ಆಸಕ್ತಿಯನ್ನು ನೋಡಿದರೆ ನಾನು ಸಭೆಯ ಹಿಂಸಕನು, ನ್ಯಾಯಪ್ರಮಾಣದಲ್ಲಿ ಹೇಳಿರುವ ನೀತಿ ಯನ್ನು ನೋಡಿದರೆ ನಾನು ನಿರ್ದೋಷಿ.
Cross references
ಇಲ್ಲವೆ ಹಸಿಮಾಂಸವು ಮತ್ತೆ ತಿರಿಗಿ ಬೆಳ್ಳಗಾದರೆ ಅವನು ಯಾಜಕನ ಬಳಿಗೆ ಬರಬೇಕು.
ಆ ಊರಿನವರು ಯೋವಾಷನಿಗೆ--ನಿನ್ನ ಮಗನನ್ನು ಹೊರಗೆ ತಕ್ಕೊಂಡು ಬಾ; ಅವನು ಸಾಯಬೇಕು. ಯಾಕಂದರೆ ಬಾಳನ ಬಲಿಪೀಠವನ್ನು ಕೆಡವಿ ಅದರ ಬಳಿಯಲ್ಲಿದ್ದ ತೋಪನ್ನು ಕಡಿದು ಹಾಕಿದನು ಅಂದರು.
ಆಗ ಅರಸನು ಗಿಬ್ಯೋನ್ಯರನ್ನು ಕಳುಹಿಸಿದನು. (ಆದರೆ ಗಿಬ್ಯೋನ್ಯರು ಇಸ್ರಾಯೇಲ್ ಮಕ್ಕಳಾಗಿರದೆ ಅಮೋರಿಯರಲ್ಲಿ ಉಳಿದವರಾಗಿದ್ದರು. ಅವರಿಗೆ ಇಸ್ರಾಯೇಲ್ ಮಕ್ಕಳು ಆಣೆ ಇಟ್ಟಿದ್ದರು. ಸೌಲನು ಇಸ್ರಾಯೇಲ್ ಮಕ್ಕಳಿಗೋಸ್ಕರವಾಗಿಯೂ ಯೆಹೂದ ಕ್ಕೋಸ್ಕರವಾಗಿಯೂ ತೋರಿಸಿದ ಆಸಕ್ತಿಯಿಂದ ಅವ ರನ್ನು ಹೊಡೆಯಲು ಹುಡುಕಿದ್ದನು)
ನೀನು ನನ್ನ ಸಂಗಡ ಬಂದು ಕರ್ತನಿಗೋ ಸ್ಕರ ನನಗುಂಟಾದ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ತನ್ನ ರಥದಲ್ಲಿ ಕೂಡ್ರಿಸಿಕೊಂಡನು.
ನಾನು ನಿಮಗೆ ಹೇಳುವದೇನಂದರೆ-- ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ನಿಮ್ಮ ನೀತಿಯು ಹೆಚ್ಚಿನದಾಗಿರದ ಹೊರತು ನೀವು ಪರಲೋಕ ರಾಜ್ಯದಲ್ಲಿ ಪ್ರವೇಶಿಸುವದಕ್ಕಾಗುವದೇ ಇಲ್ಲ.
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ. ಆದರೆ ಅವು ಒಳಗೆ ಸುಲಿಗೆಯಿಂದಲೂ ದುರಾಶೆಯಿಂದಲೂ ತುಂಬಿರುತ್ತವೆ.
ಆಗ ಅವನು ಪ್ರತ್ಯುತ್ತರವಾಗಿ ಆತನಿಗೆ--ಬೋಧಕನೇ, ನಾನು ಇವೆಲ್ಲವುಗಳನ್ನು ನನ್ನ ಬಾಲ್ಯದಿಂದಲೇ ಅನುಸರಿಸಿದ್ದೇನೆ ಅಂದನು.
ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನ್ಯಾಯವಿಧಿಗಳನ್ನು ತಪ್ಪಿಲ್ಲದೆ ಕೈಕೊಂಡು ದೇವರ ಮುಂದೆ ನೀತಿವಂತರಾಗಿದ್ದರು.
ಆದರೆ ಸೌಲನು ಮನೆಮನೆಗಳಲ್ಲಿ ಹೊಕ್ಕು ಗಂಡಸರನ್ನೂ ಹೆಂಗಸರನ್ನೂ ಎಳಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ಹಾಳುಮಾಡುತ್ತಿದ್ದನು.
ಸೌಲನು ಕರ್ತನ ಶಿಷ್ಯರಿಗೆ ಇನ್ನೂ ವಿರೋಧವಾಗಿ ಬೆದರಿಕೆಯ ಮಾತುಗಳ ನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಮಹಾ ಯಾಜಕನ ಬಳಿಗೆ ಹೋಗಿ
ಅವರು ಅದನ್ನು ಕೇಳಿ ಕರ್ತನನ್ನು ಮಹಿಮೆಪಡಿಸಿ ಅವನಿಗೆ--ಸಹೋದರನೇ, ವಿಶ್ವಾಸಿ ಗಳಾದ ಯೆಹೂದ್ಯರು ಎಷ್ಟೋ ಸಾವಿರ ಮಂದಿ ಇದ್ದಾರೆಂಬದನ್ನು ನೀನು ನೋಡುತ್ತೀಯಲ್ಲಾ. ಅವರೆಲ್ಲರೂ ನ್ಯಾಯಪ್ರಮಾಣದ ವಿಷಯದಲ್ಲಿ ಅಭಿಮಾನವುಳ್ಳವರಾಗಿದ್ದಾರೆ.
ನಿಜವಾಗಿಯೂ ನಾನು ಕಿಲಿಕ್ಯದ ತಾರ್ಸ ಪಟ್ಟಣದಲ್ಲಿ ಹುಟ್ಟಿದ ಒಬ್ಬ ಯೆಹೂದ್ಯನು; ಆದರೂ ಈ ಪಟ್ಟಣದಲ್ಲಿ ಗಮಲಿ ಯೇಲನ ಪಾದದ ಬಳಿಯಲ್ಲಿ ಬೆಳೆದವನಾಗಿದ್ದು ಪಿತೃಗಳ ನ್ಯಾಯಪ್ರಮಾಣದ ಸಂಪೂರ್ಣಕ್ರಮಕ್ಕನು ಸಾರವಾಗಿ ಶಿಕ್ಷಣ ಹೊಂದಿ ಈ ದಿನ ನೀವೆಲ್ಲರೂ ಹೇಗೋ ಹಾಗೇ ದೇವರ ಕಡೆಗೆ ಆಸಕ್ತಿಯುಳ್ಳ ವನಾಗಿದ
ನಮ್ಮ ಮತದ ಬಹು ನಿಷ್ಠೆಯ ಪಂಗಡಕ್ಕನುಸಾರವಾಗಿ ನಾನು ಒಬ್ಬ ಫರಿಸಾಯನಾಗಿ ಬದುಕಿರುವದನ್ನು ಮೊದಲಿನಿಂದಲೂ ತಿಳಿದವರಾದ ಇವರು ಸಾಕ್ಷಿ ಕೊಡಬೇಕೆಂದಿದ್ದರೆ ಕೊಡಲಿ.
ನಜರೇತಿನ ಯೇಸುವಿನ ಹೆಸರಿಗೆ ಪ್ರತಿಕೂಲವಾಗಿ ಅನೇಕ ಕಾರ್ಯಗಳನ್ನು ಮಾಡಲೇಬೇಕೆಂದು ನಾನು ನಿಜವಾಗಿ ಅಂದುಕೊಂಡಿದ್ದೆನು.
ಮೊದಲು ನಾನು ನ್ಯಾಯಪ್ರಮಾಣವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪವು ಪುನರ್ಜೀವವಾಗಿ ನಾನು ಸತ್ತೆನು.
ಆದರೆ ನ್ಯಾಯಪ್ರಮಾಣ ದಿಂದುಂಟಾದ ನೀತಿಯನ್ನು ಅನುಸರಿಸಿದ ಇಸ್ರಾಯೇ ಲ್ಯರು ನ್ಯಾಯಪ್ರಮಾಣದ ನೀತಿಯನ್ನು ಹೊಂದದೆ ಹೋಗಿದ್ದಾರೆ.
ದೇವರಲ್ಲಿ ಆಸಕ್ತರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದದ್ದಲ್ಲ.
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನಷ್ಟೆ. ಯಾಕಂದರೆ ನಾನು ದೇವರ ಸಭೆಯನ್ನು ಹಿಂಸೆಪಡಿಸಿ ದ್ದರಿಂದ ಆಪೊಸ್ತಲನೆನಿಸಿಕೊಳ್ಳುವದಕ್ಕೆ ಯೋಗ್ಯನಲ್ಲ.
ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದಾಗಿತ್ತೆಂದು ನೀವು ಕೇಳಿದ್ದೀರಷ್ಟೆ; ನಾನು ದೇವರ ಸಭೆಯನ್ನು ಮಿತಿವಿಾರಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.
ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
ಮೊದಲು ದೇವದೂಷಕನೂ ಹಿಂಸಕನೂ ಕೇಡು ಮಾಡುವವನೂ ಆಗಿದ್ದ ನಾನು ಅವಿಶ್ವಾಸಿಯಾಗಿ ತಿಳಿಯದೆ ಹಾಗೆ ಮಾಡಿದ್ದರಿಂದ ನನ್ನ ಮೇಲೆ ಕರುಣೆ ಉಂಟಾಯಿತು.