ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ; ಅವನ ಸ್ಥಳದಲ್ಲಿ ದುಷ್ಟನು ಬರುತ್ತಾನೆ.
Cross references
ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
ನೀತಿವಂತರ ರಕ್ಷಣೆಯು ಕರ್ತ ನಿಂದಲೇ; ಇಕ್ಕಟ್ಟಿನ ಕಾಲದಲ್ಲಿ ಅವರ ಬಲವು ಆತನೇ.ಕರ್ತನು ಅವರಿಗೆ ಸಹಾಯಮಾಡಿ ಅವರನ್ನು ತಪ್ಪಿಸುವನು; ದುಷ್ಟರಿಂದ ಅವರನ್ನು ತಪ್ಪಿಸಿ ರಕ್ಷಿಸುವನು; ಅವರು ಆತನಲ್ಲಿ ಭರವಸವಿಟ್ಟಿದ್ದಾರೆ.
ನೀತಿ ವಂತರಿಗಾಗಿ ದುಷ್ಟರೂ ಯಥಾರ್ಥವಂತರಿಗಾಗಿ ದೋಷಕರೂ ಈಡಾಗುವರು.
ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
ಆಗ ಅರಸನು ಅವನ ವಿಷಯದಲ್ಲಿ ಬಹಳ ಸಂತೋಷಪಟ್ಟು ದಾನಿಯೇಲನನ್ನು ಗವಿಯೊಳ ಗಿಂದ ಮೇಲಕ್ಕೆತ್ತಬೇಕೆಂದು ಆಜ್ಞೆ ಮಾಡಿದನು; ಹೀಗೆ ದಾನಿಯೇಲನನ್ನು ಗವಿಯೊಳಗಿಂದ ಮೇಲಕೆತ್ತಿದರು ಮತ್ತು ಅವನು ತನ್ನ ದೇವರಲ್ಲಿ ನಂಬಿಕೆಯಿಟ್ಟದ್ದರಿಂದ ಯಾವ ತರಹ ಹಾನಿಯೂ ಅವನಲ್ಲಿ ಕಾಣಲಿಲ್ಲ.
ಆಗ ಅರಸನಾದ ದಾರ್ಯಾವೆಷನು ಭೂಲೋ ಕದ ಎಲ್ಲಾ ಕಡೆಯಲ್ಲೂ ವಾಸವಾಗಿರುವ ಸಕಲ ಪ್ರಜೆ, ಜನಾಂಗ ಭಾಷೆಗಳವರಿಗೆ ಬರೆದದ್ದೇನಂದರೆ--ನಿಮಗೆ ಸಮಾಧಾನವು ಹೆಚ್ಚಾಗಲಿ.