ಶಿಕ್ಷಣವನ್ನು ಕೈಕೊಳ್ಳುವವನು ಜೀವನದ ಮಾರ್ಗದಲ್ಲಿ ಇದ್ದಾನೆ; ಗದರಿಕೆಯನ್ನು ತಿರಸ್ಕರಿಸುವವನು ತಪ್ಪುಮಾಡುತ್ತಾನೆ.
Cross references
ಅವನು ಅರ ಸನ ಸಂಗಡ ಮಾತನಾಡುತ್ತಿರುವಾಗ ಅರಸನು ಅವ ನಿಗೆ--ಅರಸನ ಯೋಚನಾಕರ್ತರಲ್ಲಿ ನೀನು ಒಬ್ಬ ನಾಗಿದ್ದೀಯೋ? ನೀನು ಯಾಕೆ ಹೊಡೆಯಲ್ಪಡಬೇಕು ಅಂದನು. ಆಗ ಪ್ರವಾದಿಯು--ನೀನು ನನ್ನ ಯೋಚನೆ ಯನ್ನು ಕೇಳದೆ ಇದನ್ನು ಮಾಡಿದ್ದರಿಂದ ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾನೆಂದು ನಾನು ಬಲ್ಲೆನು ಎಂದು ಹೇಳಿಬಿಟ್ಟನು.
ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ ನನ್ನ ಗದರಿಕೆ ಯನ್ನು ನೀವು ಬೇಡವೆಂದು ತಳ್ಳಿಬಿಟ್ಟದ್ದರಿಂದಲೂ
ನನ್ನ ಆಲೋಚನೆಯನ್ನು ಗಮನಿಸದೆ ಇದ್ದದಕ್ಕಾಗಿಯೂ ನನ್ನ ಗದರಿಕೆಯನ್ನೆಲ್ಲಾ ಅಸಡ್ಡೆ ಮಾಡಿದ್ದಕ್ಕಾಗಿಯೂ
ನನ್ನ ಮಗನೇ, ನನ್ನ ಕಟ್ಟಳೆಯನ್ನು ಮರೆಯಬೇಡ. ನಿನ್ನ ಹೃದಯವು ನನ್ನ ಆಜ್ಞೆ ಗಳನ್ನು ಕಾಪಾಡಲಿ:
ತನ್ನನ್ನು ಹಿಡಿದುಕೊಳ್ಳುವ ವರಿಗೆ ಆಕೆಯು ಜೀವದ ವೃಕ್ಷವಾಗಿದ್ದಾಳೆ; ಆಕೆಯನ್ನು ಭದ್ರವಾಗಿ ಇಟ್ಟುಕೊಳ್ಳುವ ಪ್ರತಿಯೊಬ್ಬನೂ ಧನ್ಯನು.
ಅವನು ಬೋಧಿಸಿ ನನಗೆ ಹೇಳಿದ್ದೇ ನಂದರೆ--ನನ್ನ ಮಾತುಗಳನ್ನು ನಿನ್ನ ಹೃದಯವು ಹಿಡಿದುಕೊಳ್ಳಲಿ; ನನ್ನ ಆಜ್ಞೆಗಳನ್ನು ಕೈಕೊಂಡು ಜೀವಿಸು.
ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ. ಅದನ್ನು ಕಾಪಾಡು. ಅದು ನಿನ್ನ ಜೀವವಾಗಿದೆ.
ಶಿಕ್ಷಣವನ್ನು ನಾನು ಎಷ್ಟೋ ಹಗೆಮಾಡಿದೆನು; ನನ್ನ ಹೃದಯವು ಗದರಿಕೆಯನ್ನು ತಿರಸ್ಕಾರ ಮಾಡಿತು.
ನಾನು ಕೂಟ ಮತ್ತು ಸಭೆಯ ಮಧ್ಯದಲ್ಲಿ ಹೆಚ್ಚು ಕಡಿಮೆ ಎಲ್ಲಾ ಕೇಡಿನಲ್ಲಿ ಇದ್ದೆನು ಎಂದು ಹೇಳುವಿ.
ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
ಶಿಕ್ಷಣವನ್ನು ಪ್ರೀತಿಸುವವನು ತಿಳುವಳಿಕೆಯನ್ನು ಪ್ರೀತಿಸುವವನಾಗಿದ್ದಾನೆ; ಗದರಿಕೆ ಯನ್ನು ಹಗೆಮಾಡುವವನು ಪಶುಪ್ರಾಯನು.
ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
ಶಿಕ್ಷಣವನ್ನು ನಿರಾಕರಿಸುವವನು ತನ್ನ ಪ್ರಾಣವನ್ನೇ ತಿರಸ್ಕರಿಸುತ್ತಾನೆ; ಗದರಿಕೆಗೆ ಕಿವಿಗೊಡುವವನು ವಿವೇಕ ವನ್ನು ಪಡೆಯುತ್ತಾನೆ.ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು.
ಅನೇಕ ಸಲ ಗದರಿಸಲ್ಪಟ್ಟರೂ ಬಗ್ಗದಕುತ್ತಿಗೆಯವನು ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
ನಿನ್ನ ಬಾಯಿಯು ನಿನ್ನ ದೇಹವನ್ನು ಪಾಪಮಾಡಿಸುವಂತೆ ಬಿಡಬೇಡ; ಇಲ್ಲವೆ ಅದು ತಪ್ಪು ಎಂದು ದೂತನ ಮುಂದೆ ಹೇಳಬೇಡ; ಇದರಿಂದ ದೇವರು ಯಾಕೆ ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೈಗಳ ಕೆಲಸವನ್ನು ಹಾಳುಮಾಡಬೇಕು?
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ಆದರೆ ಆತನು--ಹೌದು, ಇದಕ್ಕಿಂ ತಲೂ ದೇವರ ವಾಕ್ಯವನ್ನು ಕೇಳಿ ಅದರಂತೆ ನಡೆಯು ವವರೇ ಧನ್ಯರು ಎಂದು ಹೇಳಿದನು.
ಆದದರಿಂದ ನಾವು ಕೇಳಿದ ಸಂಗತಿಗಳಿಗೆ ಯಾವಾಗಲಾದರೂ ಜಾರಿ ಹೋದೇ ವೆಂದು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿ ರತಕ್ಕದ್ದು.
ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.
ಈಕಾರಣದಿಂದಲೇ ನೀವು ಪೂರ್ಣ ಜಾಗ್ರತೆಯಿಂದ ನಿಮಗಿರುವ ನಂಬಿಕೆಗೆ ಸದ್ಗುಣವನ್ನೂ ಸದ್ಗುಣಕ್ಕೆ ಜ್ಞಾನವನ್ನೂ