ತನ್ನ ಐಶ್ವರ್ಯವನ್ನು ನಂಬಿದವನು ಬಿದ್ದುಹೋಗುವನು; ನೀತಿವಂತರು ಕೊಂಬೆಯ ಹಾಗೆ ಚಿಗುರುವರು.
Cross references
ನೀನು ತಿಂದು ತೃಪ್ತಿಹೊಂದಿದಾಗಲೂ ಒಳ್ಳೇ ಮನೆಗಳನ್ನು ಕಟ್ಟಿ ಅವುಗಳಲ್ಲಿ ವಾಸಮಾಡುವಾಗಲೂ
ನಾನು ಬಂಗಾರವನ್ನು ನನ್ನ ನಿರೀಕ್ಷೆಯನ್ನಾಗಿ ಇಟ್ಟಿದ್ದರೆ, ಅಪ ರಂಜಿಗೆ--ನೀನು ನನ್ನ ಭರವಸವು ಎಂದು ಹೇಳಿದ್ದರೆ,
ಅವನು ತನ್ನ ಕಾಲದಲ್ಲಿ ತನ್ನ ಫಲಕೊಡುವಂಥ, ಎಲೆ ಬಾಡದಂಥ, ನೀರಿನ ಹೊಳೆಗಳ ಬಳಿಯಲ್ಲಿ ನೆಡಲ್ಪಟ್ಟಂಥ ಮರದ ಹಾಗಿರುವನು; ಅವನು ಮಾಡು ವದೆಲ್ಲಾ ಸಫಲವಾಗುವದು.
ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು.
ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ.
ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
ನೀತಿವಂತನು ಖರ್ಜೂರ ಮರದ ಹಾಗೆ ಚಿಗುರುವನು; ಲೆಬನೋನಿ ನಲ್ಲಿರುವ ದೇವದಾರಿನ ಹಾಗೆ ಬೆಳೆಯುವನು.
ಐಶ್ವರ್ಯವಂತನ ಸಂಪತ್ತು ಅವನ ಬಲವಾದ ಪಟ್ಟಣ; ಬಡವರ ನಾಶನವು ಅವರ ಬಡತನವೇ.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಆ ಜನಾಂಗಕ್ಕೆ ವಿರೋಧವಾಗಿ ನಾನು ಮಾತನಾಡಿದ ತನ್ನ ಕೆಟ್ಟತನವನ್ನು ಬಿಟ್ಟು ತಿರುಗಿದರೆ ನಾನು ಅದಕ್ಕೆ ಮಾಡಬೇಕೆಂದು ಯೋಚಿಸಿದ ಕೆಟ್ಟದ್ದನ್ನು ಕುರಿತು ಪಶ್ಚಾ ತ್ತಾಪ ಪಡುವೆನು.
ಆಗ ಶಿಷ್ಯರು ಆತನ ಮಾತುಗಳಿಗೆ ಬೆರಗಾದರು; ಆದರೆ ಯೇಸು ತಿರಿಗಿ ಉತ್ತರಕೊಟ್ಟು ಅವರಿಗೆ-- ಮಕ್ಕಳಿರಾ, ಐಶ್ವರ್ಯದಲ್ಲಿ ನಂಬಿಕೆ ಇಟ್ಟವರು ದೇವರ ರಾಜ್ಯದಲ್ಲಿ ಪ್ರವೇಶಿಸುವದು ಎಷ್ಟೋ ಕಷ್ಟ.
ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ