Cross references
ದಾವೀದನು ತನ್ನ ಸಕಲ ಮಾರ್ಗಗಳಲ್ಲಿ ಬುದ್ಧಿಯುಳ್ಳವನಾಗಿ ವರ್ತಿಸಿದನು.
ಅಲ್ಲಿ ನಿಮ್ಮ ತಂದೆಗಳು ನನ್ನನ್ನು ಶೋಧಿಸಿ, ಪರೀಕ್ಷಿಸಿದರು; ನನ್ನ ಕೆಲಸವನ್ನು ನೋಡಿದರು.
ಕರ್ತನ ಭಯವು ಜ್ಞಾನದ ಮೂಲವು; ಆತನ ಆಜ್ಞೆಗಳನ್ನು ಕೈಕೊಳ್ಳುವವರಿಗೆ ತಿಳುವಳಿಕೆಯಿದೆ; ಆತನ ಸ್ತೋತ್ರವು ಎಂದೆಂದಿಗೂ ನಿಲ್ಲುತ್ತದೆ.
ಹೀಗೆ ನೀನು ದೇವರ ಮುಂದೆಯೂ ಮನುಷ್ಯನ ಮುಂದೆಯೂ ದಯೆಯನ್ನೂ ಒಳ್ಳೆಯ ವಿವೇಕವನ್ನೂ ಪಡೆದುಕೊಳ್ಳುವಿ.
ದುಷ್ಟರ ಮಾರ್ಗವು ಕತ್ತಲೆ ಯಂತಿದೆ. ಅವರು ಯಾವದಕ್ಕೆ ಎಡವಿ ಬೀಳುತ್ತಾರೋ ಅದು ಅವರಿಗೆ ಗೊತ್ತಾಗದು.
ಜ್ಞಾನ ವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ; ನಾಚಿಕೆ ಪಡಿಸುವವನ ಕಡೆಗೆ ಅವನ ರೌದ್ರವಿದೆ.
ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ; ಗದರಿಕೆಯನ್ನು ಹಗೆಮಾಡುವವನು ಸಾಯುವನು.
ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವದು; ನಿನ್ನ ಹಿಂಜಾರಿಕೆಗಳೇ ನಿನ್ನನ್ನು ಗದರಿಸುವವು; ಹೀಗಿ ರುವದರಿಂದ ನೀನು ನಿನ್ನ ದೇವರಾದ ಕರ್ತನನ್ನು ಬಿಟ್ಟದ್ದೂ ನನ್ನ ಭಯವೂ ನಿನ್ನಲ್ಲಿ ಇಲ್ಲದಿರುವದೂ ಕೆಟ್ಟದ್ದೂ ಕಹಿಯಾದದ್ದೂ ಎಂದು ತಿಳುಕೊಂಡು ನೋಡು ಎಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ.
ಯೇಸು ಜ್ಞಾನದಲ್ಲಿಯೂ ದೇಹದ ಬೆಳವಣಿಗೆ ಯಲ್ಲಿಯೂ ದೇವರ ಮತ್ತು ಮನುಷ್ಯರ ದಯೆಯಲ್ಲಿಯೂ ವೃದ್ಧಿಯಾದನು.
ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
ನೀವು ಆಗ ಮಾಡಿ ದವುಗಳಿಂದ ನಿಮಗುಂಟಾದ ಫಲವೇನು? ಈಗ ಅವುಗಳ ವಿಷಯದಲ್ಲಿ ನಿಮಗೆ ನಾಚಿಕೆಯುಂಟಷ್ಟೆ; ಅವುಗಳ ಅಂತ್ಯವು ಮರಣವೇ.