ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರಕೊಡೆನು. ಅವರು ಆತುರದಿಂದ ನನ್ನನ್ನು ಹುಡು ಕಿದರೂ ಕಂಡುಕೊಳ್ಳುವದಿಲ್ಲ.
Cross references
ಆಗ ಕರ್ತನು--ನನ್ನ ಆತ್ಮನು ಮನುಷ್ಯನ ಸಂಗಡ ಯಾವಾಗಲೂ ವಿವಾದಮಾಡುವದಿಲ್ಲ; ಅವನು ಮನುಷ್ಯನಷ್ಟೆ. ಆದರೂ ಅವನ ದಿನಗಳು ಇನ್ನು ನೂರ ಇಪ್ಪತ್ತು ವರುಷಗಳಾಗಿರುವವು ಅಂದನು.
ಆಗ ನೀವು ತಿರುಗಿಕೊಂಡು ಕರ್ತನ ಮುಂದೆ ಗೋಳಾಡಿದಿರಿ; ಆದರೆ ಕರ್ತನು ನಿಮ್ಮ ಧ್ವನಿಯನ್ನು ಕೇಳಲಿಲ್ಲ, ನಿಮಗೆ ಕಿವಿಗೊಡಲಿಲ್ಲ.ಆ ಮೇಲೆ ನೀವು ಕಾದೇಶಿನಲ್ಲಿ ವಾಸವಾಗಿದ್ದ ಕಾಲದ ಪ್ರಕಾರ ಬಹಳ ದಿವಸ ವಾಸವಾಗಿದ್ದಿರಿ.
ನೀವು ನಿಮಗೆ ಆದುಕೊಂಡ ನಿಮ್ಮ ಅರಸನ ನಿಮಿತ್ತ ಆ ದಿವಸದಲ್ಲಿ ಕೂಗುವಿರಿ; ಆದರೆ ಆ ದಿವಸದಲ್ಲಿ ಕರ್ತನು ನಿಮಗೆ ಕಿವಿಗೊಡುವದಿಲ್ಲ.
ಅವನ ಮೇಲೆ ಇಕ್ಕಟ್ಟು ಬಂದರೆ ಅವನ ಮೊರೆಯನ್ನು ದೇವರು ಕೇಳುವನೋ?
ಅಲ್ಲಿ ಅವರು ಕೆಟ್ಟವರ ಗರ್ವದ ನಿಮಿತ್ತ ಮೊರೆಯಿಡಲು ಉತ್ತರ ಕೊಡುವದಿಲ್ಲ.
ಅವರು ಮೊರೆಯಿಟ್ಟರು, ಆದರೆ ರಕ್ಷಿಸುವವರು ಯಾರೂ ಇದ್ದಿಲ್ಲ. ಕರ್ತನಿಗೂ ಮೊರೆ ಇಟ್ಟರು, ಆದರೆ ಅವರಿಗೆ ಆತನು ಉತ್ತರ ಕೊಡ ಲಿಲ್ಲ.
ಗಾಳಿಯ ಮುಂದಿನ ಧೂಳಿನಹಾಗೆ ಅವ ರನ್ನು ಹೊಡೆದು ಪುಡಿಪುಡಿ ಮಾಡಿದನು; ಬೀದಿಯ ಕೆಸರಿನಹಾಗೆ ಅವರನ್ನು ಹೊರಗೆ ಚೆಲ್ಲಿಬಿಟ್ಟನು.
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ಅದನ್ನು ಹಾಳು ಮಾಡಿದ್ದಾರೆ; ಅದು ಹಾಳಾ ಗಿಯೇ ನನ್ನ ಕಡೆಗೆ ದುಃಖಿಸುತ್ತದೆ, ದೇಶವೆಲ್ಲಾ ಹಾಳಾ ಯಿತು. ಆದಾಗ್ಯೂ ಒಬ್ಬನಾದರೂ ಅದನ್ನು ಮನಸ್ಸಿಗೆ ತರುವದಿಲ್ಲ.
ಕಬ್ಬಿ ಣವು ಉತ್ತರದ ಕಬ್ಬಿಣವನ್ನೂ ಉಕ್ಕನ್ನೂ ಮುರಿಯ ಬಲ್ಲದೇ?
ಆದದರಿಂದ ನಾನು ಸಹ ಉಗ್ರ ದಿಂದಲೇ ಇರುವೆನು. ನನ್ನ ಕಣ್ಣು ಕನಿಕರಿಸುವದೂ ಇಲ್ಲ, ನಾನು ಕಟಾಕ್ಷಿಸುವದೂ ಇಲ್ಲ, ಅವರು ನನ್ನ ಕಿವಿಗಳಲ್ಲಿ ಮಹಾಧ್ವನಿಯಿಂದ ಕಿರಿಚಿದರೂ ನಾನು ಕೇಳಿಸಿಕೊಳ್ಳುವದೂ ಇಲ್ಲ.
ಅವರು ಕರ್ತನನ್ನು ಹುಡುಕುವದಕ್ಕೆ ಅವರ ಮಂದೆಗಳೊಂದಿಗೂ ಹಿಂಡುಗಳೊಂದಿಗೂ ಹೋಗುವರು. ಆದರೆ ಆತನು ಅವರಿಂದ ತನ್ನನ್ನು ಹಿಂದೆಗೆದುಕೊಂಡ ಕಾರಣ ಅವರು ಆತನನ್ನು ಕಾಣುವದೇ ಇಲ್ಲ.
ತಾವು ತಮ್ಮ ಅಪರಾಧವನ್ನು ಅರಿಕೆಮಾಡಿ ನನ್ನ ಮುಖವನ್ನು ಹುಡುಕುವ ವರೆಗೂ ನಾನು ತಿರುಗಿ ಕೊಂಡು ನನ್ನ ಸ್ಥಳಕ್ಕೆ ಹೋಗುವೆನು, ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.
ಆಗ ಅವರು ಸಮುದ್ರದಿಂದ ಸಮುದ್ರಕ್ಕೂ ಉತ್ತರ ದಿಂದ ಪೂರ್ವಕ್ಕೂ ಅಲೆದು ಕರ್ತನ ವಾಕ್ಯವನ್ನು ಹುಡುಕುವದಕ್ಕೆ ಅತ್ತಿತ್ತ ಓಡಾಡಿ ಅದನ್ನು ಕಾಣದೆ ಹೋಗುವರು.
ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.
ಆಗ ಆದದ್ದೇ ನಂದರೆ--ಅವನು ಕೂಗಲು ಅವರು ಕೇಳದೆ ಇದ್ದ ಪ್ರಕಾರ ಅವರು ಕೂಗಲು ನಾನು ಕೇಳದೆ ಇದ್ದೆನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.
ಆ ದಿನದಲ್ಲಿ--ಕರ್ತನೇ, ಕರ್ತನೇ ನಿನ್ನ ಹೆಸರಿನಲ್ಲಿ ನಾವು ಪ್ರವಾದಿಸಲಿಲ್ಲವೇ? ಮತ್ತು ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ಇದಲ್ಲದೆ ನಿನ್ನ ಹೆಸರಿನಲ್ಲಿ ಬಹಳ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ಬಹಳ ಜನರು ನನಗೆ ಹೇಳುವರು.
ಅವರು ಕೊಂಡುಕೊಳ್ಳುವದಕ್ಕೆ ಹೋದಾಗ ಮದಲಿಂಗನು ಬಂದನು. ಆಗ ಸಿದ್ಧವಾಗಿ ದ್ದವರು ಮದುವೆಗೆ ಆತನೊಂದಿಗೆ ಒಳಕ್ಕೆ ಹೊದರು; ತರುವಾಯ ಬಾಗಲು ಮುಚ್ಚಲಾಯಿತು.
ಮನೇಯಜಮಾನನು ಒಂದು ಸಾರಿ ಎದ್ದು ಬಾಗಲನ್ನು ಮುಚ್ಚಿಕೊಂಡರೆ ನೀವು ಹೊರಗೆ ನಿಂತು ಕೊಂಡು ಬಾಗಲನ್ನು ತಟ್ಟುತ್ತಾ--ಕರ್ತನೇ, ಕರ್ತನೇ, ನಮಗಾಗಿ ತೆರೆ ಎಂದು ಹೇಳುವದಕ್ಕೆ ಆರಂಭಿಸಿದಾಗ ಆತನು ನಿಮಗೆ ಪ್ರತ್ಯುತ್ತರವಾಗಿ--ನೀವು ಎಲ್ಲಿಯ ವರೋ ನಾನರಿಯೆ ಎಂದು ಹೇಳುವನು.
ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.