ಸುಳ್ಳಾಡುವ ತುಟಿಗಳಿಂದ ಹಗೆಯನ್ನಿಟ್ಟುಕೊಂಡ ವನೂ ಚಾಡಿಹೇಳುವವನೂ ಮೂರ್ಖನು.
Cross references
ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ; ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ; ನಾನೇ ಕರ್ತನು.
ಅವನಿಗೆ ಉರುಲಾಗಿರುವ ಹಾಗೆಯೂ ಫಿಲಿಷ್ಟಿಯರ ಕೈ ಅವನ ಮೇಲೆ ಬರುವ ಹಾಗೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡನು. ಆದದರಿಂದ ಸೌಲನು ದಾವೀದನಿಗೆ--ನೀನು ಎರಡನೆ ಯವಳಿಂದ ಈ ಹೊತ್ತು ಅಳಿಯನಾಗು ಅಂದನು.
ಸೌಲನು ದಾವೀದನಿ ಗೋಸ್ಕರ ಇನ್ನೂ ಹೆಚ್ಚಾಗಿ ಭಯಪಟ್ಟನು; ಸೌಲನು ಬಿಟ್ಟುಬಿಡದೆ ದಾವೀದನಿಗೆ ಶತ್ರುವಾಗಿದ್ದನು.ಆಗ ಫಿಲಿಷ್ಟಿಯರ ಪ್ರಧಾನರು ಹೊರಟರು, ಅವರು ಹೊರಟ ತರುವಾಯ ದಾವೀದನು ಸೌಲನ ಸಮಸ್ತ ಸೇವಕ ರಿಗಿಂತ ಹೆಚ್ಚು ಬುದ್ಧಿಯಿಂದ ನಡಕೊಂಡನು. ಆದದ ರಿಂದ ಅವನ ಹೆಸರು ಬಹಳ ಪ್ರಸಿದ್ಧವಾಗಿತ್ತು.
ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
ದಾವೀದನು ಊರೀಯನಿಗೆ--ನೀನು ನಿನ್ನ ಮನೆಗೆ ಹೋಗಿ ನಿನ್ನ ಕಾಲುಗಳನ್ನು ತೊಳಕೋ ಅಂದನು. ಊರೀಯನು ಅರಸನ ಮನೆಯಿಂದ ಹೊರಡುವಾಗ ಅರಸನ ಭೋಜನವು ಅವನ ಸಂಗಡವೇ ಹೋಯಿತು.
ಎರಡು ವರುಷ ಪೂರ್ಣಮುಗಿದ ತರುವಾಯ ಏನಾಯಿತಂದರೆ, ಅಬ್ಷಾಲೋಮನಿಗೆ ಎಫ್ರಾಯಾಮ್ ಬಳಿಯಲ್ಲಿರುವ ಬಾಳ್ಹಾಚೋರಿನಲ್ಲಿ ಕುರಿಗಳ ಉಣ್ಣೆ ಕತ್ತರಿಸುವವರಿದ್ದರು. ಆದದರಿಂದ ಅಬ್ಷಾಲೋಮನು ಅರಸನ ಮಕ್ಕಳನ್ನೆಲ್ಲಾ ಔತಣಕ್ಕೆ ಕರೆದನು.
ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು.
ಅವರ ಬಾಯಲ್ಲಿ ನಂಬಿಗಸ್ತಿಕೆಯು ಇಲ್ಲವೇ ಇಲ್ಲ. ಅವರ ಒಳಭಾಗವು ಅತಿ ದುಷ್ಟತ್ವವೇ. ಅವರ ಗಂಟಲು ತೆರೆದ ಸಮಾ ಧಿಯೇ; ತಮ್ಮ ನಾಲಿಗೆಯಿಂದ ಹೆಮ್ಮೆ ಕೊಚ್ಚಿ ಕೊಳ್ಳುತ್ತಾರೆ.
ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ಅವನು ತನ್ನ ನಾಲಿಗೆಯಿಂದ ಚಾಡಿ ಹೇಳುವದಿಲ್ಲ; ತನ್ನ ನೆರೆಯವನನ್ನು ನಿಂದಿಸು ವದಿಲ್ಲ;
ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
ಅವನ ಬಾಯಿ ಮಾತುಗಳು ಬೆಣ್ಣೆಗಿಂತ ನುಣುಪಾಗಿವೆ; ಅವನ ಹೃದ ಯವೋ ಕಲಹಮಯವೇ. ಅವನ ಮಾತುಗಳು ಎಣ್ಣೆ ಗಿಂತ ನಯವಾಗಿವೆ; ಆದರೆ ಅವು ಬಿಚ್ಚು ಕತ್ತಿಗಳಾಗಿವೆ.
ಮರೆಯಾಗಿ ನೆರೆಯವನ ಮೇಲೆ ಚಾಡಿ ಹೇಳುವವನನ್ನು ಸಂಹರಿಸುವೆನು; ಗರ್ವದ ಕಣ್ಣೂ ಅಹಂಕಾರದ ಹೃದಯವೂ ಉಳ್ಳವನನ್ನು ತಾಳಲಾರೆನು.
ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ.
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
ಅವರು ಆತನನ್ನು ಹೊಂಚಿ ನೋಡಿದವರಾಗಿ ಮಾತಿನಲ್ಲಿ ಆತನನ್ನು ಸಿಕ್ಕಿಸುವಂತೆಯೂ ಅಧಿಪತಿಯ ಬಲಕ್ಕೆ ಮತ್ತು ಅಧಿಕಾರಕ್ಕೆ ಒಪ್ಪಿಸುವಂತೆಯೂ ತಾವು ನೀತಿವಂತರೆಂದು ನಟಿಸುವ ಗೂಢಾಚಾರರನ್ನು ಕಳುಹಿಸಿದರು.