ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು.
Cross references
ಮನುಷ್ಯನ ದುಷ್ಟತ್ವವು ಭೂಮಿಯಲ್ಲಿ ಹೆಚ್ಚಿದ್ದನ್ನೂ ಅವನ ಹೃದಯದ ಆಲೋಚನೆಗಳ ಕಲ್ಪನೆಗಳೆಲ್ಲಾ ಯಾವಾಗಲೂ ಬರೀ ಕೆಟ್ಟವುಗಳೆಂದೂ ದೇವರು ನೋಡಿದನು.
ಆಗ ಕರ್ತನಿಗೆ ಅದರ ಸುವಾಸನೆಯು ಗಮಗಮಿಸಲು ತನ್ನ ಹೃದಯದಲ್ಲಿ--ಇನ್ನು ಮೇಲೆ ನಾನು ಮನುಷ್ಯನಿಗೋಸ್ಕರ ಭೂಮಿಯನ್ನು ಶಪಿಸುವ ದಿಲ್ಲ; ಯಾಕಂದರೆ ಮನುಷ್ಯನ ಹೃದಯದ ಕಲ್ಪನೆಯು ಅವನ ಚಿಕ್ಕತನದಿಂದಲೇ ಕೆಟ್ಟದ್ದು. ನಾನು ಈಗ ಮಾಡಿದ ಪ್ರಕಾರ ಇನ್ನು ಮೇಲೆ ಜೀವಿಗಳನ್ನೆಲ್ಲಾ ಸಂಹರಿಸುವದಿಲ್ಲ.ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
ನೀತಿವಂತನ ಬಾಯಿ ಜ್ಞಾನವನ್ನು ಉಚ್ಚರಿಸುವದು; ಅವನ ನಾಲಿಗೆ ನ್ಯಾಯ ವನ್ನು ನುಡಿಯುವದು.
ನನ್ನ ಫಲವು ಬಂಗಾರಕ್ಕಿಂತಲೂ ಹೌದು, ಚೊಕ್ಕ ಬಂಗಾರಕ್ಕಿಂತಲೂ ನನ್ನ ಆದಾಯವು ಆಯಲ್ಪಟ್ಟ ಬೆಳ್ಳಿಗಿಂತಲೂ ಶ್ರೇಷ್ಠವಾಗಿದೆ.
ಕತ್ತಿಯ ಇರಿತದ ಹಾಗೆ ಮಾತನಾಡುವದು ಉಂಟು. ಜ್ಞಾನವಂತರ ನಾಲಿಗೆಯು ಆರೋಗ್ಯ.
ಹಿತವಾದ ನಾಲಿಗೆಯು ಜೀವವೃಕ್ಷ; ಅದರಲ್ಲಿ ಮೂರ್ಖತ್ವವು ಆತ್ಮಕ್ಕೆ ಒಡಕು.
ನೀತಿಯ ತುಟಿಗಳು ಅರಸರ ಆನಂದ. ನ್ಯಾಯ ವಾದದ್ದನ್ನು ಮಾತನಾಡುವವನನ್ನು ಅವರು ಪ್ರೀತಿಸು ತ್ತಾರೆ.
ಬಂಗಾರವೂ ಮಾಣಿಕ್ಯಗಳ ರಾಶಿಯೂ ಇವೆ. ತಿಳುವಳಿಕೆಯ ತುಟಿಗಳು ಅಮೂಲ್ಯವಾದ ರತ್ನ ವಾಗಿವೆ.
ಅವನು ತನ್ನ ಹೃದಯದಲ್ಲಿ ಯೋಚಿಸುವಂತೆಯೇ ಇದ್ದಾನೆ; ಅವನು --ತಿನ್ನು, ಕುಡಿ ಎಂದು ಹೇಳುತ್ತಾನೆ; ಅವನ ಹೃದಯವು ನಿನ್ನೊಂದಿಗಿಲ್ಲ.
ಸಮಯೋಚಿತವಾದ ಮಾತು ಬೆಳ್ಳಿಯ ಚಿತ್ರಗಳಲ್ಲಿ ಬಂಗಾರದ ಸೇಬಿನಂತಿದೆ.
ಇದಲ್ಲದೆ ಯಾವ ಕ್ಷಣದಲ್ಲಿ ನಾನು ಒಂದು ಜನಾಂಗದ ವಿಷಯವಾಗಿಯೂ ಒಂದು ರಾಜ್ಯದ ವಿಷಯವಾಗಿಯೂ ಅದನ್ನು ಕಟ್ಟುವದಕ್ಕೂ ನೆಡುವದಕ್ಕೂ ಮಾತನಾಡುತ್ತೇನೋ
ಓ ಸರ್ಪಸಂತತಿಯವರೇ, ಕೆಟ್ಟವರಾಗಿ ರುವ ನೀವು ಒಳ್ಳೆಯವುಗಳನ್ನು ಹೇಗೆ ಮಾತನಾಡೀರಿ? ಯಾಕಂದರೆ ಹೃದಯದಲ್ಲಿ ಸಮೃದ್ಧಿಯಾಗಿರುವದನ್ನೇ ಬಾಯಿ ಮಾತನಾಡುತ್ತದೆ.