ನೀತಿವಂತರ ತಲೆಯ ಮೇಲೆ ಆಶೀರ್ವಾದಗಳು ಇವೆ; ಆದರೆ ದುಷ್ಟನ ಬಾಯಿಯನ್ನು ಬಲಾತ್ಕಾರವು ಮುಚ್ಚುತ್ತದೆ.
Cross references
ನೀನು ನಿನ್ನ ದೇವರಾದ ಕರ್ತನ ವಾಕ್ಯವನ್ನು ಕೇಳಿದರೆ ಈ ಎಲ್ಲಾ ಆಶೀರ್ವಾದಗಳು ನಿನ್ನ ಮೇಲೆ ಬಂದು ನಿನಗೆ ಪ್ರಾಪ್ತವಾಗುವವು.
ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
ನಾಶವಾಗುವದಕ್ಕೆ ಸಿದ್ಧವಾದವನ ಆಶೀರ್ವಾದವು ನನ್ನ ಮೇಲೆ ಬರು ತ್ತಿತ್ತು; ವಿಧವೆಯ ಹೃದಯವು ಸಂತೋಷದಿಂದ ಹಾಡುವಂತೆ ನಾನು ಮಾಡಿದೆನು.
ನೀತಿವಂತರು ನೋಡಿ ಸಂತೋ ಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
ಕರ್ತನ ಶಾಪವು ದುಷ್ಟರ ಮನೆಯಲ್ಲಿದೆ; ಆದರೆ ನ್ಯಾಯಸ್ಥರ ನಿವಾಸವನ್ನು ಆತನು ಆಶೀರ್ವದಿಸುತ್ತಾನೆ.
ನೀತಿವಂತನ ಬಾಯಿ ಯು ಜೀವಕರವಾದ ಬಾವಿ; ದುಷ್ಟನ ಬಾಯನ್ನು ಬಲಾತ್ಕಾರವು ಮುಚ್ಚುತ್ತದೆ.
ಧಾನ್ಯವನ್ನು ಬಿಗಿಹಿಡಿಯುವವನನ್ನು ಜನರು ಶಪಿಸುವರು; ಅದನ್ನು ಮಾರುವವನ ತಲೆಯ ಮೇಲೆ ಆಶೀರ್ವಾದವು ನೆಲೆಯಾಗಿರುವದು.
ಗದರಿಸುವವರಿಗೆ ಆನಂದವಾಗುವದು; ಅವರ ಮೇಲೆ ಶುಭದಾಯಕ ಆಶೀರ್ವಾದವು ಬರುವದು.
ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
ನೀತಿವಂತನಿಗೆ ನೀವು--ಅವನಿಗೆ ಒಳ್ಳೇದಿರಲಿ ಎಂದು ಹೇಳಿರಿ; ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.
ಪ್ರತಿಯೊಂದು ಬಾಯಿ ಮುಚ್ಚಿ ಹೋಗುವಂತೆಯೂ ಲೋಕವೆಲ್ಲಾ ದೇವರ ಮುಂದೆ ದೋಷಿಯಾಗಿರುವಂತೆಯೂ ನ್ಯಾಯ ಪ್ರಮಾಣವು ಹೇಳುವವುಗಳನ್ನು ನ್ಯಾಯಪ್ರಮಾಣಕ್ಕೆ ಒಳಗಾದವರಿಗೆ ಹೇಳುತ್ತದೆಯೆಂದು ನಾವು ಬಲ್ಲೆವು.
ಒನೇಸಿಫೊರನ ಮನೆಯವರಿಗೆ ಕರ್ತನು ಕರುಣೆಯನ್ನು ತೋರಿಸಲಿ. ಯಾಕಂದರೆ ಅವನು ಅನೇಕಾ ವರ್ತಿ ನನ್ನನ್ನು ಉತ್ತೇಜನ ಪಡಿಸಿದನು. ನನ್ನ ಬೇಡಿಗಳಿಗೆ ನಾಚಿಕೆಪಡಲಿಲ್ಲ.