ಆದದರಿಂದ ನಮ್ಮಲ್ಲಿ ಪರಿ ಪೂರ್ಣರಾದವರು ಇದೇ ಅಭಿಪ್ರಾಯವುಳ್ಳವರಾಗಿ ರೋಣ; ಯಾವದಾದರೂ ಒಂದು ವಿಷಯದಲ್ಲಿ ನೀವು ಬೇರೆ ಅಭಿಪ್ರಾಯವುಳ್ಳವರಾಗಿದ್ದರೆ ಅದನ್ನೂ ದೇವರು ನಿಮಗೆ ತೋರಿಸಿಕೊಡುವನು.
Cross references
ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
ಹೌದು, ತಿಳುವಳಿಕೆಗಾಗಿ ಮೊರೆ ಯಿಟ್ಟು ವಿವೇಕಕ್ಕಾಗಿ ನಿನ್ನ ಸ್ವರವನ್ನು ಎತ್ತಿ
ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಆದದರಿಂದ ಪರಲೋಕ ದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣ ನಾಗಿರುವಂತೆಯೇ ನೀವೂ ಪರಿಪೂರ್ಣರಾಗಿರ್ರಿ.
ಹಾಗಾದರೆ ಕೆಟ್ಟವರಾಗಿರುವ ನೀವು ನಿಮ್ಮ ಮಕ್ಕಳಿಗೆ ಒಳ್ಳೇದಾನಗಳನ್ನು ಕೊಡುವದು ಹೇಗೆಂಬದನ್ನು ತಿಳಿ ದವರಾಗಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತನ್ನನ್ನು ಬೇಡಿಕೊಳ್ಳುವವರಿಗೆ ಪವಿ ತ್ರಾತ್ಮನನ್ನು ದಯಪಾಲಿಸುವನಲ್ಲವೇ?
ಯಾವನಾದರೂ ಆತನ ಚಿತದಂತೆ ಮಾಡಿದರೆ ಈ ಬೋಧನೆಯು ದೇವರದೋ ಅಥವಾ ನನ್ನಷ್ಟಕ್ಕೆ ನಾನೇ ಹೇಳುತ್ತೇನೋ ಎಂಬದು ಅವನಿಗೆ ತಿಳಿಯುವದು.
ಆದದರಿಂದ ಬಲವುಳ್ಳವರಾದ ನಾವು ನಮ್ಮನ್ನೇ ಸಂತೋಷಪಡಿಸಿಕೊಳ್ಳದೆ ದುರ್ಬಲರ ಬಲಹೀನತೆಗಳನ್ನು ಸಹಿಸಿಕೊಳ್ಳತಕ್ಕದ್ದು.
ಆದರೂ ಪರಿಪೂರ್ಣರಾದವರಲ್ಲಿ ಜ್ಞಾನವನ್ನೇ ನಾವು ಹೇಳುತ್ತೇವೆ; ಆದಾಗ್ಯೂ ಅದು ಇಹಲೋಕದ ಜ್ಞಾನವಲ್ಲ ಇಲ್ಲವೆ ಇಲ್ಲದೆ ಹೋಗುವ ಇಹ ಲೋಕಾಧಿಪತಿಗಳ ಜ್ಞಾನವೂ ಅಲ್ಲ.
ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
ನೀವು ಬೇರೆ ಅಭಿಪ್ರಾಯವನ್ನು ಹಿಡಿಯುವದಿಲ್ಲವೆಂದು ಕರ್ತನಲ್ಲಿ ನಿಮ್ಮನ್ನು ಕುರಿತು ನನಗೆ ಭರವಸೆ ಉಂಟು. ಆದರೆ ನಿಮ್ಮನ್ನು ಕಳವಳಪಡಿಸುವವನು ಯಾವನಾದರೂ ಸರಿಯೇ ತನ್ನ ದಂಡನೆಯನ್ನು ಅನುಭವಿಸುವನು.
ಇಷ್ಟ ರೊಳಗೆ ನಾನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೊ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಹಿಂದಟ್ಟುತ್ತಾ ಇದ್ದೇನೆ.
ಕ್ರಿಸ್ತ ಯೇಸುವಿನಲ್ಲಿ ಪ್ರತಿಯೊಬ್ಬನನ್ನು ಪರಿಪೂರ್ಣ ನನ್ನಾಗಿ ಮಾಡುವಂತೆ ಪ್ರತಿಯೊಬ್ಬನನ್ನು ಎಚ್ಚರಿಸುತ್ತಾ ಎಲ್ಲಾ ಜ್ಞಾನದಲ್ಲಿ ಪ್ರತಿಯೊಬ್ಬನಿಗೂ ಬೋಧಿಸುತ್ತಾ ನಾವು ಆತನನ್ನು ಸಾರುವವರಾಗಿದ್ದೇವೆ.ನನ್ನಲ್ಲಿ ಬಲದಿಂದ ಕಾರ್ಯ ಮಾಡುವಾತನ ಕೆಲಸಕ್ಕನು ಸಾರವಾಗಿ ನಾನು ಸಹ ಅದಕ್ಕಾಗಿ ಪ್ರಯಾಸಪಡುತ್ತಾ ಹೋರಾಡುತ್ತೇನೆ.
ನಿಮ್ಮಲ್ಲಿ ಒಬ್ಬನಾದ ಕ್ರಿಸ್ತನ ಸೇವಕನಾಗಿರುವ ಎಪಫ್ರನು ನಿಮಗೆ ವಂದನೆ ಹೇಳುತ್ತಾನೆ. ನೀವು ಪರಿಪೂರ್ಣರಾಗಿಯೂ ಎಲ್ಲಾ ವಿಷಯಗಳಲ್ಲಿ ದೇವರ ಚಿತ್ತವನ್ನು ಕುರಿತು ಪೂರ್ಣ ನಿಶ್ಚಯವುಳ್ಳವರಾಗಿಯೂ ನಿಂತಿರಬೇಕೆಂದು ಇವನು ನಿಮಗೋಸ್ಕರ ಕಷ್ಟಪಟ್ಟು ಪ್ರಾರ್ಥನೆಗಳಲ್ಲಿ ಹೋರಾಡುತ್ತಾನೆ.
ಆದದರಿಂದ ದೇವರ ಮನುಷ್ಯನು ಪರಿಪೂರ್ಣ ನಾಗಿ ಸಕಲ ಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
ಆ ತಾಳ್ಮೆಯು ಸಿದ್ದಿಗೆ ಬಂದಾಗ ನೀವು ಸಂಪೂರ್ಣರೂ ಸಿದ್ಧವಾದವರೂ ಯಾವದರ ಲ್ಲಿಯೂ ಕಡಿಮೆಯಿಲ್ಲದವರೂ ಆಗಿರುವಿರಿ.
ಯಾವನಾದರೂ ಆತನ ವಾಕ್ಯವನ್ನು ಕೈಕೊಂಡು ನಡೆದರೆ ಅವನಲ್ಲಿ ನಿಜವಾಗಿ ದೇವರ ಪ್ರೀತಿಯು ಪರಿಪೂರ್ಣವಾಗಿದೆ. ಇದರಿಂದಲೇ ನಾವು ಆತನಲ್ಲಿ ದ್ದೇವೆಂಬದನ್ನು ತಿಳುಕೊಳ್ಳುತ್ತೇವೆ.