ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
Cross references
ಅವರನ್ನು ಹೊರಗೆ ತಂದ ಮೇಲೆ ಆತನು--ನಿನ್ನ ಪ್ರಾಣಕ್ಕೋಸ್ಕರ ತಪ್ಪಿಸಿಕೋ; ನಿನ್ನ ಹಿಂದೆ ನೋಡಬೇಡ. ಸುತ್ತಲಿರುವ ಯಾವ ಮೈದಾನದಲ್ಲಿಯೂ ನಿಂತುಕೊಳ್ಳಬೇಡ, ನೀನು ನಾಶ ವಾಗದ ಹಾಗೆ ತಪ್ಪಿಸಿಕೊಂಡು ಬೆಟ್ಟಕ್ಕೆ ಹೋಗು ಅಂದನು.
ಆದರೆ ಲೋಟನ ಹಿಂದೆ ಇದ್ದ ಅವನ ಹೆಂಡತಿಯು ಹಿಂದಕ್ಕೆ ನೋಡಿ ಉಪ್ಪಿನ ಸ್ತಂಭವಾದಳು.
ಸೈತಾನನು ಪ್ರತ್ಯುತ್ತರವಾಗಿ ಕರ್ತ ನಿಗೆ--ಹೌದು, ಚರ್ಮಕ್ಕೆ ಚರ್ಮ, ತನಗೆ ಉಂಟಾ ದದ್ದನ್ನೆಲ್ಲಾ ತನ್ನ ಪ್ರಾಣಕ್ಕೊಸ್ಕರ ಮನುಷ್ಯನು ಕೊಡು ವನು.
ಒಬ್ಬನ ಪ್ರಾಣದ ವಿಮೋಚನೆಯು ಅವನ ಐಶ್ವರ್ಯವೇ; ಬಡವನು ಗದರಿಕೆಯನ್ನು ಕೇಳುವದಿಲ್ಲ.
ಸತ್ಯವನ್ನೂ ಜ್ಞಾನ ವನ್ನೂ ಶಿಕ್ಷೆಯನ್ನೂ ವಿವೇಕವನ್ನೂ ಕೊಂಡು ಅವುಗ ಳನ್ನು ಮಾರಬೇಡ.
ಗಳಿಸುವದಕ್ಕೆ ಒಂದು ಸಮಯ, ಕಳೆಯುವದಕ್ಕೆ ಒಂದು ಸಮಯ ಕಾಪಾಡುವದಕ್ಕೆ ಒಂದು ಸಮಯ, ಬಿಸಾಡುವದಕ್ಕೆ ಒಂದು ಸಮಯ;
ಪರಲೋಕರಾಜ್ಯವು ಹೊಲದಲ್ಲಿ ಬಚ್ಚಿಟ್ಟಿದ ಸಂಪತ್ತಿಗೆ ಹೋಲಿಕೆಯಾಗಿದೆ; ಅದನ್ನು ಒಬ್ಬ ಮನು ಷ್ಯನು ಕಂಡುಕೊಂಡು ಬಚ್ಚಿಟ್ಟು ಅದರ ಸಂತೋಷದ ನಿಮಿತ್ತ ಹೊರಟುಹೋಗಿ ತನಗಿದ್ದದ್ದನ್ನೆಲ್ಲಾ ಮಾರಿ ಆ ಹೊಲವನ್ನು ಕೊಂಡುಕೊಳ್ಳುತ್ತಾನೆ.
ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
ಅವನು ತನ್ನ ಉಡುಪನ್ನು ತೆಗೆದುಹಾಕಿ ಎದ್ದು ಯೇಸುವಿನ ಬಳಿಗೆ ಬಂದನು.
ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆ ಯನ್ನಾಗಲೀ ತಾಯಿಯನ್ನಾಗಲೀ ಹೆಂಡತಿಯನ್ನಾಗಲೀ ಮಕ್ಕಳನ್ನಾಗಲೀ ಸಹೋದರರನ್ನಾಗಲೀ ಸಹೋದರಿ ಯರನ್ನಾಗಲೀ ಹೌದು, ತನ್ನ ಸ್ವಂತ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರ ಲಾರನು.
ಅದರಂತೆಯೇ ನಿಮ್ಮಲ್ಲಿ ಯಾವನಾ ದರೂ ತನಗಿರುವವುಗಳನ್ನೆಲ್ಲಾ ಬಿಟ್ಟುಬಿಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.
ಆಗ ಯಜಮಾನನು ಅನ್ಯಾಯಗಾರನಾದ ಆ ಮನೆವಾರ್ತೆಯವನು ಜಾಣತನ ಮಾಡಿದನೆಂದು ಅವನನ್ನು ಹೊಗಳಿದನು; ಯಾಕಂದರೆ ಈ ಲೋಕದ ಮಕ್ಕಳು ತಮ್ಮ ಸಂತತಿಯವರಲ್ಲಿ ಬೆಳಕಿನ ಮಕ್ಕಳಿಗಿಂತ ಜಾಣರಾಗಿದ್ದಾರೆ.
ಆ ದಿನದಲ್ಲಿ ಮನೆಯ ಮಾಳಿಗೆಯ ಮೇಲೆ ಇದ್ದವನು ಮನೆಯಲ್ಲಿದ್ದ ತನ್ನ ಸಾಮಾನುಗಳನ್ನು ತೆಗೆದುಕೊಳ್ಳಲು ಕೆಳಗಿಳಿದು ಬಾರ ದಿರಲಿ. ಹಾಗೆಯೇ ಹೊಲದಲ್ಲಿದ್ದವನು ಹಿಂದಿರುಗಿ ಬಾರದಿರಲಿ.
ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು;
ಅವರು ಸಾಕಾದಷ್ಟು ತಿಂದಮೇಲೆ ಗೋದಿಯನ್ನು ಸಮುದ್ರಕ್ಕೆ ಚೆಲ್ಲಿ ಹಡಗನ್ನು ಹಗುರ ಮಾಡಿದರು.
ನಾವಂತೂ ಹುಟ್ಟುಯೆಹೂದ್ಯರು, ಅನ್ಯಜನ ರಂತೆ ಪಾಪಿಗಳಲ್ಲ.
ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ.
ನಾನಾದರೋ ಶರೀರ ಸಂಬಂಧವಾದವು ಗಳಲ್ಲಿ ಭರವಸವಿಟ್ಟರೂ ಇಡಬಹುದು, ಬೇರೆ ಯಾವ ನಾದರೂ ಶರೀರ ಸಂಬಂಧವಾದವುಗಳಲ್ಲಿ ಭರವಸವಿಡ ಬಹುದೆಂದು ಯೋಚಿಸುವದಾದರೆ ನಾನು ಅವನಿ ಗಿಂತಲೂ ಹೆಚ್ಚಾಗಿ ಹಾಗೆ ಯೋಚಿಸಬಹುದು.
ಹೌದು, ನಿಸ್ಸಂದೇಹವಾಗಿ ನನ್ನ ಕರ್ತನಾದ ಕ್ರಿಸ್ತ ಯೇಸುವಿನ ವಿಷಯವಾಗಿರುವ ಅತಿ ಶ್ರೇಷ್ಟವಾದ ಜ್ಞಾನದ ನಿಮಿತ್ತವಾಗಿ ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ನಾನು ಕ್ರಿಸ್ತನನ್ನು ಸಂಪಾದಿಸಿ ಕೊಳ್ಳಬೇಕೆಂದು ಆತನ ನಿಮಿತ್ತ ಎಲ್ಲವನ್ನು ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ.