ಒಬ್ಬ ಕಪಟಿಯು ಬಾಯಿಂದ ತನ್ನ ನೆರೆಯವನನ್ನು ಹಾಳುಮಾಡುತ್ತಾನೆ; ತಿಳುವಳಿಕೆಯ ಮೂಲಕ ನೀತಿವಂತನು ಬಿಡಿಸಲ್ಪ ಡುವನು.
Cross references
ಇವನು ಅವನಿಗೆ--ನಾನು ನಿನ್ನ ಹಾಗೆಯೇ ಪ್ರವಾದಿಯಾಗಿದ್ದೇನೆ; ಮತ್ತು ಒಬ್ಬ ದೂತನು ಕರ್ತನ ಮಾತಿನಿಂದ ನನಗೆ--ಅವನು ರೊಟ್ಟಿ ತಿಂದು ನೀರು ಕುಡಿಯಲು ಅವನನ್ನು ಹಿಂದಕ್ಕೆ ನಿನ್ನ ಮನೆಗೆ ಕರಕೊಂಡು ಬಾ ಎಂದು ಹೇಳಿದನು ಅಂದನು. ಆದರೆ ಇವನು ಅವನಿಗೆ ಸುಳ್ಳು ಹೇಳಿದನು.
ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
ಆಗ ಕರ್ತನು--ಅಹಾಬನು ಹೋಗಿ ಗಿಲ್ಯಾದಿನ ರಾಮೋ ತಿನ ಬಳಿಯಲ್ಲಿ ಬೀಳುವ ಹಾಗೆ ಅವನನ್ನು ಮರುಳು ಗೊಳಿಸುವವನು ಯಾರು ಅಂದನು.
ದೇವರನ್ನು ಮರೆಯುವ ವರೆಲ್ಲರ ಹಾದಿಗಳು ಹಾಗೆಯೇ; ಕಪಟಿಯ ನಿರೀಕ್ಷೆಯು ನಾಶವಾಗುವದು.
ಹೀಗೆ ಜನರಿಗೆ ಉರು ಲಾಗದಂತೆ ಕಪಟಿಯು ಆಳುವದಿಲ್ಲ.
ನನ್ನನ್ನು ನಿಂದಿಸಿದವನು ಶತ್ರುವಲ್ಲ; ಶತ್ರುವಾದರೆ ತಾಳಿಕೊಳ್ಳುತ್ತಿದ್ದೆನು; ನಿನಗೆ ವಿರೋಧವಾಗಿ ಹೆಚ್ಚಿಸಿ ಕೊಳ್ಳುವವನು ನನ್ನ ಹಗೆಯವನಲ್ಲ; ಹಗೆಯವನಾದರೆ ಅವನಿಗೆ ಅಡಗಿಕೊಳ್ಳುತ್ತಿದ್ದೆನು.
ಅವನು ತನ್ನ ಸಂಗಡ ಸಮಾಧಾನವುಳ್ಳವರಿಗೆ ವಿರೋಧವಾಗಿ ತನ್ನ ಕೈಗಳನ್ನು ಹಾಕಿದ್ದಾನೆ; ತನ್ನ ಒಡಂಬಡಿಕೆಯನ್ನು ಮುರಿದಿದ್ದಾನೆ.
ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿ ಸಿದಾಗ ನಿನ್ನ ಪ್ರಾಣಕ್ಕೆ ತಿಳುವಳಿಕೆಯು ಅಂದವಾಗಿರು ವದು.
ಜ್ಞಾನವನ್ನೂ ವಿವೇಕವನ್ನೂ ಸಂಪಾದಿಸು; ಅವುಗಳನ್ನು ಮರೆಯದಿರು, ಅಲ್ಲದೆ ನನ್ನ ಬಾಯಿಯ ಮಾತುಗಳನ್ನು ನಿರಾಕರಿಸಬೇಡ.
ಆಜ್ಞೆಯು ದೀಪವಾಗಿದೆ, ಕಟ್ಟ ಳೆಯು ಬೆಳಕಾಗಿದೆ; ಶಿಕ್ಷಣದ ಗದರಿಕೆಗಳು ಜೀವದ ಮಾರ್ಗವಾಗಿವೆ.
ಕುರಿ ವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳು ಪ್ರವಾದಿಗಳಿಗೆ ಎಚ್ಚರವಾಗಿರ್ರಿ; ಯಾಕಂದರೆ ಅವರು ಒಳಗೆ ದೋಚಿಕೊಳ್ಳುವ ತೋಳಗಳಾಗಿದ್ದಾರೆ.
ಆದರೆ ನೀವು--ಯಾವನಾದರೂ ತನ್ನ ತಂದೆಗಾಗಲೀ ತಾಯಿಗಾಗಲೀ-- ನನ್ನಿಂದ ನಿನಗೆ ಪ್ರಯೋಜನ ವಾಗತಕ್ಕದ್ದು ಕಾಣಿಕೆಯಾಯಿತು ಎಂದು ಹೇಳುವದಾ ದರೆ
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
ಯಾಕಂದರೆ ಸುಳ್ಳು ಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ಆರಿಸಿಕೊಂಡವರನ್ನೂ ಮೋಸ ಗೊಳಿಸುವದಕ್ಕೊಸ್ಕರ ಸೂಚಕಕಾರ್ಯಗಳನ್ನು ಅದ್ಭುತ ಕಾರ್ಯಗಳನ್ನು ಮಾಡಿ ತೋರಿಸುವರು.
ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು.
ಅಂಥವರು ಸುಳ್ಳು ಅಪೊಸ್ತಲರೂ ಮೋಸಗಾರರಾದ ಕೆಲಸದವರೂ ಕ್ರಿಸ್ತನ ಅಪೊಸ್ತಲರಂತೆ ಕಾಣಿಸಿಕೊಳ್ಳು ವದಕ್ಕೆ ತಮ್ಮನ್ನು ತಾವೇ ಮಾರ್ಪಡಿಸಿಕೊಳ್ಳುವವರೂ ಆಗಿದ್ದಾರೆ.
ಹೀಗೆ ನಾವೆಲ್ಲರೂ ನಂಬಿಕೆಯ ಅನ್ಯೋನ್ಯತೆಯಲ್ಲಿಯೂ ದೇವಕುಮಾರನ ಜ್ಞಾನದಲ್ಲಿಯೂ ಪರಿಪೂರ್ಣ ಮನುಷ್ಯನಾಗುವದಕ್ಕೆ ಕ್ರಿಸ್ತನ ಪರಿಪೂರ್ಣತೆಯ ನೀಳದ ಪ್ರಮಾಣಕ್ಕೆ ಮುಟ್ಟುವೆವು.
ಆಗ ಆ ದುಷ್ಟನು ಪ್ರತ್ಯಕ್ಷನಾಗುವನು; ಕರ್ತನು ತನ್ನ ಬಾಯಿಯ ಉಸುರಿನಿಂದ ಅವನನ್ನು ದಹಿಸಿ ತನ್ನ ಪ್ರತ್ಯಕ್ಷತೆಯ ಪ್ರಕಾಶದಿಂದ ನಾಶಮಾಡುವನು.
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
ಅವನು ತನ್ನ ಎಲ್ಲಾ ಪತ್ರಿಕೆಗಳಲ್ಲಿಯೂ ಈ ವಿಷಯ ಗಳನ್ನು ಕುರಿತು ಹೇಳಿದ್ದಾನೆ. ಆ ಪತ್ರಿಕೆಗಳಲ್ಲಿರುವ ಕೆಲವು ವಿಷಯಗಳು ತಿಳಿಯುವದಕ್ಕೆ ಕಷ್ಟವಾಗಿವೆ. ವಿದ್ಯಾಹೀನರೂ ಚಪಲಚಿತ್ತರೂ ಮಿಕ್ಕಾದ ಬರಹಗಳಿಗೆ ಸಹ ತಪ್ಪಾದ ಅರ್ಥಮಾಡಿಕೊಂಡ ಹಾಗೆಯೇ ಇವುಗಳಿಗೂ ತಪ್ಪಾದ ಅರ್ಥಮಾಡಿಕೊಂಡು ತವ
ನೀವು ಸತ್ಯವನ್ನು ತಿಳಿಯದವರೆಂತಲ್ಲ, ನೀವು ಅದನ್ನು ತಿಳಿದಿರು ವದರಿಂದಲೂ ಯಾವ ಸುಳ್ಳೂ ಸತ್ಯಕ್ಕೆ ಸಂಬಂಧವಾದ ದ್ದಲ್ಲವೆಂದು ನೀವು ತಿಳಿದವರಾಗಿರುವದರಿಂದಲೂ ನಿಮಗೆ ಬರೆದೆನು.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ