Home Bibles ಫಿಲಿಪ್ಪಿಯವರಿಗೆ 3:9 · ಕನ್ನಡ ಬೈಬಲ್
ಫಿಲಿಪ್ಪಿಯವರಿಗೆ 3:9 · ಕನ್ನಡ ಬೈಬಲ್

ನಾನು ಕ್ರಿಸ್ತನಲ್ಲಿರುವ ವನಾಗಿ ಕಾಣಿಸಿಕೊಳ್ಳಬೇಕೆಂದು ನ್ಯಾಯಪ್ರಮಾಣ ದಿಂದಾಗುವ ಸ್ವನೀತಿಯನ್ನಾಶ್ರಯಿಸದೆ ಆತನನ್ನು ನಂಬು ವದರಿಂದ ದೊರಕುವಂಥ ಅಂದರೆ ನಂಬಿಕೆಯ ಆಧಾರ ದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ದ್ದೇನೆ.

Cross references

ಆದಿಕಾಂಡ 7:23

ಮನುಷ್ಯರೂ ಪಶು ಗಳೂ ಕ್ರಿಮಿಗಳೂ ಆಕಾಶದ ಪಕ್ಷಿಗಳೂ ಭೂಮಿಯ ಮೇಲಿರುವ ಎಲ್ಲಾ ಜೀವರಾಶಿಗಳೂ ನಾಶವಾದವು. ಅವು ಭೂಮಿಯ ಮೇಲಿಂದ ಅಳಿಸಲ್ಪಟ್ಟವು. ನೋಹನೂ ಅವನ ಸಂಗಡ ನಾವೆಯಲ್ಲಿದ್ದವರೂ ಮಾತ್ರ ಜೀವದಿಂದ ಉಳಿಸಲ್ಪಟ್ಟರು.ಜಲವು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲ ವಾಯಿತು.

ದ್ವಿತೀಯೋಪದೇಶಕಾಂಡ 19:3

ನರಹತ್ಯೆ ಮಾಡುವವ ರೆಲ್ಲರೂ ಅಲ್ಲಿಗೆ ಓಡಿಹೋಗುವ ಹಾಗೆ ನಿನ್ನ ದೇವರಾದ ಕರ್ತನು ನಿನಗೆ ಸ್ವಾಸ್ತ್ಯವಾಗಿ ಕೊಡುವ ದೇಶದ ಮೇರೆ ಯನ್ನು ಮೂರು ಭಾಗಮಾಡಿ ನಿನಗಾಗಿ ಮಾರ್ಗವನ್ನು ಸಿದ್ಧಮಾಡಿಕೊಳ್ಳಬೇಕು.

ದ್ವಿತೀಯೋಪದೇಶಕಾಂಡ 27:26

ಈ ನ್ಯಾಯಪ್ರಮಾಣದ ಮಾತುಗಳನ್ನು ಸ್ಥಾಪಿ ಸದೆ, ಕೈಕೊಳ್ಳದೆ ಇರುವವನಿಗೆ ಶಾಪ. ಜನವೆಲ್ಲಾ ಆಮೆನ್‌ ಎಂದು ಹೇಳಲಿ ಎಂದು ಹೇಳಬೇಕು.

1 ಅರಸುಗಳು 8:46

ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ

2 ದಿನವೃತ್ತಾಂತ 32:25

ಆದರೆ ಹಿಜ್ಕೀ ಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಇದ್ದನು; ಅವನ ಹೃದಯದಲ್ಲಿ ಅಹಂಕಾರ ತುಂಬಿತ್ತು; ಆದದರಿಂದ ಅವನ ಮೇಲೆಯೂ ಯೆಹೂದ ಯೆರೂ ಸಲೇಮಿನ ಮೇಲೆಯೂ ರೌದ್ರ ಉಂಟಾಯಿತು.

2 ದಿನವೃತ್ತಾಂತ 32:31

ಆದರೆ ದೇಶದಲ್ಲಿ ಅದ್ಭುತಕ್ಕೋಸ್ಕರ ವಿಚಾ ರಣೆ ಮಾಡಲು ಬಾಬೆಲಿನ ಅಧಿಪತಿಗಳಿಂದ ತನ್ನ ಬಳಿಗೆ ಕಳುಹಿಸಲ್ಪಟ್ಟ ರಾಯಭಾರಿಗಳ ಕಾರ್ಯದಲ್ಲಿ ಅವನು ತನ್ನ ಹೃದಯದೊಳಗಿದ್ದದ್ದನ್ನೆಲ್ಲಾ ತಿಳುಕೊಳ್ಳುವ ಹಾಗೆ ಅವನನ್ನು ಶೋಧಿಸುವದಕ್ಕೆ ದೇವರು ಅವನನ್ನು ಬಿಟ್ಟುಬಿಟ್ಟನು.

ಯೋಬ 9:28

ನನ್ನ ವ್ಯಥೆಗಳಿಗೆಲ್ಲಾ ದಿಗಿಲು ಪಡು ತ್ತೇನೆ; ನೀನು ನನ್ನನ್ನು ನಿರಪರಾಧಿ ಎಂದು ಎಣಿಸು ವದಿಲ್ಲವೆಂದು ತಿಳಿದಿದ್ದೇನೆ.

ಯೋಬ 10:14

ನಾನು ಪಾಪಮಾಡಿದರೆ ನನ್ನನ್ನು ಗುರುತಿಸಿ ನನ್ನ ಅಕ್ರಮವನ್ನು ಪರಿಹರಿಸುವದಿಲ್ಲ.

ಯೋಬ 15:14

ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?

ಯೋಬ 42:5

ಕಿವಿಯಿಂದ ನಿನ್ನನ್ನು ಕುರಿತು ಕೇಳಿದ್ದೆನು; ಈಗ ನನ್ನ ಕಣ್ಣು ನಿನ್ನನ್ನು ನೋಡಿತು.

ಕೀರ್ತನೆಗಳು 14:3

ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.

ಕೀರ್ತನೆಗಳು 19:12

ತನ್ನ ತಪ್ಪುಗಳನ್ನು ತಿಳಿದುಕೊಳ್ಳುವವನಾರು? ಗುಪ್ತವಾದ ಪಾಪಗಳಿಂದ ನನ್ನನ್ನು ನಿರ್ಮಲಮಾಡು.

ಕೀರ್ತನೆಗಳು 71:15

ನನ್ನ ಬಾಯಿ ದಿನವೆಲ್ಲಾ ನಿನ್ನ ನೀತಿಯನ್ನೂ ರಕ್ಷಣೆ ಯನ್ನೂ ಪ್ರಕಟಿಸುವದು. ಅವುಗಳ ಸಂಖ್ಯೆಗಳು ನನಗೆ ತಿಳಿಯದು.

ಕೀರ್ತನೆಗಳು 130:3

ಕರ್ತನೇ, ನೀನು ಅಕ್ರಮಗಳ ಮೇಲೆ ಕಣ್ಣಿಟ್ಟರೆ ಓ ಕರ್ತನೇ, ಯಾರು ನಿಲ್ಲುವರು?

ಕೀರ್ತನೆಗಳು 143:2

ನಿನ್ನ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡ; ಜೀವಿತರಲ್ಲಿ ಒಬ್ಬನಾದರೂ ನಿನ್ನ ಮುಂದೆ ನೀತಿವಂತನಾಗುವದಿಲ್ಲ.

ಸಭಾಪ್ರಸಂಗಿ 7:20

ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.

ಯೆಶಾಯ 6:5

ಆಗ ನಾನು--ಅಯ್ಯೋ, ನಾನು ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು, ನಾನು ಹೊಲಸು ತುಟಿಯುಳ್ಳವರ ಮಧ್ಯದಲ್ಲಿ ವಾಸಿಸುವವನು; ಆದರೂ ಸೈನ್ಯಗಳ ಕರ್ತನಾದ ಅರಸನನ್ನು ನನ್ನ ಕಣ್ಣುಗಳು ಕಂಡವಲ್ಲಾ ಅಂದೆನು.

ಯೆಶಾಯ 45:24

ಕರ್ತನಲ್ಲಿ ಮಾತ್ರ ನನಗೆ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಆತನ ಬಳಿಗೆ ಬರುವರು; ಆತನ ಮೇಲೆ ಉರಿಗೊಂಡವ ರೆಲ್ಲರೂ ನಾಚಿಕೆಗೆ ಈಡಾಗುವರು ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.ಇಸ್ರಾಯೇಲಿನ ಸಂತಾನದವರೆಲ್ಲರೂ ಕರ್ತನಲ್ಲಿ ನೀತಿವಂತರಾಗಿ ಹೆಚ್ಚಳಪಡುವರು.

ಯೆಶಾಯ 46:13

ನನ್ನ ನೀತಿಯನ್ನು ಹತ್ತಿರಕ್ಕೆ ಬರಮಾಡುವೆನು, ಅದು ಇನ್ನು ದೂರವಾಗಿರದು. ನನ್ನ ರಕ್ಷಣೆಯು ಇನ್ನು ತಡವಾ ಗದು; ನನ್ನ ಮಹಿಮೆಯಾಗಿರುವ ಇಸ್ರಾಯೇಲಿ ಗೋಸ್ಕರ ಚೀಯೋನಿನಲ್ಲಿ ರಕ್ಷಣೆಯನ್ನು ಉಂಟು ಮಾಡುವೆನು.

ಯೆಶಾಯ 53:6

ನಾವೆಲ್ಲರೂ ದಾರಿ ತಪ್ಪಿದ ಕುರಿಗಳಂತಿದ್ದೆವು; ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ಸ್ವಂತ ಮಾರ್ಗಕ್ಕೆ ತಿರುಗಿಕೊಂಡಿದ್ದನು; ಕರ್ತನು ನಮ್ಮ ದುಷ್ಕೃತ್ಯಗಳನ್ನೆಲ್ಲಾ ಆತನ ಮೇಲೆ ಹಾಕಿದನು.

ಯೆಶಾಯ 53:11

ಆತನು ತನ್ನ ಆತ್ಮದ ವೇದನೆಯನ್ನು ಕಂಡು ತೃಪ್ತನಾಗುವನು; ತನ್ನ ತಿಳುವ ಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕ ರಿಗೆ ನೀತಿಯನು ಉಂಟುಮಾಡುವನು; ಯಾಕಂದರೆ ಆತನು ಅವರ ದುಷ್ಕೃತ್ಯಗಳನ್ನು ಹೊತ್ತುಕೊಳ್ಳುವನು.ಆದದರಿಂದ ನಾನು ಆತನಿಗೋಸ್ಕರ ದೊಡ್ಡ ವರೊಂದಿಗೆ ಭಾಗಮಾಡುವೆನು ಆತನು ಬಲಿಷ್ಠರ ಸಂಗಡ ಕೊಳ್ಳೆಯಲ್ಲಿ ಪಾಲುಮಾಡುವನು; ಆತನು ತನ್ನ ಪ್ರಾಣವನ್ನು ಮರಣದ ವರೆಗೆ ಹೊಯ್ದು ಬಿಟ್ಟು ದ್ರೋಹಿಗಳೊಂದಿಗೆ ಎಣಿಸಲ್ಪಟ್ಟನು; ಅನೇಕರ ಪಾಪ ವನ್ನು ಹೊತ್ತುಕೊಂಡು ದ್ರೋಹಿಗಳಿಗೋಸ್ಕರ ವಿಜ್ಞಾ ಪನೆ ಮಾಡಿದನು.

ಯೆಶಾಯ 64:5

ಸಂತೋಷಪಟ್ಟು ನೀತಿಯನ್ನು ಕೈಕೊಳ್ಳುವವನನ್ನೂ ನಿನ್ನ ಮಾರ್ಗಗಳಲ್ಲಿ ನಿನ್ನನ್ನು ಜ್ಞಾಪಕಮಾಡುವವ ನನ್ನೂ ನೀನು ಎದುರುಗೊಳ್ಳುತ್ತೀ; ಇಗೋ, ನೀನು ರೌದ್ರನಾಗಿರುವಿ, ಯಾಕಂದರೆ ನಾವು ರಕ್ಷಿಸಲ್ಪಡದ ಹಾಗೆ ಪಾಪದಲ್ಲಿ ಮುಂದುವರಿದೆವು.

ಯೆರೆಮಿಯ 23:6

ನಾನು ನನ್ನ ಕಣ್ಣುಗಳನ್ನು ಅವರ ಮೇಲೆ ಒಳ್ಳೇದಕ್ಕಾಗಿ ಇಡುವೆನು. ಈ ದೇಶಕ್ಕೆ ಅವರನ್ನು ತಿರಿಗಿ ಬರಮಾಡುವೆನು; ಕೆಡವಿ ಹಾಕದೆ ಅವರನ್ನು ಕಟ್ಟುವೆನು, ಕೀಳದೆ ಅವರನ್ನು ನೆಡುವೆನು.

ಯೆರೆಮಿಯ 33:16

ಆದರೆ ತಿರುಗಿಕೊಂಡು ನನ್ನ ಹೆಸರನ್ನು ಅಪವಿತ್ರ ಮಾಡಿ ನೀವು ಅವರ ಮನಸ್ಸು ಬಂದ ಹಾಗೆ ಬಿಡುಗಡೆಯಾಗಿ ಕಳುಹಿಸಿದ್ದ ನಿಮ್ಮ ನಿಮ್ಮ ದಾಸದಾಸಿ ಯರನ್ನು ಒಬ್ಬೊಬ್ಬನು ತಿರಿಗಿ ಬರಮಾಡಿ ನಿಮಗೆ ದಾಸದಾಸಿಯರಾಗುವ ಹಾಗೆ ವಶಮಾಡಿಕೊಂಡಿ ದ್ದೀರಿ.

ದಾನಿಯೇಲ 9:24

ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ಮತ್ತಾಯ 9:13

ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.

ಲೂಕ 10:25

ಆಗ ಇಗೋ, ಒಬ್ಬಾನೊಬ್ಬ ನ್ಯಾಯಶಾಸ್ತ್ರಿಯು ಎದ್ದು ನಿಂತು ಆತನನ್ನು ಶೋಧಿಸುವದಕ್ಕಾಗಿ-- ಬೋಧಕನೇ, ನಾನು ನಿತ್ಯಜೀವವನ್ನು ಬಾಧ್ಯವಾಗಿ ಹೊಂದುವದಕ್ಕೆ ಏನು ಮಾಡಬೇಕು ಎಂದು ಕೇಳಿದನು.

ಯೋಹಾನ 16:8

ಆತನು ಬಂದಾಗ ಪಾಪ ನೀತಿ ನ್ಯಾಯ ತೀರ್ವಿಕೆಯ ವಿಷಯಗಳಲ್ಲಿಯೂ

ರೋಮಾಪುರದವರಿಗೆ 1:17

ನೀತಿವಂತನು ನಂಬಿಕೆಯಿಂದಲೇ ಜೀವಿಸುವನು ಎಂದು ಬರೆಯಲ್ಪಟ್ಟಂತೆ ದೇವರ ನೀತಿಯು ಅದರಲ್ಲಿ ವಿಶ್ವಾಸದಿಂದ ವಿಶ್ವಾಸಕ್ಕೆ ಪ್ರಕಟವಾಯಿತು.

ರೋಮಾಪುರದವರಿಗೆ 3:19

ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.

ರೋಮಾಪುರದವರಿಗೆ 4:5

ಆದರೆ ಯಾವನು ಪುಣ್ಯಕ್ರಿಯೆಗಳನ್ನು ಮಾಡಿದವನಾಗಿರದೆ ಭಕ್ತಿಹೀನರನ್ನು ನೀತಿವಂತರೆಂದು ನಿರ್ಣಯಿಸುವಾತನಲ್ಲಿ ನಂಬಿಕೆ ಯಿಡುತ್ತಾನೋ ಅವನ ನಂಬಿಕೆಯೇ ನೀತಿ ಎಂದು ಎಣಿಸಲ್ಪಡುವದು.

ರೋಮಾಪುರದವರಿಗೆ 4:13

ಅವನು ಲೋಕಕ್ಕೆ ಬಾಧ್ಯನಾಗುವನೆಂಬ ವಾಗ್ದಾ ನವು ಅಬ್ರಹಾಮನಿಗಾಗಲಿ ಅವನ ಸಂತತಿಯವರಿ ಗಾಗಲಿ ನ್ಯಾಯಪ್ರಮಾಣದಿಂದ ಆದದ್ದಲ್ಲ, ನಂಬಿಕೆ ಯಿಂದಾದ ನೀತಿಯಿಂದಲೇ ಆದದ್ದು.

ರೋಮಾಪುರದವರಿಗೆ 5:21

ಹೀಗೆ ಪಾಪವು ಮರಣವನ್ನುಂಟು ಮಾಡುವದಕ್ಕಾಗಿ ಪ್ರಭುತ್ವವನ್ನು ನಡಿಸಿದ ಹಾಗೆಯೇ ಕೃಪೆಯು ನೀತಿಯ ಮೂಲಕ ನಮ್ಮ ಕರ್ತನಾದ ಯೇಸು ಕ್ರಿಸ್ತನಿಂದಾದ ನಿತ್ಯಜೀವ ವನ್ನುಂಟು ಮಾಡುವದಕ್ಕೆ ಪ್ರಭುತ್ವ ನಡಿಸುವದು.

ರೋಮಾಪುರದವರಿಗೆ 7:5

ನಾವು ಶರೀರದಲ್ಲಿದ್ದಾಗ ಪಾಪಗಳ ಇಚ್ಛೆಗಳು ನ್ಯಾಯಪ್ರಮಾಣದಿಂದಲೇ ಮರಣಕ್ಕೆ ಫಲಫಲಿಸುವ ದಕ್ಕಾಗಿ ನಮ್ಮ ಅಂಗಗಳಲ್ಲಿ ಯತ್ನಿಸುತ್ತಿದ್ದವು.

ರೋಮಾಪುರದವರಿಗೆ 8:1

ಆದದರಿಂದ ಕ್ರಿಸ್ತ ಯೇಸುವಿನಲ್ಲಿ ರುವವರಿಗೆ ಅಪರಾಧ ನಿರ್ಣಯವು ಈಗ ಇಲ್ಲವೇ ಇಲ್ಲ; ಇವರು ಶರೀರಕ್ಕನುಸಾರವಾಗಿ ಅಲ್ಲ, ಆತ್ಮನಿಗನುಸಾರವಾಗಿಯೇ ನಡೆಯುವವರಾಗಿದ್ದಾರೆ.

ರೋಮಾಪುರದವರಿಗೆ 8:3

ನ್ಯಾಯಪ್ರಮಾಣವು ಶರೀರದ ಮೂಲಕ ನಿರ್ಬಲವಾಗಿ ಯಾವದನ್ನು ಮಾಡಲಾರದೆ ಇತ್ತೋ ಅದನ್ನು ದೇವರೇ ಮಾಡಿದನು; ಹೇಗಂದರೆ ಆತನು ತನ್ನ ಸ್ವಂತ ಮಗನನ್ನು ಪಾಪಶರೀರದ ಹೋಲಿಕೆ ಯಲ್ಲಿ ಕಳುಹಿಸಿ ಪಾಪಕ್ಕಾಗಿ ಆ ಶರೀರದಲ್ಲಿಯೇ ಪಾಪವನ್ನು ದಂಡಿಸಿದನು.

ರೋಮಾಪುರದವರಿಗೆ 9:30

ಹಾಗಾದರೆ ನಾವು ಏನು ಹೇಳೋಣ? ನೀತಿ ಯನ್ನು ಹೊಂದುವದಕ್ಕೆ ಪ್ರಯತ್ನಮಾಡದ ಅನ್ಯ ಜನರಿಗೆ ನೀತಿಯು ಅಂದರೆ ನಂಬಿಕೆಯಿಂದುಂಟಾಗುವ ನೀತಿಯು ದೊರಕಿತು.

ರೋಮಾಪುರದವರಿಗೆ 10:1

ಸಹೊದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬದೇ ನನ್ನ ಮನೋಭಿ ಲಾಷೆಯೂ ದೇವರಿಗೆ ನಾನು ಮಾಡುವ ಪ್ರಾರ್ಥನೆ ಯೂ ಆಗಿದೆ;

ರೋಮಾಪುರದವರಿಗೆ 10:10

ಹೃದಯದಿಂದ ನಂಬುವದರ ಮೂಲಕ ನೀತಿಯು ದೊರೆಯುತ್ತದೆ. ಬಾಯಿಂದ ಅರಿಕೆಮಾಡುವದರ ಮೂಲಕ ರಕ್ಷಣೆಯಾಗುತ್ತದೆ.

ರೋಮಾಪುರದವರಿಗೆ 16:7

ನನಗಿಂತ ಮೊದಲು ಕ್ರಿಸ್ತ ನಲ್ಲಿದ್ದು ಅಪೊಸ್ತಲರಲ್ಲಿ ಪ್ರಖ್ಯಾತಿಗೊಂಡ ನನ್ನ ಬಂಧುಗಳೂ ನನ್ನ ಜೊತೆ ಸೆರೆಯವರೂ ಆಗಿರುವ ಅಂದ್ರೋನಿಕನಿಗೂ ಯೂನ್ಯನಿಗೂ ವಂದನೆಗಳು.

Interlinear

Choose Theme