ನಾಯಿಗಳಿಗೆ ಎಚ್ಚರಿಕೆಯಾಗಿರ್ರಿ; ದುಷ್ಟ ಕೆಲಸದವರಿಗೆ ಎಚ್ಚರಿಕೆ ಯಾಗಿರ್ರಿ. ಅಂಗಚ್ಛೇದನೆಯ ವಿಷಯದಲ್ಲಿ ಎಚ್ಚರಿಕೆ ಯಾಗಿರ್ರಿ.
Cross references
ನಾಯಿ ಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಸಭೆಯು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.
ನನ್ನ ಪ್ರಾಣವನ್ನು ಕತ್ತಿಯಿಂದಲೂ ನನಗೆ ಪ್ರಿಯವಾದದ್ದನ್ನು ನಾಯಿಯ ಬಲದಿಂದಲೂ ಬಿಡಿಸು.
ಕೇಡು ಮಾಡುವವರೇ, ನನ್ನಿಂದ ತೊಲಗಿರಿ; ನನ್ನ ದೇವರ ಆಜ್ಞೆಗಳನ್ನು ಕೈಕೊಳ್ಳುವೆನು.
ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು ತನ್ನ ಮೂಢತನಕ್ಕೆ ಹಿಂದಿರುಗುತ್ತಾನೆ.
ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
ನಾಯಿಗಳಿಗೆ ಪವಿತ್ರವಾದದ್ದನ್ನು ಕೊಡಬೇಡಿರಿ ಇಲ್ಲವೆ ನಿಮ್ಮ ಮುತ್ತುಗಳನ್ನು ಹಂದಿಗಳ ಮುಂದೆ ಹಾಕಬೇಡಿರಿ. ಹಾಕಿದರೆ ಅವುಗಳನ್ನು ತುಳಿದು ಬಿಟ್ಟು ಮತ್ತೆ ತಿರುಗಿಕೊಂಡು ನಿಮ್ಮನ್ನು ಹರಿದು ಬಿಟ್ಟಾವು.
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ಆಗ ಅನೇಕರು ಅಭ್ಯಂತರಪಟ್ಟು ಒಬ್ಬರನ್ನೊಬ್ಬರು ಹಿಡುಕೊಡುವರು ಮತ್ತು ಒಬ್ಬರನ್ನೊಬ್ಬರು ಹಗೆಮಾಡು ವರು.
ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ನನ್ನ ಜೊತೆಯಲ್ಲಿದ್ದ ತೀತನು ಗ್ರೀಕನಾಗಿದ್ದರೂ ಅವನಿಗೆ ಸುನ್ನತಿಯಾಗಬೇಕೆಂದು ಯಾರೂ ಬಲಾತ್ಕಾರ ಮಾಡ ಲಿಲ್ಲ.
ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ಕರೆಯಲ್ಪಟ್ಟಿದ್ದೀರಿ. ಸ್ವಾತಂತ್ರ್ಯವನ್ನು ಶರೀರಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ.
ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರವಾಗಿರ್ರಿ.
ಆತ್ಮದಲ್ಲಿ ದೇವರನ್ನು ಆರಾಧಿಸುವವರೂ ಕ್ರಿಸ್ತ ಯೇಸುವಿನಲ್ಲಿ ಸಂತೋಷಿಸುವವರೂ ಶರೀರದಲ್ಲಿ ಭರವಸೆಯಿಲ್ಲದವರೂ ಆದ ನಾವೇ ಸುನ್ನತಿಯವರಾಗಿ ದ್ದೇವೆ.
ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು. ಅವರು ಭೂಸಂಬಂಧವಾದವುಗಳ ಮೇಲೆ ಮನಸ್ಸಿಡುತ್ತಾರೆ.)
ನಂಬಿಕೆಯನ್ನೂ ಒಳ್ಳೇ ಮನಸ್ಸಾಕ್ಷಿಯನ್ನೂ ಹಿಡಿದುಕೋ; ಕೆಲವರು ನಂಬಿಕೆ ಯನ್ನು ತಳ್ಳಿಬಿಟ್ಟು ಅದರ ವಿಷಯದಲ್ಲಿ ಹಡಗು ಒಡೆದ ವರಂತೆ ಇದ್ದಾರೆ;ಹುಮೆನಾಯನೂ ಅಲೆಕ್ಸಾಂದ ರನೂ ಅವರಲ್ಲಿದ್ದಾರೆ. ಇವರು ದೇವದೂಷಣೆ ಮಾಡ ಬಾರದೆಂಬದನ್ನು ಕಲಿತುಕೊಳ್ಳುವಂತೆ ನಾನು ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.
ಆದರೆ ಕಡೇ ದಿವಸಗಳಲ್ಲಿ ಅಪಾಯಕರ ವಾದ ಕಾಲಗಳು ಬರುವವೆಂಬದನ್ನು ಸಹ ತಿಳಿದುಕೋ.
ಯಾಕಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸ ಲಾರದ ಕಾಲವು ಬರುತ್ತದೆ; ಅದರಲ್ಲಿ ಅವರು ತೀಟೇ ಕಿವಿಯುಳ್ಳವರಾಗಿ ತಮ್ಮ ದುರಾಶೆಗಳಿಗೆ ಅನುಕೂಲ ವಾದ ಉಪದೇಶಕರನ್ನು ಇಟ್ಟುಕೊಳ್ಳುವರು.
ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು; ಕರ್ತನು ಅವನ ಕೃತ್ಯಗಳಿಗೆ ಸರಿ ಯಾಗಿ ಅವನಿಗೆ ಪ್ರತಿಫಲವನ್ನು ಕೊಡುವನು.
ಅವರು ತಾವು ದೇವರನ್ನು ಅರಿತವರೆಂದು ಹೇಳಿ ಕೊಳ್ಳುತ್ತಾರೆ; ಆದರೆ ಅವರು ಅಸಹ್ಯರೂ ಅವಿಧೇಯ ರೂ ಸತ್ಕಾರ್ಯಗಳಿಗೆಲ್ಲಾ ಭ್ರಷ್ಟರೂ ಆಗಿರುವದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುವರು.
ತಪ್ಪಾದ ಮಾರ್ಗದಲ್ಲಿ ಜೀವಿಸುವವರಿಂದ ಸಂಪೂರ್ಣವಾಗಿ ತಪ್ಪಿಸಿಕೊಂಡವರ ಸಂಗಡ ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಹೆಚ್ಚಾದ ಬಂಡುತನದಿಂದ ಅವರನ್ನು ಮರುಳುಗೊಳಿಸುತ್ತಾರೆ.
ನಾಯಿ ತಾನು ಕಕ್ಕಿದ್ದನ್ನು ನೆಕ್ಕುವದಕ್ಕೆ ತಿರುಗಿ ಕೊಂಡಿತು ಮತ್ತು ತೊಳೆದ ಹಂದಿ ಕೆಸರಿನಲ್ಲಿ ಹೊರಳಾಡುವದಕ್ಕೆ ತಿರುಗಿಕೊಂಡಿತು ಎಂಬ ನಿಜವಾದ ಗಾದೆಗೆ ಸರಿಯಾಗಿ ಅವರಿಗೆ ಸಂಭವಿಸಿತು.
ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವ ಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಕರ್ತನಾದ ದೇವರನ್ನು ಮತ್ತು ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಈ ಕೆಲವು ಜನರು ರಹಸ್ಯವಾಗಿ ಒಳಗೆ ಹೊಕ್ಕಿದ್ದಾರೆ; ಇವರು ಈ ದಂ
ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ ಮತ್ತು ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಯಾವವುಗಳನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.
ನಾನು ನಿನ್ನ ಕೃತ್ಯಗಳನ್ನೂ ಸಂಕಟವನ್ನೂ ಬಡತನವನೂ ಬಲ್ಲೆನು; (ಆದರೂ ನೀನು ಐಶ್ವರ್ಯವಂತನೇ). ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳು ವವರ ದೂಷಣೆಯನ್ನು ನಾನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿ ದ್ದಾರೆ.
ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
ಆದರೆ ಭಯ ಗ್ರಸ್ಥರು, ನಂಬಿಕೆಯಿಲ್ಲದವರು, ಅಸಹ್ಯವಾದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾ ರಾಧಕರು ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳು ಉರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.
ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.