Cross references
ಆತನು ನಿಶ್ಚಯವಾಗಿಯೂ ಪರಿಹಾಸ್ಯಕರನ್ನು ತಿರಸ್ಕರಿಸುತ್ತಾನೆ; ಆದರೆ ದೀನರಿಗೆ ಆತನು ಕೃಪೆಯನ್ನು ಕೊಡುತ್ತಾನೆ.ಜ್ಞಾನಿಯು ಮಹಿಮೆಗೆ ಬಾಧ್ಯನಾಗುವನು, ಜ್ಞಾನ ಹೀನರ ಏಳಿಗೆಯು ಅವಮಾನವಾಗುವದು.
ಕರ್ತನ ಭಯವು ಜ್ಞಾನೋ ಪದೇಶ; ಗೌರವಕ್ಕೆ ಮೊದಲು ವಿನಯ.
ನಾಶನಕ್ಕೆ ಮುಂದಾಗಿ ಗರ್ವ ಹೋಗು ತ್ತದೆ; ಬೀಳುವಿಕೆಯ ಮುಂಚೆ ಜಂಬದ ಮನಸ್ಸು.
ನಾಶನಕ್ಕೆ ಮುಂದೆ ಮನುಷ್ಯನ ಹೃದಯವು ಗರ್ವವಾಗಿದೆ; ಸನ್ಮಾನಕ್ಕೆ ಮುಂಚೆ ವಿನಯವಾಗಿದೆ.
ಮನುಷ್ಯನ ಗರ್ವವು ತನ್ನನ್ನು ಹೀನಸ್ಥಿತಿಗೆ ತರುವದು; ಆತ್ಮದಲ್ಲಿ ದೀನರಾಗಿರುವವರು ಸನ್ಮಾನಹೊಂದುವರು.
ಆದದರಿಂದ ಓ ಅರಸನೇ, ನನ್ನ ಆಲೋಚನೆಯು ನಿನಗೆ ಸಮ್ಮತಿ ಯಾಗಿ ನಿನ್ನ ಪಾಪಗಳನ್ನು ನೀತಿಯಿಂದ ಅಳಿಸಿ ನಿನ್ನ ಅನ್ಯಾಯಗಳನ್ನು ಬಡವರಿಗೆ ದಯೆ ತೋರಿಸುವದ ರಿಂದ ಬಿಟ್ಟುಬಿಡು. ಒಂದು ವೇಳೆ ಇದರಿಂದ ನಿನ್ನ ನೆಮ್ಮದಿಯು ಹೆಚ್ಚಾಗಬಹುದು.
ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
ಯಾವನಾದರೂ ನಿನ್ನನ್ನು ಮದುವೆಗೆ ಕರೆದರೆ ಉನ್ನತ ಸ್ಥಳದಲ್ಲಿ ಕೂತುಕೊಳ್ಳಬೇಡ; ಯಾಕಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಕರೆದಿರ ಬಹುದು;
ಆಗ ನಿನ್ನನ್ನು ಮತ್ತು ಅವನನ್ನು ಕರೆದವನು ಬಂದು ನಿನಗೆ--ಈ ಮನುಷ್ಯನಿಗೆ ಸ್ಥಳಕೊಡು ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಳದಲ್ಲಿ ಕೂತುಕೊಳ್ಳಬೇಕಾಗಿರುವದು.
ಇವನೇ ಫರಿಸಾಯನಿಗಿಂತ ನೀತಿವಂತನೆಂದು ನಿರ್ಣಯಿಸಲ್ಪಟ್ಟ ವನಾಗಿ ತನ್ನ ಮನೆಗೆ ಹೋದನು; ಯಾಕಂದರೆ ತನ್ನನ್ನು ಹೆಚ್ಚಿಸಿಕೊಳ್ಳುವ ಪ್ರತಿಯೊಬ್ಬನು ತಗ್ಗಿಸಲ್ಪಡುವನು ಮತ್ತು ತನ್ನನ್ನು ತಗ್ಗಿಸಿಕೊಳ್ಳುವವನು ಹೆಚ್ಚಿಸಲ್ಪಡುವನು ಎಂದು ನಾನು ನಿಮಗೆ ಹೇಳುತ್ತೇನೆ ಅಂದನು.
ವಿಗ್ರಹಗಳಿಗೆ ಸಮರ್ಪಣೆ ಮಾಡುವವು ಗಳ ವಿಷಯದಲ್ಲಿ ನಮ್ಮೆಲ್ಲರಿಗೂ ಜ್ಞಾನ ವಿದೆಯೆಂದು ನಾವು ಬಲ್ಲೆವು; ಜ್ಞಾನವು ಉಬ್ಬಿಕೊಳ್ಳುತ್ತದೆ, ಆದರೆ ಪ್ರಿತಿಯು ಭಕ್ತಿವೃದ್ಧಿಯನ್ನುಂಟುಮಾಡು ತ್ತದೆ.