ಅಜ್ಞಾನಿ ಗಳ ವಿಮುಖವು ಅವರನ್ನು ಕೊಲ್ಲುವದು, ಜ್ಞಾನ ಹೀನರ ಏಳಿಗೆ ಅವರನ್ನು ನಾಶಪಡಿಸುವದು.ನನಗೆ ಕಿವಿಗೊಡುವವನಾದರೋ ಜೀವಿಸಿ ಯಾವ ಕೇಡಿನ ಭಯವಿಲ್ಲದೆ ನೆಮ್ಮದಿಯಲ್ಲಿರುವನು.
Cross references
ನಿನ್ನ ಪುಟ್ಟಿಗೂ ಕಣಜಕ್ಕೂ ಶಾಪ.
ಆದರೆ ಯೆಶುರೂನು ಕೊಬ್ಬಿ ಒದ್ದನು, ನೀನು ಕೊಬ್ಬಿದವನಾಗಿ ಉಬ್ಬಿದಿ, ನೀನು ಕೊಬ್ಬಿನಿಂದ ಮುಚ್ಚ ಲ್ಪಟ್ಟಿ. ಅವನು ತನ್ನನ್ನು ಉಂಟುಮಾಡಿದ ದೇವರನ್ನು ತೊರೆದು ತನ್ನ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದನು.
ಅವರ ಮೇಜು ಅವರ ಮುಂದೆ ಉರುಲಾ ಗಲಿ, ಸುಖವಾಗಿರುವವರಿಗೆ ಅದು ನೇಣೂ ಆಗಲಿ.
ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
ಅವಳ ಮನೆಯು ಮರಣದ ಕಡೆಗೆ, ಅವಳ ದಾರಿ ಗಳು ಮೃತರ ಕಡೆಗೆ ಇಳಿಸುತ್ತವೆ.
ಆದರೆ ನನಗೆ ವಿರೋಧವಾಗಿ ಪಾಪಮಾಡುವವನು ತನ್ನ ಸ್ವಂತ ಪ್ರಾಣಕ್ಕೆ ಕೇಡುಮಾಡಿಕೊಳ್ಳುತ್ತಾನೆ. ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.
ಆದರೆ ಸತ್ತವರು ಅಲ್ಲಿದ್ದಾರೆಂದೂ ಪಾತಾಳದ ಅಗಾಧಗಳಲ್ಲಿ ಅವಳ ಅಥಿತಿಗಳು ಇದ್ದಾ ರೆಂದೂ ಅವನಿಗೆ ತಿಳಿಯದು.
ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
ಜ್ಞಾನಿ ಯು ಭಯಪಟ್ಟು ಕೆಟ್ಟತನದಿಂದ ಹೊರಟುಹೋಗು ವನು; ಬುದ್ಧಿಹೀನನು ಕೋಪಿಸಿಕೊಂಡು ಧೈರ್ಯದಿಂದ ಇರುತ್ತಾನೆ.
ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
ಚೀಯೋನಿನಲ್ಲಿ ನಿಶ್ಚಿಂತೆಯಿಂದಿರುವವ ರಿಗೂ ಸಮಾರ್ಯ ಬೆಟ್ಟದಲ್ಲಿ ನಂಬಿಕೆ ಯಿಡುವವರಿಗೂ ಇಸ್ರಾಯೇಲಿನ ಮನೆತನದವರ ಯಾರ ಬಳಿಗೆ ಬರುತ್ತಾರೋ ಆ ಪ್ರಮುಖ ಜನಾಂಗ ದಲ್ಲಿ ಹೆಸರುಗೊಂಡವರಿಗೂ ಅಯ್ಯೋ!
ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದ್ದೇನಂದರೆ--ಒಬ್ಬಾ ನೊಬ್ಬ ಐಶ್ವರ್ಯವಂತನ ಭೂಮಿಯು ಸಮೃದ್ಧಿಯಾಗಿ ಬೆಳೆಯಿತು.
ಊದಾಬಣ್ಣದ ವಸ್ತ್ರಗಳನ್ನೂ ನಯವಾದ ನಾರು ಮಡಿಯನ್ನೂ ಧರಿಸಿಕೊಂಡು ಪ್ರತಿದಿನವೂ ಸಮೃದ್ಧಿ ಯಾಗಿ ಭೋಜನಮಾಡುತ್ತಿದ್ದ ಒಬ್ಬಾನೊಬ್ಬ ಐಶ್ವರ್ಯ ವಂತನಿದ್ದನು.
ಮಗನ ಮೇಲೆ ನಂಬಿಕೆಯಿಡುವವನಿಗೆ ನಿತ್ಯಜೀವ ಉಂಟು; ಯಾವನು ಮಗನನ್ನು ನಂಬುವದಿಲ್ಲವೋ ಅವನು ಜೀವವನ್ನು ಕಾಣುವದಿಲ್ಲ; ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿದೆ ಅಂದನು.
ನೀತಿ ವಂತನು ನಂಬಿಕೆಯಿಂದಲೆ ಬದುಕುವನು; ಅವನು ಹಿಂದೆಗೆದರೆ ಅವನಲ್ಲಿ ನನ್ನ ಆತ್ಮವು ಸಂತೊಷಿಸುವದಿಲ್ಲ.ನಾವಾ ದರೋ ಹಿಂದೆಗೆದವರಾಗಿ ನಾಶವಾಗುವವರಲ್ಲಿ ಅಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವ ರಾಗಿದ್ದೇವೆ.
ನೀವು ಶಿಕ್ಷೆ ಹೊಂದುವವರೆಲ್ಲರೊಂದಿಗೆ ಪಾಲುಗಾರ ರಾಗಿರದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಪುತ್ರರಲ್ಲ.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
ಭೂಲೋಕದಲ್ಲಿ ನೀವು ಭೋಗಿಗಳಾಗಿ ಮನಸ್ಸು ಬಂದಂತೆ ಜೀವಿಸಿದ್ದೀರಿ; ವಧೆಯ ದಿವಸಕ್ಕಾಗಿಯೇ ಎಂಬಂತೆ ನಿಮ್ಮ ಹೃದಯಗಳನ್ನು ಪೋಷಿಸಿಕೊಂಡಿದ್ದೀರಿ.