ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
Cross references
ಮೋಶೆ ಆರೋನರು ಫರೋಹನ ಬಳಿಗೆ ಬಂದು ಅವನಿಗೆ--ಇಬ್ರಿಯರ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನನ್ನ ಸನ್ನಿಧಿಯಲ್ಲಿ ತಗ್ಗಿಸಿಕೊಳ್ಳದೆ ಇರುವದು ಎಲ್ಲಿಯವರೆಗೇ? ನನ್ನನ್ನು ಸೇವಿಸುವಂತೆ ನನ್ನ ಜನರನ್ನು ಹೋಗಗೊಡಿಸು.
ಆಗ ಕರ್ತನು ಮೋಶೆಗೆ--ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ ನ್ಯಾಯಪ್ರಮಾಣಗಳನ್ನೂ ಕೈಕೊಳ್ಳದೆ ನಿರಾಕರಿಸುವಿರಿ ಅಂದನು.
ಈ ಕೆಟ್ಟ ಸಭೆಯು ನನಗೆ ವಿರೋಧವಾಗಿ ಗುಣುಗುಟ್ಟುವದನ್ನು ನಾನು ಎಷ್ಟುಕಾಲ ಸಹಿಸಲಿ? ಇಸ್ರಾಯೇಲ್ ಮಕ್ಕಳು ನನಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ನಾನು ಕೇಳಿದ್ದೇನೆ.
ಯೋಬನಂತೆ ಹಾಸ್ಯವನ್ನು ನೀರಿನಂತೆ ಕುಡಿಯುವ ಪುರುಷನು ಯಾರು?
ಭಕ್ತಿಹೀನರ ಆಲೋಚನೆಯಂತೆ ನಡೆಯದೆ ಪಾಪಿಗಳ ಮಾರ್ಗದಲ್ಲಿ ನಿಲ್ಲದೆ ಕುಚೋದ್ಯಗಾರರು ಕೂತುಕೊಳ್ಳುವಲ್ಲಿ ಕೂತುಕೊಳ್ಳದೆ
ಜನರಲ್ಲಿ ಪಶುಪ್ರಾಯದವರೇ, ನೀವು ಗ್ರಹಿಸಿರಿ; ಹುಚ್ಚರೇ, ಯಾವಾಗ ಬುದ್ಧಿವಂತರಾಗುವಿರಿ?
ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
ಅವರು ತಿಳುವಳಿಕೆ ಯನ್ನು ಹಗೆಮಾಡಿ ಕರ್ತನ ಭಯವನ್ನು ಆರಿಸಿಕೊ ಳ್ಳದೆ ಇದ್ದದರಿಂದಲೂ
ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
ಓ ಸೋಮಾರಿಯೇ, ಎಷ್ಟು ಹೊತ್ತು ನೀನು ನಿದ್ರೆಮಾಡುವದು? ನಿನ್ನ ನಿದ್ರೆಯಿಂದ ಯಾವಾ ಗ ಎಚ್ಚರಗೊಳ್ಳುವಿ?
ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
ಯಾವನು ಮೂಢನೋ ಅವನು ಇಲ್ಲಿಗೆ ತಿರುಗಲಿ; ವಿವೇಕವಿಲ್ಲದವನಿಗೆ ಆಕೆಯು--
ಹಾಸ್ಯ ಮಾಡುವವನು ಜ್ಞಾನವನ್ನು ಹುಡು ಕಿದರೂ ಅದನ್ನು ಕಂಡುಕೊಳ್ಳುವದಿಲ್ಲ; ವಿವೇಚಿಸುವವನಿಗೆ ತಿಳುವಳಿಕೆಯು ಸುಲಭವಾಗಿದೆ.
ತನ್ನನ್ನು ಗದರಿಸುವವನು ಪರಿಹಾಸ್ಯಕರನನ್ನು ಪ್ರೀತಿ ಮಾಡುವದಿಲ್ಲ, ಇಲ್ಲವೆ ಅವನು ಜ್ಞಾನಿಗಳ ಕಡೆಗೆ ಹೋಗುವದು ಇಲ್ಲ.
ಪರಿಹಾಸ್ಯಗಾರರಿಗೆ ನ್ಯಾಯತೀರ್ಪುಗಳೂ ಬುದ್ಧಿ ಹೀನರ ಬೆನ್ನಿಗೆ ಪೆಟ್ಟುಗಳೂ ಸಿದ್ಧವಾಗಿವೆ.
ಪರಿಹಾಸ್ಯಕರನ್ನು ಶಿಕ್ಷಿಸಿ ದರೆ ಬುದ್ಧಿಹೀನರು ಜ್ಞಾನವಂತರಾಗುವರು; ಜ್ಞಾನಿಯು ಶಿಕ್ಷಣ ಹೊಂದಿದರೆ ಅವನು ತಿಳುವಳಿಕೆಯನ್ನು ಹೊಂದು ತ್ತಾನೆ.
ನೀವು ಹೋಗಿ--ನಾನು ಯಜ್ಞವನ್ನಲ್ಲ; ಕರುಣೆಯನ್ನೇ ಅಪೇಕ್ಷಿಸುತ್ತೇನೆ ಎಂಬದರ ಅರ್ಥವನ್ನು ಕಲಿಯಿರಿ; ಯಾಕಂದರೆ ನಾನು ನೀತಿ ವಂತರನ್ನಲ್ಲ, ಪಾಪಿಗಳನ್ನು ಮಾನಸಾಂತರಪಡು ವದಕ್ಕಾಗಿ ಕರೆಯಲು ಬಂದೆನು ಎಂದು ಹೇಳಿದನು.
ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತು ಕೊಳ್ಳಿರಿ; ಯಾಕಂದರೆ ನಾನು ಸಾತ್ವಿಕನೂ ದೀನ ಮನಸ್ಸುಳ್ಳವನೂ ಆಗಿರುವದರಿಂದ ನೀವು ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.ಯಾಕಂದರೆ ನನ್ನ ನೊಗವು ಮೃದುವಾದದ್ದೂ ನನ್ನ ಹೊರೆಯು ಹಗುರವಾದದ್ದೂ ಆಗಿದೆ ಎಂದು ಹೇಳಿದನು.
ಆಗ ಯೇಸು ಪ್ರತ್ಯುತ್ತರ ವಾಗಿ--ನಂಬಿಕೆಯಿಲ್ಲದ ಓ ಮೂರ್ಖ ಸಂತತಿಯೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ತಕ್ಕೊಂಡು ಬನ್ನಿರಿ ಎಂದು ಹೇಳಿದನು.
ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ
ನೀನು ಈ ನಿನ್ನ ದಿನದಲ್ಲಿಯಾದರೂ ನಿನ್ನ ಸಮಾ ಧಾನಕ್ಕೆ ಸಂಬಂಧಪಟ್ಟವುಗಳನ್ನು ತಿಳಿದುಕೊಳ್ಳಬೇಕಾ ಗಿತ್ತು; ಆದರೆ ಈಗ ಅವುಗಳು ನಿನ್ನ ಕಣ್ಣುಗಳಿಗೆ ಮರೆಯಾಗಿವೆ.
ಕೆಟ್ಟದ್ದನ್ನು ಮಾಡುವ ಪ್ರತಿ ಯೊಬ್ಬನು ತನ್ನ ಕೃತ್ಯಗಳು ಖಂಡಿಸಲ್ಪಟ್ಟಾವೆಂದು ಬೆಳಕನ್ನು ಹಗೆಮಾಡುತ್ತಾನೆ ಮತ್ತು ಬೆಳಕಿಗೆ ಬರುವದಿಲ್ಲ.
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.