ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.
Cross references
ಇದು ದುಷ್ಟ ಮನುಷ್ಯನಿಗೆ ದೇವರಿಂದ ಬಂದ ಪಾಲಾಗಿದೆ; ಬಲಾತ್ಕಾರಿಗಳು ಸರ್ವ ಶಕ್ತನಿಂದ ಹೊಂದುವ ಬಾಧ್ಯತೆ ಇದೇ.
ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
ಅವರು ತಮ್ಮ ಸ್ವಂತ ರಕ್ತಕ್ಕೆ ಹೊಂಚುಹಾಕುತ್ತಾರೆ; ತಮ್ಮ ಪ್ರಾಣಗಳಿಗೆ ರಹಸ್ಯವಾಗಿ ಅಡಗಿಕೊಳ್ಳುತ್ತಾರೆ.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.
ಹಾವಿನಂತೆ ಮೊಟ್ಟೆಗಳನ್ನು ಮರಿ ಮಾಡುತ್ತಾರೆ, ಜೇಡಹುಳದ ನೂಲನ್ನು ನೇಯುತ್ತಾರೆ; ಅದರ ಮೊಟ್ಟೆಗಳನ್ನು ತಿನ್ನುವವನು ಸಾಯುವನು; ಒಡೆಯುವಂಥಾದ್ದರಿಂದ ವಿಷದ ಮರಿಯು ಹೊರಡುವದು.
ಅವರ ಹೃದಯವು ಭೇದವಾಯಿತು, ಈಗ ಅವರು ಅಪರಾಧಿಗಳೆಂದು ಕಾಣಿಸಲ್ಪಡುವರು; ಆತನು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವನು.
ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
ಯೇಸುವಿನಲ್ಲಿರುವ ಸತ್ಯೋಪದೇಶವು ಯಾವದೆಂದರೆ--ನೀವು ನಿಮ ಹಿಂದಿನ ನಡತೆಯನ್ನು ಅನುಸರಿಸದೆ ಪೂರ್ವಸ್ವಭಾವ ವನ್ನು ತೆಗೆದು ಹಾಕಿಬಿಡಬೇಕು; ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟು ಹೋಗುವಂಥದು.
ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.