯಲಿ ಎಂದು ನಾನು ನಿಮ್ಮನ್ನು ನೋಡಲು ಹಂಬಲಿಸುತ್ತೇನೆ.
ಅದೇನಂದರೆ ನನ್ನ ಹೃದಯದಲ್ಲಿ ದೊಡ್ಡ ಭಾರವೂ ಎಡೆಬಿಡದ ದುಃಖವೂ ಉಂಟು.
ಸಂತೋಷಪಡುವವರ ಸಂಗಡ ಸಂತೋಷಪಡಿರಿ; ಅಳುವವರ ಸಂಗಡ ಅಳಿರಿ.
ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
ಇದಲ್ಲದೆ ನಿಮ್ಮಲ್ಲಿ ರುವ ದೇವರ ಅಪಾರವಾದ ಕೃಪೆಯ ನಿಮಿತ್ತ ಅವರು ಪ್ರಾರ್ಥನೆ ಮಾಡುವವರಾಗಿ ನಿಮಗೋಸ್ಕರ ಹಂಬಲಿ ಸುತ್ತಾರೆ.ವರ್ಣಿಸಲಶಕ್ಯವಾದ ದೇವರದಾನಕ್ಕಾಗಿ ಆತನಿಗೆ ಸ್ತೋತ್ರವಾಗಲಿ.
ಒಬ್ಬನು ಮತ್ತೊಬ್ಬನ ಭಾರವನ್ನು ಹೊತ್ತುಕೊಳ್ಳಲಿ; ಹೀಗೆ ಕ್ರಿಸ್ತನ ನಿಯಮವನ್ನು ನೆರವೇರಿಸಿರಿ.
ಆದದರಿಂದ ನಿಮ್ಮ ನಿಮಿತ್ತ ನನ ಗುಂಟಾದ ಕಷ್ಟಗಳಿಗಾಗಿ ನೀವು ಧೈರ್ಯಗೆಡಬಾರ ದೆಂದು ನಾನು ಅಪೇಕ್ಷಿಸುತ್ತೇನೆ. ಅವು ನಿಮ್ಮ ಗೌರವವಾಗಿವೆ.
ನಾನು ನಿಮ್ಮನ್ನು ನೆನಸಿಕೊಳ್ಳುವಾಗೆಲ್ಲಾ ನನ್ನ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇನೆ;
ಯೇಸು ಕ್ರಿಸ್ತನಿಗಿರುವಂಥ ಕನಿಕರದಿಂದ ನಿಮ್ಮೆಲ್ಲರಿ ಗೋಸ್ಕರ ನಾನು ಎಷ್ಟೋ ಹಂಬಲಿಸುತ್ತೇನೆ; ಇದಕ್ಕೆ ದೇವರೇ ನನ್ನ ಸಾಕ್ಷಿ.
ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
ನೀವು ಸದ್ಯಕ್ಕೆ ಸ್ವಲ್ಪಕಾಲ ಅಗತ್ಯವಿದ್ದಲ್ಲಿ ನಾನಾ ಕಷ್ಟಗಳಲ್ಲಿ ದುಃಖಿಸುವವ ರಾಗಿದ್ದರೂ ಬಹಳವಾಗಿ ಹರ್ಷಿಸುವವರಾಗಿದ್ದೀರಿ.