ಆತನು ಎಲ್ಲವನ್ನೂ ತನಗೆ ಅಧೀನ ಮಾಡಿಕೊಳ್ಳಲಾಗುವ ಪರಾಕ್ರಮವನ್ನು ಸಾಧಿಸಿ ದೀನಾ ವಸ್ಥೆಯುಳ್ಳ ನಮ್ಮ ದೇಹವನ್ನು ರೂಪಾಂತರಪಡಿಸು ವದಕ್ಕೆ ಶಕ್ತನಾಗಿದ್ದು ಪ್ರಭಾವವುಳ್ಳ ತನ್ನ ದೇಹಕ್ಕೆ ಸಾರೂಪ್ಯವಾಗುವಂತೆ ಮಾಡುವನು.
Cross references
ನಾವು ನಿನ ಗೋಸ್ಕರ ಬಂಗಾರದ ಅಂಚುಗಳನ್ನು ಬೆಳ್ಳಿಯ ಕುಚ್ಚುಗಳೊಂದಿಗೆ ಮಾಡುವೆವು.
ಆತನು ಮರಣವನ್ನು ಜಯದಲ್ಲಿ ನುಂಗಿಬಿಡುವನು. ಕರ್ತನಾದ ದೇವರು ಎಲ್ಲಾ ಮುಖ ಗಳಲ್ಲಿರುವ ಕಣ್ಣೀರನ್ನೂ ಒರಸಿಬಿಡುವನು. ತನ್ನ ಜನರ ನಿಂದೆಯನ್ನೂ ಭೂಮಂಡಲದಿಂದಲೇ ತೆಗೆದುಹಾಕು ವನು, ಕರ್ತನೇ ಇದನ್ನು ನುಡಿದಿದ್ದಾನೆ.
ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಏಳುವವು; ದೂಳಿನ ನಿವಾಸಿಗಳೇ; ಎಚ್ಚತ್ತು ಹರ್ಷ ಸ್ವರಗೈಯಿರಿ! ನೀನು ಸುರಿಯುವ ಇಬ್ಬನಿಯು ಇಬ್ಬನಿಯ ಸಸ್ಯಗಳಂತಿವೆ. ಭೂಮಿಯು ಸತ್ತವರನ್ನು ಹೊರಪಡಿಸುವದು.
ನಾನು ಸಮಾಧಿಯ ಶಕ್ತಿಯಿಂದ ಅವರನ್ನು ಈಡು ಕೊಟ್ಟು ವಿಮೋಚಿಸುವೆನು; ಮರಣದಿಂದ ಅವರನ್ನು ಬಿಡಿಸುವೆನು. ಓ ಮರಣವೇ, ನಾನು ನಿನ್ನ ಬಾಧೆಗ ಳಾಗಿರುವೆನು; ಓ ಸಮಾಧಿಯೇ, ನಾನು ನಿನ್ನ ನಾಶನ ವಾಗಿದ್ದೇನೆ; ಪಶ್ಚಾತ್ತಾಪವು ನನ್ನ ಕಣ್ಣುಗಳಿಂದ ಮರೆ ಯಾಗಿದೆ.
ಅಲ್ಲಿ ಆತನು ಅವರ ಮುಂದೆ ರೂಪಾಂತರ ಗೊಂಡನು. ಆತನ ಮುಖವು ಸೂರ್ಯನಂತೆ ಪ್ರಕಾಶಿಸಿತು; ಮತ್ತು ಆತನ ಉಡುಪು ಬೆಳಕಿನಂತೆ ಬೆಳ್ಳಗಿತ್ತು.
ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಅವರಿಗೆ--ನೀವು ಬರಹಗಳನ್ನಾಗಲೀ ದೇವರ ಶಕ್ತಿಯನ್ನಾಗಲೀ ತಿಳಿಯದೆ ತಪ್ಪುವವರಾಗಿದ್ದೀರಿ.
ಯೇಸು ಬಂದು ಅವರೊಂದಿಗೆ ಮಾತ ನಾಡಿ-- ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲ್ಪಟ್ಟಿದೆ;
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಗಳಿಗೆ ಬರುತ್ತದೆ; ಅದು ಈಗಲೇ ಬಂದಿದೆ; ಕೇಳುವವರು ಬದುಕುವರು.
ಮಾರ್ಥಳು ಆತನಿಗೆ--ಕಡೇ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ತಿರಿಗಿ ಎದ್ದೇಳುವನೆಂದು ನಾನು ಬಲ್ಲೆನು ಎಂದು ಹೇಳಿದಳು.
ಆತನು ಅನೇಕ ಸಹೋದರರಲ್ಲಿ ತನ್ನ ಮಗನು ಜ್ಯೇಷ್ಠಪುತ್ರನಾಗಿರಬೇಕೆಂದು ತಾನು ಯಾರನ್ನು ಮೊದಲು ತಿಳುಕೊಂಡನೋ ಅವರನ್ನು ತನ್ನ ಮಗನ ಸಾರೂಪ್ಯವುಳ್ಳವರಾಗುವಂತೆ ಮೊದಲೇ ನೇಮಿಸಿ ದನು.
ಯಾಕಂದರೆ ತಾನು ಎಲ್ಲಾ ವಿರೋಧಿ ಗಳನ್ನು ತನ್ನ ಪಾದಗಳ ಕೆಳಗೆ ಹಾಕುವ ತನಕ ಆತನು ಆಳುವದು ಅವಶ್ಯ.
ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರ ವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡು ತ್ತದೆ. ನಿರ್ಲಯಾವಸ್ಥೆಯಲ್ಲಿ ಎಬ್ಬಿಸಲ್ಪಡುತ್ತದೆ.
ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದ ದ್ದೆಂಬದನ್ನೂ ಆತನ ಬಲಾತಿಶಯವು ಎಷ್ಟು ಮಹತ್ತಾದ ದ್ದೆಂಬದನ್ನೂ ನೀವು ತಿಳುಕೊಳ್ಳು ವಂತೆ ಅನುಗ್ರಹಿಸಲಿ.
ನಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನ ಜೊತೆ ಯಲ್ಲಿ ಪ್ರಭಾವದಿಂದ ಕೂಡಿದವರಾಗಿ ಪ್ರತ್ಯಕ್ಷ ರಾಗುವಿರಿ.
ಪ್ರಿಯರೇ, ನಾವು ಈಗ ದೇವರ ಪುತ್ರರಾಗಿದ್ದೇವೆ, ಮುಂದೆ ನಾವು ಏನಾಗುವೆವೋ ಅದು ಇನ್ನೂ ಪ್ರತ್ಯಕ್ಷವಾಗಲಿಲ್ಲ. ಆತನು ಪ್ರತ್ಯಕ್ಷ ನಾದಾಗ ನಾವು ಆತನ ಹಾಗಿರುವೆವೆಂದು ಬಲ್ಲೆವು; ಯಾಕಂದರೆ ನಾವು ಆತನನ್ನು ಆತನಿರುವ ಪ್ರಕಾರವೇ ನೋಡುವೆವು.
ನಾನೇ ಅಲ್ಫಾವೂ ಓಮೆಗವೂ ಆದಿಯೂ ಅಂತ್ಯವೂ ಇರುವಾತನೂ ಇದ್ದಾತನೂ ಮತ್ತು ಬರು ವಾತನೂ ಸರ್ವಶಕ್ತನೂ ಆಗಿದ್ದೇನೆ ಎಂದು ಕರ್ತನು ಹೇಳುತ್ತಾನೆ.
ಆ ಏಳು ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತಿದ್ದಾತನನ್ನು ಕಂಡೆನು. ಆತನು ಪಾದದವರೆಗೆ ಇರುವ ನಿಲುವಂಗಿಯನ್ನು ತೊಟ್ಟು ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.
ಆಮೇಲೆ ಬೆಳ್ಳಗಿರುವ ಮಹಾಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ನಾನು ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಅವುಗಳಿಗೆ ಸ್ಥಳವಿಲ್ಲದಂತಾಯಿತು.