ವ್ಯರ್ಥತ್ವದಿಂದ ಹೊಂದಿದ ಐಶ್ವರ್ಯವು ಕಡಿಮೆ ಯಾಗುವದು; ಪ್ರಯಾಸದಿಂದ ಕೂಡಿಸುವವನು ವೃದ್ಧಿ ಗೊಳ್ಳುವನು.
Cross references
ಹಾಳಾದ ಪಟ್ಟಣ ಗಳಲ್ಲಿಯೂ ನಿವಾಸಿಗಳು ಇಲ್ಲದಂಥ ದಿಬ್ಬೆಗಳಾ ಗುವದಕ್ಕೆ ಸಿದ್ಧವಾದಂಥ ಮನೆಗಳಲ್ಲಿಯೂ ವಾಸ ಮಾಡುತ್ತಾನೆ.
ಅವನು ನುಂಗಿದ ಐಶ್ವರ್ಯವನ್ನು ಕಾರಿಬಿಡುವನು; ಅವನ ಹೊಟ್ಟೆಯೊಳಗಿಂದ ದೇವರು ಅದನ್ನು ಹೊರಡ ಮಾಡುವನು.
ದೀನರನ್ನು ಜಜ್ಜಿ ತೊರೆ ದುಬಿಟ್ಟನು; ತಾನು ಕಟ್ಟದ ಮನೆಯನ್ನು ಕೆಡವಿ ಬಿಟ್ಟನು.
ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ
ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
ಕೆಟ್ಟತನದ ಸಂಪತ್ತುಗಳು ಪ್ರಯೋಜನವಿಲ್ಲ; ನೀತಿಯು ಮರಣದಿಂದ ಬಿಡಿಸುತ್ತದೆ.
ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
ಮೊದಲು ಸ್ವಾಸ್ತ್ಯವನ್ನೂ ತ್ವರೆ ಯಾಗಿ ಹೊಂದಬಹುದು; ಅದರ ಕೊನೆಯು ಆಶೀ ರ್ವದಿಸಲ್ಪಡುವದಿಲ್ಲ.
ಸುಳ್ಳಿನ ನಾಲಿಗೆಯಿಂದ ಸಂಪಾ ದಿಸುವ ಸಂಪತ್ತು ಮೃತ್ಯುವನ್ನು ಹುಡುಕುವವರಿಂದ ಬಡಿಯಲ್ಪಟ್ಟ ವ್ಯರ್ಥತ್ವವಾಗಿದೆ.
ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು; ನಿನ್ನ ಮಂದೆಗಳನ್ನು ಚೆನ್ನಾಗಿ ನೋಡಿಕೋ.
ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
ನಂಬಿಗಸ್ತನಾದ ಮನು ಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು; ಆದರೆ ಧನವಂತನಾಗಲು ಆತುರಪಡುವವನು ನಿರ್ದೋಷಿ ಯಾಗಿರುವದಿಲ್ಲ.
ಧನ ವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವ ನಾಗಿದ್ದಾನೆ; ತನಗೆ ಬಡತನವು ಬರುವದನ್ನು ಅವನು ಯೋಚಿಸುವದಿಲ್ಲ.
ಆದರೆ ಕೆಟ್ಟ ಪ್ರಯಾ ಸದಿಂದ ಆ ಆಸ್ತಿಯು ನಾಶವಾಗುತ್ತದೆ; ಅವನು ಒಬ್ಬ ಮಗನನ್ನು ಪಡೆದಿದ್ದರೆ ಅವನ ಕೈಯಲ್ಲಿ ಏನೂ ಇರದು.
ಹೀಗಿರುವದರಿಂದ ಈಗ ಯೆಹೂದದ ಮನುಷ್ಯ ರಿಗೂ ಯೆರೂಸಲೇಮಿನ ನಿವಾಸಿಗಳಿಗೂ ನೀನು ಹೇಳಬೇಕಾದದ್ದೇನಂದರೆ, ಕರ್ತನು ಹೀಗೆ ಹೇಳುತ್ತಾನೆ --ಇಗೋ, ನಾನು ನಿಮಗೆ ವಿರೋಧವಾಗಿ ಕೆಟ್ಟದ್ದನ್ನು ಕಲ್ಪಿಸುತ್ತಾ ಇದ್ದೇನೆ; ನಿಮಗೆ ವಿರೋಧವಾಗಿ ಉಪಾಯವನ್ನು ಆಲೋಚಿಸುತ್ತಾ ಇದ್ದೇನೆ; ನಿಮ್ಮ ನಿಮ್ಮ ಕೆಟ್ಟ ಮಾರ್ಗಗಳನ್ನು ಬಿಟ್ಟು ಹಿಂತಿರುಗಿರಿ, ನಿಮ್ಮ ಮಾರ್ಗಗಳನ್ನೂ ಕ್ರಿಯೆಗಳನ್ನೂ ಒಳ್ಳೇದಾಗ ಮಾಡಿರಿ ಎಂಬದು.
ಇವರೆಲ್ಲರು ಅವನ ಮೇಲೆ ಸಾಮ್ಯವನ್ನೂ ಹಾಸ್ಯದ ಸಾಮತಿಯನ್ನೂ ಎತ್ತಿ--ತನಗಲ್ಲದ್ದನ್ನು ಹೆಚ್ಚಿಸಿಕೊಳ್ಳು ವವನಿಗೆ ಅಯ್ಯೋ! ಅದು ಎಷ್ಟರ ವರೆಗೆ? ತಾನಾಗಿ ತನ್ನ ಮೇಲೆ ಗಟ್ಟಿ ಮಣ್ಣನ್ನು ಹೊತ್ತುಕೊಳ್ಳುವವನಿಗೆ ಅಯ್ಯೋ ಎಂದು ಹೇಳರೋ?
ಧನಿಕರೇ, ನಿಮಗೆ ಬರುವ ದುರ್ದಶೆ ಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ