Cross references
ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.
ಹಗೆಗೆ ತಕ್ಕ ತನ್ನ ಅಕ್ರಮವನ್ನು ಕಂಡುಕೊಳ್ಳುವವರೆಗೆ ಅವನು ತನ್ನನ್ನು ತಾನೇ ಹೊಗಳಿಕೊಳ್ಳುತ್ತಾನೆ.
ನನ್ನನ್ನು ನೋಡುವದಕ್ಕೆ ಅವನು ಬಂದರೆ ವ್ಯರ್ಥ ಮಾತು ಆಡುತ್ತಾನೆ; ಅವನ ಹೃದಯವು ಅವನಿಗೆ ಅಕ್ರಮವನ್ನು ಕೂಡಿಸುತ್ತದೆ; ಅವನು ಹೊರಗೆ ಹೋದಾಗ ಅದನ್ನು ಹೇಳುತ್ತಾನೆ.
ನಿನ್ನ ಕಟ್ಟಳೆಗಳನ್ನು ಧ್ಯಾನ ಮಾಡಿ, ನಿನ್ನ ದಾರಿಗಳನ್ನು ಗಮ ನಿಸುವೆನು.
ದೇವರೇ, ನನ್ನನ್ನು ಶೋಧಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಪರೀಕ್ಷಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.ನನ್ನಲ್ಲಿ ದುಷ್ಟತ ನದ ಮಾರ್ಗ ಉಂಟೇನೋ ನೋಡಿ ನಿತ್ಯವಾದ ಮಾರ್ಗದಲ್ಲಿ ನನ್ನನ್ನು ನಡಿಸು.
ಓ ಕರ್ತನೇ, ಕೆಡುಕರಿಂದ ನನ್ನನ್ನು ಬಿಡಿಸು; ಬಲಾತ್ಕಾರಿಗಳಿಂದ ತಪ್ಪಿಸಿ ನನ್ನನ್ನು ಕಾಪಾಡು.
ನೀತಿವಂತರು ಒಳ್ಳೇಯದನ್ನು ಮಾತ್ರ ಅಪೇಕ್ಷಿಸುತ್ತಾರೆ; ದುಷ್ಟರ ಅಪೇಕ್ಷೆಯು ಕೋಪ ವಾಗಿದೆ.
ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
ಬುದ್ಧಿಹೀನನ ಆಲೋ ಚನೆಯು ಪಾಪ; ಪರಿಹಾಸ್ಯಗಾರನು ಮನುಷ್ಯರಿಗೆ ಅಸಹ್ಯ.
ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
ಜನಗಳ ಪದ್ಧತಿಗಳು ವ್ಯರ್ಥ ವಾಗಿವೆ. ಹೇಗಂದರೆ ಅಡವಿಯಲ್ಲಿ ಒಬ್ಬನು ಮರವನ್ನು ಕಡಿಯುತ್ತಾನೆ; ಅದು ಕೊಡಲಿಯಿಂದ ಬಡಿಗೆಯವನ ಕೈ ಕೆಲಸವೇ
ಅವು ಖರ್ಜೂರ ಮರದಂತೆ ನೆಟ್ಟಗೆ ಇವೆ. ಅವು ಮಾತನಾಡುವದಿಲ್ಲ; ಅವುಗಳನ್ನು ಹೊತ್ತುಕೊಳ್ಳ ತಕ್ಕದ್ದು, ಅವು ನಡೆಯಲಾರವು. ಅವುಗಳಿಗೆ ಭಯ ಪಡಬೇಡಿರಿ. ಅವು ಕೆಟ್ಟದ್ದನ್ನು ಮಾಡಲಾರವು ಇಲ್ಲವೆ ಒಳ್ಳೇದು ಮಾಡುವದು ಸಹ ಅವುಗಳಲ್ಲಿಲ್ಲ.
ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
ತಾವು ಕುಯುಕ್ತಿಯಿಂದ ಯೇಸುವನ್ನು ಹಿಡಿದು ಕೊಲ್ಲಬೇಕೆಂದು ಆಲೋಚನೆ ಮಾಡಿಕೊಂಡರು.
ಆದದರಿಂದ ಕಾಲಕ್ಕೆ ಮೊದಲು ಕರ್ತನು ಬರುವತನಕ ಯಾವದನ್ನೂ ಕುರಿತು ತೀರ್ಪು ಮಾಡಬೇಡಿರಿ; ಆತನು ಕತ್ತಲೆಯ ಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು; ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವ ರಿಂದ ಬರುವದು.
ಆದರೆ ನಾಚಿಕೆಗೆ ಕಾರಣ ವಾಗುವ ಗುಪ್ತಕಾರ್ಯಗಳನ್ನು ನಾವು ಬಿಟ್ಟುಬಿಟ್ಟು ತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯವನ್ನು ಕೆಡಿಸದೆಯೂ ಸತ್ಯವನ್ನು ಪರಿಷ್ಕಾರವಾಗಿ ಬೋಧಿಸುತ್ತಾ ನಾವು ಯೋಗ್ಯರೆಂದು ಪ್ರತಿ ಮನುಷ್ಯನ ಮನಸ್ಸಾಕ್ಷಿಯು ದೇವರ ಮುಂದೆ ಒಪ್ಪಬೇಕಾದ ರೀತಿಯಲ್ಲಿ ನ