ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವದು; ತಮ್ಮ ಸ್ವಂತ ತುಂಟ ತನದಲ್ಲಿ ದೋಷಿಗಳು ಸಿಕ್ಕಿಬೀಳುವರು.
Cross references
ಹೀಗಿದ್ದರೆ ಬರುವ ಕಾಲದಲ್ಲಿ ನನ್ನ ಸಂಬಳಕ್ಕಾಗಿ ನಾನು ನಿನ್ನ ಮುಂದೆ ಬಂದಾಗ ನನ್ನ ನೀತಿಯು ನನಗಾಗಿ ಉತ್ತರ ಕೊಡುವದು. ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಕುರಿಗಳಲ್ಲಿ ಕಂದು ಬಣ್ಣವಿಲ್ಲದವುಗಳೂ ನನ್ನ ಬಳಿಯಲ್ಲಿದ್ದರೆ ಅವು ಕದ್ದವುಗಳಾಗಿ ಎಣಿಕೆಯಾಗಿರಲಿ ಅಂದನು.
ನೀನು ನನ್ನ ಸಾಮಾನುಗಳನ್ನೆಲ್ಲಾ ಹುಡಿಕಿದ ಮೇಲೆ ನಿನ್ನ ಮನೆಯ ಸಾಮಾನುಗಳಲ್ಲಿ ಏನು ಕಂಡುಕೊಂಡಿ? ನನಗೂ ನಿನಗೂ ಸಹೋದರರಾಗಿರುವವರ ಮುಂದೆ ಅದನ್ನು ಇಲ್ಲಿ ಇಡು. ಅವರೇ ನಮ್ಮಿಬ್ಬರ ಮಧ್ಯೆ ನ್ಯಾಯತೀರಿಸಲಿ.
ಇಗೋ, ನಾನು ಇಲ್ಲಿದ್ದೇನೆ; ಕರ್ತನ ಮುಂದೆಯೂ ಆತನ ಅಭಿಷಿಕ್ತನ ಮುಂದೆಯೂ ನನಗೆ ವಿರೋಧವಾಗಿ ಸಾಕ್ಷಿಕೊಡಿರಿ. ನಾನು ಯಾರ ಎತ್ತನ್ನಾದರೂ ಕತ್ತೆಯ ನ್ನಾದರೂ ತೆಗೆದುಕೊಂಡೆನೋ? ಯಾರಿಗಾದರೂ ವಂಚನೆ ಮಾಡಿದೆನೋ? ಯಾರನ್ನಾದರೂ ಹಿಂಸಿಸಿ ದೆನೋ? ಯಾರಿಂದಲಾದರೂ ಕಣ್ಣಿಗೆ ಮರೆಮಾಡುವ ಲಂಚವನ್ನು ತೆಗೆದುಕೊಂಡೆನೋ? ಹೀಗಿದ್ದರೆ ಹೇಳಿರಿ ತಿರಿಗಿಕೊಡುತ್ತೇನೆ ಅಂದನು.
ಆಗ ಕರ್ತನು ಅವನ ತಲೆಯ ಮೇಲೆ ಅವನ ರಕ್ತಾಪರಾಧ ವನ್ನು ಬರಮಾಡುವನು. ನನ್ನ ತಂದೆಯಾದ ದಾವೀ ದನು ತಿಳಿಯದಿರುವಾಗ ಅವನು ತನಗಿಂತ ನೀತಿಯುಳ್ಳ ಉತ್ತಮರಾದ ಇಬ್ಬರ ಮೇಲೆ ಬಿದ್ದು ಅವರನ್ನು ಕತ್ತಿ ಯಿಂದ ಕೊಂದನು. ಅವರು ಯಾರಂದರೆ, ಇಸ್ರಾ ಯೇಲಿನ ಸೈನ್ಯಕ್ಕೆ ಅಧಿಪತಿಯಾಗಿದ್ದ ನೇರನ ಮಗನಾದ ಅಬ್ನೇರನೂ ಯೆಹೂದ ಸೈನ್ಯಕ್ಕೆ ಅಧಿಪತಿಯಾಗಿದ್ದ ಯೆತೆರನ ಮಗನಾದ ಅಮಾಸನೂ.
ಇದಲ್ಲದೆ ಅರಸನು ಶಿಮ್ಮಿಗೆ--ನೀನು ನನ್ನ ತಂದೆಯಾದ ದಾವೀ ದನಿಗೆ ಮಾಡಿದ ಕೆಟ್ಟತನವನ್ನೆಲ್ಲಾ ನಿನ್ನ ಹೃದಯಕ್ಕೆ ತಿಳಿದದೆ. ಕರ್ತನು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ.
ದುಷ್ಟ ನನ್ನು ಅವನ ಸ್ವಂತ ಅಕ್ರಮಗಳೇ ಹಿಡಿಯುವವು; ತನ್ನ ಪಾಪಗಳ ಪಾಶಗಳಿಂದಲೇ ಅವನು ಬಂಧಿಸಲ್ಪಡು ವನು.ಶಿಕ್ಷಣವಿಲ್ಲದೆ ಅವನು ಸಾಯುವನು; ತನ್ನ ಮೂಢತ್ವದ ದೊಡ್ಡಸ್ತಿಕೆಯಲ್ಲಿ ತಪ್ಪಿಹೋಗುವನು.
ಯಾವನು ಕುಣಿಯನ್ನು ಅಗೆಯುವನೋ ಅದರಲ್ಲೇ ಅವನು ಬೀಳುವನು; ಯಾವನು ಬೇಲಿಯನ್ನು ಮುರಿ ಯುವನೋ ಅವನನ್ನು ಹಾವು ಕಚ್ಚುವದು.