ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.
Cross references
ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.
ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.
ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್ ಎಂದು ಹೇಳಲಿ ಎಂದು ಹೇಳಬೇಕು.
ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.
ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.
ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ.
ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.
ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.
ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.
ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.
ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?
ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.
ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.
ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.
ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.
ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.
ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.
ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.
ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.
ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.
ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.
ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.
ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ
ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.
ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.
ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.
ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.
ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.
ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.
ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.
ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;
ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.
ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.