ಹೇಗೆ ಬಿರುಗಾಳಿಯು ಬೀಸುವದೋ ಹಾಗೆಯೇ ದುಷ್ಟರು ಇಲ್ಲವಾಗುವರು. ನೀತಿವಂತನು ಶಾಶ್ವತವಾದ ಅಸ್ತಿವಾರ ವಾಗಿದ್ದಾನೆ.
Cross references
ಆದರೆ ನೀತಿವಂತನು ತನ್ನ ಮಾರ್ಗವನ್ನು ಹಿಡಿದುಕೊಳ್ಳುವನು. ಶುದ್ಧ ಕೈಗಳು ಳ್ಳವನು ಬರಬರುತ್ತಾ ಬಲಗೊಳ್ಳುವನು.
ಕನಸಿನ ಹಾಗೆ ಅವನು ಕಾಣದೆ ಹಾರಿಹೋಗುವನು; ರಾತ್ರಿಯ ದರ್ಶನದ ಹಾಗೆ ಓಡಿಸಲ್ಪಡುವನು.
ಅವರು ಗಾಳಿಯ ಮುಂದೆ ಇರುವ ಹುಲ್ಲಿನ ಹಾಗೆಯೂ ಬಿರುಗಾಳಿಯು ಬಡ ಕೊಂಡು ಹೋಗುವ ಹೊಟ್ಟಿನ ಹಾಗೆಯೂ ಇದ್ದಾರೆ.
ಐಶ್ವರ್ಯವಂತನು ಮಲಗುತ್ತಾನೆ; ಕೂಡಿಸಲ್ಪಡು ವದಿಲ್ಲ; ಕಣ್ಣು ತೆರೆದರೆ ಅವನು ಇಲ್ಲ.
ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
ದುರ್ಮಾರ್ಗಿಗಳು ಕಡಿದು ಹಾಕಲ್ಪಡುವರು; ಕರ್ತನನ್ನು ನಿರೀಕ್ಷಿಸುವವರೇ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುವರು.
ನಿಮ್ಮ ಗಡಿಗೆಗಳಿಗೆ ಮುಳ್ಳಿನಕಾವು ತಾಗುವದಕ್ಕಿಂತ ಮುಂಚೆ ಅದು ಹಸಿ ಇರುವಾಗಲೇ ದೇವರು ಕೋಪದಿಂದ ಬಿರುಗಾಳಿಯಿಂ ದಲೋ ಎಂಬಂತೆ ಅವರನ್ನು ಹಾರಿಸಿಬಿಡುವನು.
ಮುಯ್ಯಿಗೆಮುಯ್ಯಿ ಆಗುವದನ್ನು ನೀತಿವಂತನು ದೃಷ್ಟಿಸುವಾಗ ಅವನು ಸಂತೋಷ ಪಡುವನು; ಅವನು ತನ್ನ ಪಾದಗಳನ್ನು ದುಷ್ಟರ ರಕ್ತ ದಲ್ಲಿ ತೊಳೆಯುವನು.ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ನಿಶ್ಚಯವಾಗಿ ನೀನು ಅವರನ್ನು ಜಾರುವ ಸ್ಥಳಗಳಲ್ಲಿ ಇಟ್ಟಿದ್ದೀ; ಅವರನ್ನು ನಾಶನಕ್ಕೆ ಕೆಳಗೆ ದೊಬ್ಬಿದ್ದೀ.
ಕರ್ತನಲ್ಲಿ ಭರವಸವಿಡುವವರು ಚೀಯೋನ್ ಪರ್ವತದ ಹಾಗಿ ದ್ದಾರೆ; ಅದು ಕದಲದೆ ಯುಗಯುಗಕ್ಕೂ ಇರುವದು.
ನಿಮ್ಮ ಭಯವು ತೀವ್ರ ದುಃಖದಂತೆಯೂ ನಿಮ್ಮ ನಾಶನವು ತುಫಾನಿನಂತೆಯೂ ಬರುವಾಗ ಅಪಾಯ ಮತ್ತು ಆಪತ್ತು ನಿಮ್ಮ ಮೇಲೆ ಬರುವಾಗ ನಾನು ಸಹ ನಕ್ಕು ಪರಿಹಾಸ್ಯಮಾಡುವೆನು.
ನೀತಿವಂತರು ಎಂದಿಗೂ ಕದಲುವದೇ ಇಲ್ಲ; ದುಷ್ಟರು ಭೂಮಿಯಲ್ಲಿ ವಾಸಮಾಡುವದಿಲ್ಲ.
ಯಾವನೂ ದುಷ್ಟತನದಿಂದ ಸ್ಥಿರವಾಗುವದಿಲ್ಲ; ನೀತಿವಂತರ ಬೇರು ಕದಲುವದಿಲ್ಲ.
ದುಷ್ಟರು ಕೆಡವಲ್ಪಟ್ಟು ಇಲ್ಲದೇ ಹೋಗುವರು; ನೀತಿವಂತರ ಮನೆಯು ನಿಲ್ಲುವದು.
ಹೌದು, ಅವರು ನೆಡಲ್ಪಡುವದಿಲ್ಲ ಬಿತ್ತ ಲ್ಪಡುವದಿಲ್ಲ. ಹೌದು ಅವರ ಬುಡವು ಭೂಮಿ ಯಲ್ಲಿ ಬೇರೂರುವದಿಲ್ಲ. ಆತನು ಶ್ವಾಸವನ್ನು ಅವರ ಮೇಲೆ ಊದಲು ಒಣಗಿಹೋಗುವರು. ಬಿರು ಗಾಳಿಯು ಅವರನ್ನು ಹೊಟ್ಟಿನಂತೆ ಬಡಿದುಕೊಂಡು ಹೋಗುವದು.
ಆದದರಿಂದ ಯಾವನಾದರೂ ನಾನು ಹೇಳುವ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವವನನ್ನು ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಹೋಲಿಸುವೆನು.
ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
ಮುಂದಿನ ಕಾಲಕ್ಕೆ ಒಳ್ಳೇ ಅಸ್ತಿವಾರವಾಗುವಂಥ ವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂತಲೂ ನಿತ್ಯಜೀವವನ್ನು ಹಿಡಿದುಕೊಳ್ಳುವವರಾಗಿರ ಬೇಕೆಂತಲೂ ಅವರಿಗೆ ಆಜ್ಞಾಪಿಸು.
ಆದರೂ ದೇವರ ಅಸ್ತಿವಾರವು ಖಂಡಿತವಾಗಿ ನಿಲ್ಲುತ್ತದೆ. ಅದರ ಮೇಲೆ--ತನ್ನವರು ಯಾರಾರೆಂಬದನ್ನು ಕರ್ತನು ತಿಳಿದಿದ್ದಾನೆಂತಲೂ ಮತ್ತು ಕ್ರಿಸ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುಷ್ಟತ್ವವನ್ನು ಬಿಟ್ಟುಬಿಡ ಬೇಕೆಂತಲೂ ಮುದ್ರೆ ಉಂಟು.