ಇವು ಮೂಢರಿಗೆ ಜಾಣತನ ವನ್ನೂ ಯೌವನಸ್ಥನಿಗೆ ತಿಳುವಳಿಕೆಯನ್ನೂ ವಿವೇಕ ವನ್ನೂ ಕೊಡುವವುಗಳಾಗಿವೆ.
Cross references
ಹೀಗಿರುವ ದರಿಂದ ನೀವು ಅವುಗಳನ್ನು ಕೈಕೊಂಡು ಅನುಸರಿಸಿರಿ; ಯಾಕಂದರೆ ಜನಾಂಗಗಳ ಮುಂದೆ ಇರುವ ನಿಮ್ಮ ಜ್ಞಾನವೂ ನಿಮ್ಮ ವಿವೇಕವೂ ಇದೇ ಆಗಿದೆ. ಅವರು ಈ ನಿಯಮಗಳನ್ನೆಲ್ಲಾ ಕೇಳಿ--ನಿಶ್ಚಯವಾಗಿ ಈ ದೊಡ್ಡ ಜನಾಂಗವು ಜ್ಞಾನವೂ ವಿವೇಕವೂ ಉಳ್ಳ ಜನವಾಗಿದೆ ಅನ್ನುವರು.
ಕರ್ತನ ನ್ಯಾಯಪ್ರಮಾಣವು ಸಂಪೂರ್ಣವಾಗಿದ್ದು ಪ್ರಾಣಕ್ಕೆ ಜೀವಕರವಾಗಿದೆ: ಕರ್ತನ ಸಾಕ್ಷಿಯು ಮೂರ್ಖರನ್ನು ಜ್ಞಾನಿಗಳನ್ನಾಗಿ ಮಾಡುತ್ತದೆ.
ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಕರ್ತನ ಭಯವನ್ನು ನಿಮಗೆ ಕಲಿಸುವೆನು.
ಯೌವನಸ್ಥನು ಯಾವದರಿಂದ ತನ್ನ ನಡತೆಯನ್ನು ಶುಚಿಮಾಡಿಕೊಳ್ಳುವನು? ನಿನ್ನ ವಾಕ್ಯವನ್ನು ಕೈಕೊಳ್ಳು ವದರಿಂದಲೇ.
ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
ಜ್ಞಾನ ಹೀನರೇ, ನೀವು ಎಷ್ಟು ಕಾಲ ಅಜ್ಞಾನವನ್ನು ಪ್ರೀತಿಸುವಿರಿ? ತಿರಸ್ಕರಿಸುವವರು ತಮ್ಮ ತಿರಸ್ಕರಿಸು ವಿಕೆಯಲ್ಲಿ ಎಷ್ಟುಕಾಲ ಆನಂದಿಸುವರು? ಜ್ಞಾನ ಹೀನರು ಎಷ್ಟು ಕಾಲ ತಿಳುವಳಿಕೆಯನ್ನು ಹಗೆ ಮಾಡುವರು?
ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
ನನ್ನ ಮಗನೇ, ನಿನ್ನ ಕಣ್ಣುಗಳಿಂದ ಅವುಗಳು ತಪ್ಪಿಸಿಕೊಳ್ಳದೆ ಇರಲಿ. ಸುಜ್ಞಾನವನ್ನೂ ವಿವೇಕವನ್ನೂ ಇಟ್ಟುಕೋ.
ಯುವಕರ ಮಧ್ಯದಲ್ಲಿ ತಿಳುವಳಿಕೆಯಿಲ್ಲದ ಒಬ್ಬ ಯೌವನಸ್ಥನನ್ನು ಕಂಡೆನು.
ಓ ಜ್ಞಾನಹೀನರೇ, ಜ್ಞಾನವನ್ನು ಗ್ರಹಿಸಿರಿ; ಬುದ್ಧಿಹೀನರೇ, ನೀವು ತಿಳು ವಳಿಕೆಯ ಹೃದಯದವರಾಗಿರ್ರಿ.
ಜ್ಞಾನ ವೆಂಬ ನಾನು ವಿವೇಕದೊಂದಿಗೆ ವಾಸವಾಗಿದ್ದೇನೆ. ಯುಕ್ತಿಯುಳ್ಳ ಕಲ್ಪನಾ ಶಕ್ತಿಯ ತಿಳುವಳಿಕೆಯನ್ನು ನಾನು ಕಂಡುಕೊಳ್ಳುತ್ತೇನೆ.
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ಆದದರಿಂದ ಓ ಮಕ್ಕಳೇ, ಈಗ ನನ್ನ ಕಡೆಗೆ ಕಿವಿಗೊಡಿರಿ; ನನ್ನ ಮಾರ್ಗಗಳನ್ನು ಅನುಸರಿಸುವವರು ಧನ್ಯರು.
ಮೂರ್ಖನು ಯಾವನೋ ಅವನು ಇಲ್ಲಿಗೆ ತಿರುಗಲಿ ಎಂದು ಕೂಗುತ್ತಾಳೆ. ತಿಳುವಳಿಕೆ ಇಲ್ಲದೆ ಇರುವವನಿಗೆ ಆಕೆಯು--
ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
ಹಾಗೆಯೇ ಯೌವನಸ್ಥರು ಸ್ವಸ್ಥಚಿತ್ತರಾಗಿರಬೇಕೆಂದು ಅವರನ್ನು ಎಚ್ಚರಿಸು.