ನಿಜ ಜೊತೆಗಾರನೇ, ನೀನು ಆ ಸ್ತ್ರೀಯರಿಗೆ ಸಹಾಯಕ ನಾಗಿರಬೇಕೆಂದು ನಿನ್ನನ್ನೂ ಕೇಳಿಕೊಳ್ಳುತ್ತೇನೆ. ಅವರು ಕ್ಲೇಮೆನ್ಸ್ ಮುಂತಾದ ನನ್ನ ಜೊತೆಕೆಲಸದವರ ಸಹಿತವಾಗಿ ನನ್ನ ಕೂಡ ಸುವಾರ್ತೆಗೋಸ್ಕರ ಪ್ರಯಾಸ ಪಟ್ಟವರು. ಅವರ ಹೆಸರುಗಳು ಜೀವಗ್ರಂಥದಲ್ಲಿ ಬರೆದವೆ.
Cross references
ಆದಾಗ್ಯೂ ಈಗ ನೀನು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲ ವಾದರೆ ನೀನು ಬರೆದ ನಿನ್ನ ಪುಸ್ತಕದಿಂದ ನನ್ನ ಹೆಸರನ್ನು ಅಳಿಸಿಬಿಡು ಎಂದು ಬೇಡಿಕೊಂಡನು.
ಜೀವದ ಪುಸ್ತಕದೊಳಗಿಂದ ಅವರು ಅಳಿಸಲ್ಪಡಲಿ; ನೀತಿವಂತರ ಸಂಗಡ ಅವರ ಹೆಸರು ಬರೆಯಲ್ಪಡದೆ ಇರಲಿ.
ಹೀಗಿರುವಲ್ಲಿ ಚೀಯೋನಿನಲ್ಲಿ ಬಿಡಲ್ಪಟ್ಟವರು, ಯೆರೂಸಲೇಮಿನಲ್ಲಿ ಉಳಿದವರು, ಹಾಗೂ ಯೆರೂ ಸಲೇಮಿನಲ್ಲಿ ವಾಸಿಸುವವರೊಳಗೆ ಬರೆದಿರುವ ಪ್ರತಿ ಯೊಬ್ಬ ಮನುಷ್ಯನು ಪರಿಶುದ್ಧನೆಂದು ಕರೆಯಲ್ಪಡು ವನು.
ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
ಆ ಕಾಲದಲ್ಲಿ ನಿನ್ನ ಜನರ ಮಕ್ಕಳಿಗೋಸ್ಕರ ನಿಲ್ಲುವ ಮಹಾಪ್ರಧಾನನಾದ ವಿಾಕಾ ಯೇಲನು ಏಳುವನು; ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನ ವರೆಗೂ ಸಂಭವಿಸದಂತ ಸಂಕಟವು ಸಂಭವಿಸುವದು. ಆಗ ನಿನ್ನ ಜನರೊಳಗೆ ಅಂದರೆ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಹೆಸರು ಬರೆಯಲ್ಪಟ್ಟಿದೆಯೋ ಅವರೆಲ್ಲರೂ ಬಿಡುಗಡೆಯಾಗು ವರು.
ಆದಾಗ್ಯೂ ದುರಾತ್ಮಗಳು ನಿಮಗೆ ಅಧೀನವಾದವೆಂದು ಸಂತೋಷಪಡಬೇಡಿರಿ; ಆದರೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿರು ವದರಿಂದಲೇ ಸಂತೋಷಿಸಿರಿ ಅಂದನು.
ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು; ಆ ಹೆಸರಿಗೆ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆ ಗಳನ್ನೂ ದಾನಗಳನ್ನೂ ಬಹಳವಾಗಿ ಮಾಡುತ್ತಿದ್ದಳು.
ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ
ಆದದರಿಂದ ಸಹೋದರರೇ, ನೀವು ನಿಮ್ಮ ದೇಹಗಳನ್ನು ಪರಿಶುದ್ಧವೂ ದೇವರಿಗೆ ಮೆಚ್ಚಿಕೆಯೂ ಆಗಿರುವ ಸಜೀವಯಜ್ಞವಾಗಿ ಸಮರ್ಪಿಸ ಬೇಕೆಂದು ದೇವರ ಕರುಣೆಯಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ಇದೇ ನಿಮ್ಮ ಯೋಗ್ಯವಾದ ಸೇವೆ ಯಾಗಿದೆ.
ನೀವು ಆಕೆಯನ್ನು ಪರಿಶುದ್ಧರಿಗೆ ತಕ್ಕಂತೆ ಕರ್ತನಲ್ಲಿ ಅಂಗೀಕರಿಸಿ ಆಕೆಯ ಕೆಲಸದಲ್ಲಿ ಆಕೆಗೆ ಅವಶ್ಯವಾದ ಸಹಾಯವನ್ನು ಮಾಡಿರಿ; ಆಕೆಯು ನನಗೂ ಅನೇಕರಿಗೂ ಸಹಾಯ ಮಾಡಿದವಳಾಗಿದ್ದಾಳೆ.
ಕ್ರಿಸ್ತನಲ್ಲಿ ನಮ್ಮ ಸಹಾಯಕನಾದ ಉರ್ಬಾನನಿಗೂ ನನ್ನ ಪ್ರಿಯನಾದ ಸ್ತಾಖುನಿಗೂ ವಂದನೆಗಳು.
ಕರ್ತನಲ್ಲಿ ಪ್ರಯಾಸಪ ಡುವ ತ್ರುಫೈನಳಿಗೂ ತ್ರುಫೋಸಳಿಗೂ ವಂದನೆಗಳು. ಕರ್ತನಲ್ಲಿ ಹೆಚ್ಚಾಗಿ ಪ್ರಯಾಸಪಟ್ಟಿರುವ ಪ್ರಿಯ ಪೆರ್ಸೀ ಸಳಿಗೆ ವಂದನೆ.
ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿ ದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ಒಂದೇ ಆತ್ಮದಲ್ಲಿ ದೃಢ ವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೊಸ್ಕರ ಐಕ್ಯಮತ್ಯದಿಂದಲೂ ಒಂದೇ ಮನಸ್ಸಿನಿಂದಲೂ ಹೆ
ಅವನ ಹಾಗೆ ನಿಮ್ಮ ಕಾರ್ಯಗಳನ್ನು ಕುರಿತು ಸ್ವಾಭಾವಿಕವಾಗಿ ಚಿಂತಿಸುವವರು ನನ್ನ ಬಳಿಯಲ್ಲಿ ಬೇರೆ ಯಾರೂ ಇಲ್ಲ.
ಕರ್ತನಲ್ಲಿ ಒಂದೇ ಮನಸ್ಸುಳ್ಳವರಾಗಿರಬೇಕೆಂದು ಯುವೊದ್ಯಳನ್ನೂ ಸಂತುಕೆಯನ್ನೂ ಬೇಡಿಕೊಳ್ಳುತ್ತೇನೆ.
ಇದನ್ನು ನೀವು ನಮ್ಮ ಪ್ರಿಯ ಜೊತೆಯ ದಾಸನಾದ ಎಪಫ್ರನಿಂದ ಕಲಿತುಕೊಂಡಿರಿ; ಅವನು ನಿಮಗೋಸ್ಕರ ಕ್ರಿಸ್ತನ ನಂಬಿಗಸ್ತನಾದ ಸೇವಕನು.
ವಯಸ್ಸಿನಲ್ಲಿ ಅರುವತ್ತಕ್ಕೆ ಕಡಿಮೆಯಿದ್ದ ವಿಧವೆಯರನ್ನು ವಿಧವೆಯರ ಪಟ್ಟಿಯಲ್ಲಿ ಸೇರಿಸಬೇಡ. ಅಂಥವಳಾ ದರೂ ಒಬ್ಬ ಗಂಡನಿಗೆ ಮಾತ್ರ ಹೆಂಡತಿಯಾಗಿದ್ದವಳೂ
ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ
ಜಯಹೊಂದುವ ಇವನೇ ಬಿಳೀ ವಸ್ತ್ರದಿಂದ ಹೊದಿಸಲ್ಪಡುವನು; ಜೀವದ ಪುಸ್ತಕದಿಂದ ನಾನು ಅವನ ಹೆಸರನ್ನು ಅಳಿಸಿ ಬಿಡುವದೇ ಇಲ್ಲ, ಆದರೆ ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಅವನ ಹೆಸರನ್ನು ಒಪ್ಪಿಕೊಳ್ಳುವೆನು.
ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಯಾರಾರ ಹೆಸರುಗಳು ವಧಿಸಲ್ಪಟ್ಟ ಕುರಿಮರಿಯಾದಾ ತನ ಜೀವಗ್ರಂಥದಲ್ಲಿ ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಮೃಗವನ್ನು ಆರಾಧಿಸುವರು.
ನೀನು ಕಂಡ ಈ ಮೃಗವು ಮೊದಲು ಇತ್ತು. ಈಗ ಇಲ್ಲ, ಅದು ತಳವಿಲ್ಲದ ತಗ್ಗಿನಿಂದ ಏರಿ ಬಂದು ನಾಶನಕ್ಕೆ ಹೋಗುವದು. ಭೂಮಿಯಲ್ಲಿ ವಾಸಿಸುವವರೊಳಗೆ ಯಾರಾರ ಹೆಸರು ಗಳು ಜಗತ್ತಿಗೆ ಅಸ್ತಿವಾರ ಹಾಕಿದಂದಿನಿಂದ ಜೀವಗ್ರಂಥ ದಲ್ಲಿ ಬರೆದಿರುವದಿಲ್ಲವೋ ಅವರು ಮೊದಲು ಇದ್ದು ಈಗ ಇಲ್ಲದ ಇನ್ನು
ಇದಲ್ಲದೆ ಸತ್ತವರಾದ ಚಿಕ್ಕವರೂ ದೊಡ್ಡವರೂ ದೇವರ ಮುಂದೆ ನಿಂತಿರುವದನ್ನು ನಾನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಜೀವಗ್ರಂಥವೆಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ
ಯಾವನ ಹೆಸರು ಜೀವಗ್ರಂಥದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.
ಅದರಲ್ಲಿ ಹೊಲೆ ಮಾಡುವಂಥದ್ದು ಯಾವದೂ ಸೇರುವದಿಲ್ಲ. ಅಸಹ್ಯವಾದದ್ದನ್ನೂ ಸುಳ್ಳಾದದ್ದನ್ನೂ ನಡಿಸುವವನು ಅಲ್ಲಿ ಸೇರುವದಿಲ್ಲ. ಆದರೆ ಕುರಿಮರಿಯಾದಾತನ ಜೀವಗ್ರಂಥದಲ್ಲಿ ಬರೆಯಲ್ಪಟ್ಟವರು ಮಾತ್ರ ಸೇರುವರು.