ಆಗ ಎಲ್ಲಾ ಗ್ರಹಿಕೆಯನ್ನೂ ವಿಾರುವ ದೇವರ ಶಾಂತಿಯು ನಿಮ್ಮ ಹೃದಯಗಳನ್ನೂ ಮನಸ್ಸು ಗಳನ್ನೂ ಕ್ರಿಸ್ತ ಯೇಸುವಿನ ಮೂಲಕ ಕಾಯುವದು.
Cross references
ಕರ್ತನು ತನ್ನ ಮುಖವನ್ನು ನಿನ್ನ ಕಡೆಗೆ ಎತ್ತಿ ನಿನಗೆ ಸಮಾಧಾನ ಅನುಗ್ರಹಿಸಲಿ.ಅವರು ನನ್ನ ಹೆಸರನ್ನು ಇಸ್ರಾಯೇಲ್ ಮಕ್ಕಳ ಮೇಲೆ ಇಡಬೇಕು. ನಾನೇ ಅವರನ್ನು ಆಶೀರ್ವದಿಸುವೆನು.
ಇದಲ್ಲದೆ ಅವನು ಅವರಿಗೆ--ನೀವು ಹೋಗಿ ಕೊಬ್ಬಿದ್ದನ್ನು ತಿಂದು ಸಿಹಿ ಯಾದದ್ದನ್ನು ಕುಡಿದು ಯಾರಿಗೆ ಸಿದ್ಧಮಾಡಿದ್ದು ಏನೂ ಇಲ್ಲವೋ ಅವರಿಗೆ ಭಾಗಗಳನ್ನು ಕಳುಹಿಸಿ ಕೊಡಿರಿ. ಯಾಕಂದರೆ ಈ ದಿನವು ನಮ್ಮ ಕರ್ತನಿಗೆ ಪರಿಶುದ್ಧ ವಾಗಿದೆ. ಕರ್ತನ ಆನಂದವು ನಿಮ್ಮ ಬಲವಾಗಿರು ವದರಿಂದ ನೀವು ವ್ಯಥೆಪಡಬೇಡಿರಿ.
ಆತನಿಗೆ ಪರಿಚಿತನಾಗಿ ಸಮಾಧಾನದಿಂದಿರು; ಇದರಿಂದ ನಿನಗೆ ಮೇಲು ಬರುವದು.
ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
ಕರ್ತನು ತನ್ನ ಜನರಿಗೆ ಬಲವನ್ನು ಕೊಡುವನು; ಕರ್ತನು ತನ್ನ ಜನರನ್ನು ಸಮಾಧಾನ ದಿಂದ ಆಶೀರ್ವದಿಸುವನು.
ಕರ್ತನಾದ ದೇವರು ಏನು ಹೇಳುತ್ತಾನೋ ಅದನ್ನು ಕೇಳುವೆನು; ನಿಶ್ಚಯವಾಗಿ ಜನರಿಗೂ ತನ್ನ ಪರಿಶುದ್ಧ ರಿಗೂ ಸಮಾಧಾನದ ಮಾತು ಹೇಳುವನು; ಇನ್ನು ಬುದ್ಧಿಹೀನತ್ವಕ್ಕೆ ಅವರು ತಿರುಗಿಕೊಳ್ಳದೆ ಇರಲಿ.
ವಿವೇಕವು ನಿನ್ನನ್ನು ಭದ್ರವಾಗಿ ಕಾಯುತ್ತದೆ; ತಿಳುವಳಿಕೆಯು ನಿನ್ನನ್ನು ಕಾಪಾಡುವದು;
ಅವುಗಳನ್ನು ತ್ಯಜಿಸ ದಿದ್ದರೆ ಅವು ನಿನ್ನನ್ನು ಕಾಯುವವು, ಅವುಗಳನ್ನು ಪ್ರೀತಿಸಿದರೆ ಅವು ನಿನ್ನನ್ನು ಕಾಪಾಡುವವು.
ನೀನು ಹೋಗು ವಾಗ ಅದು ನಿನ್ನನ್ನು ನಡಿಸುವದು; ಮಲಗುವಾಗ ನಿನ್ನನ್ನು ಕಾಯುವದು; ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು.
ದೃಢಮನಸ್ಸುಳ್ಳವನನ್ನು ಪೂರ್ಣ ಸಮಾಧಾನದಲ್ಲಿ ನೆಲೆಗೊಳಿಸಿ ಕಾಯುವಿ. ಅವನಿಗೆ ನಿನ್ನಲ್ಲಿ ಭರವಸವಿದೆ.
ಕರ್ತನೇ, ನಮಗೆ ಸಮಾಧಾನ ವನ್ನು ವಿಧಿಸುವಿ. ನೀನೇ ನಮ್ಮ ಕ್ರಿಯೆಗಳನ್ನೆಲ್ಲಾ ನಮಗೋಸ್ಕರ ನಡೆಸಿದ್ದೀ.
ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.
ಓ, ನೀನು ನನ್ನ ಆಜ್ಞೆಗಳಿಗೆ ಕಿವಿಗೊಟ್ಟಿದ್ದರೆ ಚೆನ್ನಾಗಿತ್ತು! ಆಗ ನಿನ್ನ ಸಮಾಧಾನವು ನದಿಯಂತೆಯೂ ನಿನ್ನ ನೀತಿಯು ಸಮುದ್ರದ ಅಲೆಗಳಂತೆಯೂ ಇರುತ್ತಿದ್ದವು;
ದುಷ್ಟರಿಗೆ ಸಮಾಧಾನವೇ ಇಲ್ಲ ಎಂದು ಕರ್ತನು ನುಡಿಯುತ್ತಾನೆ.
ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
ನಾನು ತುಟಿಗಳಿಗೆ ಫಲವನ್ನುಂಟು ಮಾಡುವ ವನಾಗಿ ಅವನಿಗೆ ದೂರವಾದವನಿಗೂ ಅವನಿಗೆ ಸವಿಾಪವಾದವನಿಗೂ ಸಮಾಧಾನವಿರಲಿ. ನಾನು ಅವನನ್ನು ಸ್ವಸ್ಥಮಾಡುವೆ ನೆಂದು ಕರ್ತನು ಹೇಳು ತ್ತಾನೆ.
ಆಗ ಪ್ರವಾದಿಯಾದ ಯೆರೆವಿಾಯನು ಈ ವಾಕ್ಯಗಳ ನ್ನೆಲ್ಲಾ ಯೆರೂಸಲೇಮಿನಲ್ಲಿ ಯೆಹೂದ ಅರಸನಾದ ಚಿದ್ಕೀಯನಿಗೆ ಹೇಳಿದನು.
ಕತ್ತಲೆಯಲ್ಲಿಯೂ ಮರಣದ ನೆರಳಿನಲ್ಲಿಯೂ ಕೂತವರಿಗೆ ಬೆಳಕನ್ನು ಕೊಡುವದಕ್ಕೂ ನಮ್ಮ ಪಾದಗಳನ್ನು ಸಮಾಧಾನದ ಮಾರ್ಗದಲ್ಲಿ ನಡಿಸುವದಕ್ಕೂ ಆಗುವದು ಎಂದು ಹೇಳಿದನು.ಆ ಬಾಲಕನು ಬೆಳೆದು ಆತ್ಮದಲ್ಲಿ ಬಲಗೊಂಡನು. ತನ್ನನ್ನು ಇಸ್ರಾಯೇಲಿಗೆ ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯದಲ್ಲಿದ್ದನು.
ಮಹೋನ್ನತ ದಲ್ಲಿರುವ ದೇವರಿಗೆ ಮಹಿಮೆ, ಭೂಮಿಯ ಮೇಲೆ ಸಮಾಧಾನ, ಮನುಷ್ಯರ ಕಡೆಗೆ ದಯೆ ಎಂದು ಹೇಳಿದರು.
ನಾನು ನಿಮಗೆ ಸಮಾಧಾನವನ್ನು ಬಿಟ್ಟು ಹೋಗುತ್ತೇನೆ, ನನ್ನ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ; ಲೋಕವು ಕೊಡುವ ರೀತಿಯಲ್ಲಿ ನಾನು ನಿಮಗೆ ಕೊಡುವದಿಲ್ಲ, ನಿಮ್ಮ ಹೃದಯವು ಕಳವಳಗೊಳ್ಳ ದಿರಲಿ ಇಲ್ಲವೆ ಅಂಜದಿರಲಿ.
ನನ್ನಲ್ಲಿ ನಿಮಗೆ ಸಮಾಧಾನವು ಉಂಟಾಗುವಂತೆ ಇವುಗಳನ್ನು ನಾನು ನಿಮಗೆ ಹೇಳಿದ್ದೇನೆ, ಲೋಕದಲ್ಲಿ ನಿಮಗೆ ಸಂಕಟ ಇರುವದು; ಆದರೆ ಧೈರ್ಯವಾಗಿರ್ರಿ; ನಾನು ಲೋಕ ವನ್ನು ಜಯಿಸಿದ್ದೇನೆ ಅಂದನು.
ಇದಲ್ಲದೆ ದೇವರಿಗೆ ಪ್ರಿಯ ರಾಗಿದ್ದು ಪರಿಶುದ್ಧರಾಗುವದಕ್ಕೆ ಕರೆಯಲ್ಪಟ್ಟ ರೋಮ್ ನಲ್ಲಿರುವವರೆಲ್ಲರಿಗೆ ನಮ್ಮ ತಂದೆಯಾದ ದೇವ ರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಸಮಾಧಾನವೂ ಉಂಟಾಗಲಿ.
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ದೇವರೊಂದಿಗೆ ಸಮಾಧಾನ ಉಂಟಾಗಿದೆ.
ಶರೀರಕ್ಕನುಸಾರವಾದ ಮನಸ್ಸು ಮರಣ: ಆತ್ಮೀಕವಾದ ಮನಸ್ಸುಜೀವವೂ ಸಮಾಧಾನವೂ ಆಗಿದೆ.
ಯಾಕಂದರೆ ತಿನ್ನುವದೂ ಕುಡಿಯುವದೂ ದೇವರ ರಾಜ್ಯವಲ್ಲ; ಆದರೆ ನೀತಿಯೂ ಸಮಾಧಾನವೂ ಪವಿತ್ರಾತ್ಮನಲ್ಲಿರುವ ಆನಂದವೂ ಆಗಿದೆ.
ನಿರೀಕ್ಷೆಗೆ ಆಧಾರನಾದ ದೇವರು ಪವಿತ್ರಾತ್ಮನ ಬಲದಿಂದ ನೀವು ನಿರೀಕ್ಷೆಯಲ್ಲಿ ಅಭಿವೃದ್ಧಿ ಹೊಂದು ವಂತೆ ನಂಬಿಕೆಯಿಂದುಂಟಾದ ಸಂತೋಷ ಸಮಾಧಾನಗಳಿಂದ ನಿಮ್ಮನ್ನು ತುಂಬಿಸಲಿ.
ಕಡೇ ಮಾತೇನಂದರೆ ಸಹೋದರರೇ, ನಿಮಗೆ ಶುಭವಾಗಲಿ. ಸಂಪೂರ್ಣರಾಗಿರ್ರಿ; ಆದರಣೆ ಹೊಂದಿದವರಾಗಿರ್ರಿ, ಒಂದೇ ಮನಸ್ಸುಳ್ಳವರಾಗಿರ್ರಿ, ಸಮಾಧಾನದಲ್ಲಿ ಜೀವಿಸಿರಿ; ಆಗ ಪ್ರೀತಿಯುಳ್ಳ ಶಾಂತಿಯ ದೇವರು ನಿಮ್ಮ ಸಂಗಡ ಇರುವನು.
ಆದರೆ ಆತ್ಮನ ಫಲವೇನಂದರೆ--ಪ್ರೀತಿ ಸಂತೋಷ ಸಮಾಧಾನ ದೀರ್ಘಶಾಂತಿ ವಿನಯ ಸದ್ಗುಣ ನಂಬಿಕೆ
ಜ್ಞಾನಕ್ಕೆ ವಿಾರುವ ಕ್ರಿಸ್ತನ ಪ್ರೀತಿ ಯನ್ನು ತಿಳಿದುಕೊಂಡು ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆಯೂ ನಿಮಗೆ ದಯ ಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.
ನಮ್ಮ ತಂದೆ ಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತ ನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಆಗ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು.
ದೇವರ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ; ಅದಕ್ಕಾಗಿಯೇ ನೀವು ಸಹ ಒಂದೇ ದೇಹವಾಗಿರುವಂತೆ ಕರೆಯಲ್ಪಟ್ಟಿದ್ದೀರಿ; ಇದಲ್ಲದೆ ನೀವು ಕೃತಜ್ಞತೆಯುಳ್ಳವರಾಗಿರ್ರಿ.
ಶಾಂತಿದಾಯಕನಾದ ಕರ್ತನು ತಾನೇ ಸದಾಕಾಲ ದಲ್ಲಿಯೂ ಸಕಲವಿಧದಲ್ಲಿಯೂ ನಿಮಗೆ ಶಾಂತಿಯನ್ನು ದಯಪಾಲಿಸಲಿ. ಕರ್ತನು ನಿಮ್ಮೆಲ್ಲರೊಂದಿಗೆ ಇರಲಿ.
ಶಾಶ್ವತವಾದ ಒಡಂಬಡಿಕೆಯ ರಕ್ತದ ಮೂಲಕ ಕುರಿ ಹಿಂಡಿಗೆ ದೊಡ್ಡ ಕುರುಬನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರ ಮಾಡಿದ ಶಾಂತಿದಾಯಕನಾದ ದೇವರು
ಲಯ ಕಳಂಕ ಕ್ಷಯಗಳಿಲ್ಲದ ಬಾಧ್ಯತೆಗೂ ನಮ್ಮನ್ನು ತಿರಿಗಿ ಹುಟ್ಟಿಸಿದ್ದಾನೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.
ಯೇಸು ಕ್ರಿಸ್ತನ ದಾಸನೂ ಯಾಕೋಬನ ಸಹೋ ದರನೂ ಆಗಿರುವ ಯೂದನು ತಂದೆಯಾದ ದೇವ ರಿಂದ ಪರಿಶುದ್ಧರಾದವರಿಗೂ ಯೇಸು ಕ್ರಿಸ್ತನಲ್ಲಿ ಕಾಪಾಡಲ್ಪಟ್ಟವರಿಗೂ ಕರೆಯಲ್ಪಟ್ಟವರಿಗೂ--
ಯೋಹಾನನು ಆಸ್ಯದಲ್ಲಿರುವ ಏಳು ಸಭೆಗ ಳಿಗೆ--ಇರುವಾತನೂ ಇದ್ದಾತನೂ ಬರುವಾತನೂ ಆಗಿರುವಾತನಿಂದಲೂ ಆತನ ಸಿಂಹಾಸನದ ಮುಂದಿ ರುವ ಏಳು ಆತ್ಮಗಳಿಂದಲೂ ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದು ಬಂದಾತನೂ ಭೂರಾಜರ ಪ್ರಭುವೂ ಆಗಿರುವ ಯೇಸು ಕ್ರಿಸ್ತ ನಿಂದ
ಆತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನೂ ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವನ್ನು ತಿನ್ನುವದಕ್ಕೆ ನಾನು ಕೊಡು ವೆನು; ಇದಲ್ಲದೆ ಅವನಿಗೆ ಹೊಸ ಹೆಸರು ಬರೆದಿರುವ ಬಿಳೀ ಕಲ್ಲನ್ನು ಕೊಡುವೆನು ಅದನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿ