ಹೀಗೆ ಆತನನ್ನೂ ಆತನ ಪುನರುತ್ಥಾನ ದಲ್ಲಿರುವ ಶಕ್ತಿಯನ್ನೂ ಆತನ ಬಾಧೆಗಳಲ್ಲಿ ಪಾಲುಗಾರ ನಾಗುವದನ್ನೂ ತಿಳಿದುಕೊಂಡು ಆತನ ಮರಣಕ್ಕೆ ಸರೂಪನಾಗುವೆನು.
Cross references
ಮತ್ತು ಆತನು ಅವರಿಗೆ--ನನ್ನ ಪಾತ್ರೆಯಲ್ಲಿ ನೀವು ಕುಡಿಯು ವದು ಮತ್ತು ನಾನು ಹೊಂದುವ ಬಾಪ್ತಿಸ್ಮವನ್ನು ನೀವು ಹೊಂದುವದು ನಿಜ; ಆದರೆ ನನ್ನ ಬಲಗಡೆಯಲ್ಲಾ ಗಲೀ ಎಡಗಡೆಯಲ್ಲಾಗಲೀ ಕೂತುಕೊಳ್ಳುವಂತೆ ಅನುಗ್ರಹಿಸುವದು ನನ್ನದಲ್ಲ; ಆದರೆ ನನ್ನ ತಂದೆಯಿಂದ ಯಾರಿಗೋಸ್ಕರ ಅದು ಸಿ
ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.
ಯಾವ ಮನುಷ್ಯನಾದರೂ ಅದನ್ನು ನನ್ನಿಂದ ತೆಗೆಯುವದಿಲ್ಲ; ಆದರೆ ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ. ನಾನು ಅದನ್ನು ಕೊಡುವದಕ್ಕೆ ನನಗೆ ಅಧಿಕಾರವಿದೆ; ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರವಿದೆ. ಈ ಅಪ್ಪಣೆಯನ್ನು ನಾನು ನನ್ನ ತಂದೆ ಯಿಂದ ಹೊಂದಿದ್ದೇನೆ ಅಂದನು.
ಯೇಸು ಆಕೆಗೆ--ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು;
ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.
ಆತನ ಆತ್ಮವು ಪಾತಾಳದಲ್ಲಿ ಬಿಡಲ್ಪಡಲಿಲ್ಲ ವೆಂತಲೂ ಆತನ ಶರೀರವು ಕೊಳೆಯಲಿಲ್ಲವೆಂತಲೂ ಕ್ರಿಸ್ತನ ಪುನರುತ್ಥಾನದ ವಿಷಯವಾಗಿ ಅವನು ಇದನ್ನು ಮುಂದಾಗಿ ನೋಡಿ ಹೇಳಿದನು;
ಯೇಸು ಕ್ರಿಸ್ತನಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡವರಾದ ನಾವೆಲ್ಲರು ಆತನ ಮರಣದಲ್ಲಿ ಸೇರುವದಕ್ಕೆ ಬಾಪ್ತಿಸ್ಮ ಮಾಡಿಸಿಕೊಂಡೆವೆಂದು ನಿಮಗೆ ತಿಳಿಯದೋ?
ಆದರೆ ಕ್ರಿಸ್ತನು ನಿಮ್ಮಲ್ಲಿದ್ದರೆ ದೇಹವು ಪಾಪದ ದೆಸೆಯಿಂದ ಸತ್ತದ್ದಾಗಿದ್ದರೂ ಆತ್ಮವು ನೀತಿಯ ದೆಸೆ ಯಿಂದ ಜೀವವುಳ್ಳದ್ದಾಗಿದೆ.
ಮಕ್ಕಳಾ ಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತ ನೊಂದಿಗೆ ಸಹ ಬಾಧ್ಯರು; ಆತನೊಂದಿಗೆ ಶ್ರಮೆ ಯನ್ನನುಭವಿಸುವದಾದರೆ ಒಟ್ಟಾಗಿ ನಾವು ಸಹ ಮಹಿಮೆಯನ್ನು ಹೊಂದುವೆವು.
ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ಮನುಷ್ಯನ ಮೂಲಕ ಮರಣವುಂಟಾದ ಕಾರಣ ಮನುಷ್ಯನ ಮೂಲಕವೇ ಸತ್ತವರಿಗೆ ಪುನರುತ್ಥಾನ ವುಂಟಾಗುವದು.
ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
ಆತನು ನಮ್ಮನ್ನು ಎಂಥಾ ಭಯಂಕರವಾದ ಮರಣದಿಂದ ತಪ್ಪಿಸಿದ್ದಾನೆ, ಮತ್ತು ತಪ್ಪಿಸುತ್ತಾನೆ, ಇನ್ನು ಮುಂದೆಯೂ ಆತನು ನಮ್ಮನ್ನು ತಪ್ಪಿಸುವನೆಂದು ನಾವು ಆತನಲ್ಲಿ ಭರವಸೆಯುಳ್ಳವರಾಗಿದ್ದೇವೆ.
ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ತೋರಿ ಬರುವದಕ್ಕಾಗಿ ಕರ್ತನಾದ ಯೇಸುವಿನ ಮರಣವನ್ನು ನಾವು ಯಾವಾಗಲೂ ದೇಹದಲ್ಲಿ ಹೊರುತ್ತಾ ಇದ್ದೇವೆ.
ಬಲಹೀನತೆಯ ಮೂಲಕ ಆತನು ಶಿಲುಬೆಗೆ ಹಾಕಲ್ಪಟ್ಟಿದ್ದಾಗ್ಯೂ ದೇವರ ಬಲದಿಂದ ಇನ್ನೂ ಬದುಕುತ್ತಾನೆ; ನಾವು ಸಹ ಆತನಲ್ಲಿ ಬಲಹೀನ ರಾಗಿದ್ದೇವೆ, ಆದರೂ ನಾವು ನಿಮಗೋಸ್ಕರವಾಗಿ ದೇವರ ಬಲದಿಂದ ಆತನೊಂದಿಗೆ ಬದುಕುವೆವು.
ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ; ಆದಾಗ್ಯೂ ನಾನು ಜೀವಿ ಸುತ್ತೇನೆ; ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ; ಈಗ ಶರೀರದಲ್ಲಿರುವ ನಾನು ಜೀವಿಸುವದು ದೇವಕುಮಾರನ ಮೇಲಣ ನಂಬಿಕೆ ಯಲ್ಲಿಯೇ, ಆತನು ನನ್ನನ್ನು ಪ್ರೀತಿಸಿ ನನಗೋಸ್ಕರ ತನ್ನನ್ನೇನಾನು ದೇವರ ಕೃಪೆಯನ್ನು ನಿರರ್ಥಕ ಮಾಡುವದಿಲ್ಲ. ನ್ಯಾಯಪ್ರಮಾಣದಿಂದ ನೀತಿಯುಂಟಾಗುವದಾದರೆ ಕ್ರಿಸ್ತನು ಮರಣವನ್ನು ಹೊಂದಿದ್ದು ವ್ಯರ್ಥವಾಯಿತು.
ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.
ನಾನು ಈಗ ನಿಮಗೋಸ್ಕರ ಅನುಭವಿ ಸುತ್ತಿರುವ ಬಾಧೆಗಳಲ್ಲಿ ಸಂತೋಷಪಟ್ಟು ಕ್ರಿಸ್ತನ ಸಂಕಟ ಗಳೊಳಗೆ ಇನ್ನೂ ಉಳಿದದ್ದನ್ನು ಸಭೆಯೆಂಬ ಆತನ ದೇಹಕ್ಕೋಸ್ಕರ ನನ್ನ ಶರೀರದಲ್ಲಿ ಅನುಭವಿಸಿ ತೀರಿಸು ತ್ತೇನೆ.
ನಿಮ್ಮ ಪಾಪಗಳಲ್ಲಿಯೂ ಸುನ್ನತಿಯಿಲ್ಲದ ಶರೀರ ಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಆತನೊಂದಿಗೆ ಬದುಕಿಸಿ ನಿಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.
ಹಾಗಾದರೆ ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟವರಾಗಿದ್ದರೆ ಮೇಲಿರುವ ವುಗಳನ್ನೇ ಹುಡುಕಿರಿ; ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ.
ಯೇಸು ಸತ್ತು ತಿರಿಗಿ ಎದ್ದನೆಂದು ನಾವು ನಂಬಿದ ಮೇಲೆ ಅದರಂತೆ ಯೇಸುವಿನ ಲ್ಲಿದ್ದುಕೊಂಡು ನಿದ್ರೆಹೋಗುವವರನ್ನು ಸಹ ದೇವರು ಆತನೊಡನೆ ಕರೆದುಕೊಂಡು ಬರುವನೆಂದು ನಂಬ ಬೇಕಲ್ಲವೇ.
ಇದು ನಂಬತಕ್ಕ ದ್ದಾಗಿದೆ, ಏನೆಂದರೆ--ನಾವು ಆತನೊಡನೆ ಸತ್ತಿದ್ದರೆ ಆತನೊಡನೆ ನಾವು ಸಹ ಜೀವಿಸುವೆವು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ತನ್ನ ಮಹಾ ಕರುಣಾನುಸಾರವಾಗಿ ಜೀವಕರವಾದ ನಿರೀಕ್ಷೆಗೂ
ಕ್ರಿಸ್ತನು ಶರೀರದಲ್ಲಿ ನಮಗೋಸ್ಕರ ಬಾಧೆಪಟ್ಟದ್ದರಿಂದ ನೀವು ಸಹ ಆತನಿಗಿದ್ದ ಮನಸ್ಸನ್ನು ಧರಿಸಿಕೊಳ್ಳಿರಿ. ಯಾಕಂದರೆ ಶರೀರ ದಲ್ಲಿ ಬಾಧೆಪಟ್ಟವನು ಪಾಪಮಾಡುವದನ್ನು ನಿಲ್ಲಿಸಿ ಬಿಟ್ಟಿದ್ದಾನೆ.
ನೀವು ಕ್ರಿಸ್ತನ ಬಾಧೆ ಗಳಲ್ಲಿ ಪಾಲುಗಾರರಾಗಿರುವದರಿಂದ ಸಂತೋಷವುಳ್ಳ ವರಾಗಿರ್ರಿ; ಇದಲ್ಲದೆ ಆತನ ಮಹಿಮೆಯ ಪ್ರತ್ಯಕ್ಷತೆ ಯಲ್ಲಿ ನೀವು ಸಂತೋಷಪಟ್ಟು ಅತ್ಯಂತ ಉಲ್ಲಾಸಗೊಳ್ಳುವಿರಿ.
ನಾವು ಆತನ ಆಜ್ಞೆಗಳನ್ನು ಕೈಕೊಂಡು ನಡೆಯು ವದರಿಂದಲೇ ಆತನನ್ನು ಬಲ್ಲವರಾಗಿದ್ದೇವೆಂದು ತಿಳು ಕೊಳ್ಳುತ್ತೇವೆ.
ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.
ಸತ್ತವನಾದೆನು,ಈಗ ಬದುಕುವವನಾಗಿದ್ದೇನೆ. ಇಗೋ, ನಾನು ಎಂದೆಂ ದಿಗೂ ಬದುಕುವವನಾಗಿದ್ದೇನೆ. ಆಮೆನ್. ನರಕದ ಮತ್ತು ಮರಣದ ಬೀಗದ ಕೈಗಳೂ ನನ್ನಲ್ಲಿ ಅವೆ.